ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ: ತಮ್ಮದೇ ಶಾಸಕರ ಮನೆಗೆ ಮುತ್ತಿಗೆ ಹಾಕುವಂತೆ ಸಚಿವ ಮುನಿಯಪ್ಪ ಕರೆ

ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸುವಂತೆ ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಕರೆ ನೀಡಿದ್ದಾರೆ. ತಮ್ಮದೇ ಸರ್ಕಾರ ಇದ್ದರೂ ಶಾಸಕರ ಮನೆಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದಾರೆ.

ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ: ತಮ್ಮದೇ ಶಾಸಕರ ಮನೆಗೆ ಮುತ್ತಿಗೆ ಹಾಕುವಂತೆ ಸಚಿವ ಮುನಿಯಪ್ಪ ಕರೆ
ಆಹಾರ ಇಲಾಖೆ ಸಚಿವ ಮುನಿಯಪ್ಪ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Nov 06, 2023 | 8:32 PM

ಬೆಂಗಳೂರು, ನವೆಂಬರ್​​​​ 06: ನ್ಯಾ.ಸದಾಶಿವ ಆಯೋಗದ (Justice Sadashiva Commission) ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸುವಂತೆ ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಕರೆ ನೀಡಿದ್ದಾರೆ. ತಮ್ಮದೇ ಸರ್ಕಾರ ಇದ್ದರೂ ಶಾಸಕರ ಮನೆಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದಾರೆ. ನ್ಯಾ.ಸದಾಶಿವ ಆಯೋಗ, ಕಾಂತರಾಜ್ ವರದಿ ವಿಚಾರವಾಗಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸಮುದಾಯದವರ ಹೋರಾಟ ಒಗ್ಗಟ್ಟಿನಲ್ಲಿ ಸಾಗಬೇಕು ಎಂದು ಹೇಳಿದ್ದಾರೆ.

ನಿಮ್ಮ ಕ್ಷೇತ್ರಗಳ ಶಾಸಕರ ಮನೆಗಳಿಗೆ ಮುತ್ತಿಗೆ ಹಾಕಿ. ಹೋರಾಟ ತೀವ್ರಸ್ವರೂಪ ಕಾಣಬೇಕು, ಆಗ ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ. ನಾನು ಸಚಿವನಾಗಿ ಈ ಮಾತು ಹೇಳ್ತಿದ್ದೇನೆ, ಹೀಗೆ ಹೇಳುವ ಸಂದರ್ಭ ಬಂದಿದೆ. ನಾನು ಈಗ ಸಚಿವನಾಗಿದ್ದೇನೆ, ನಾನಿದ್ದ ಮೇಲೆ ಬೇರೆಯವರ ಆಟ ನಡೆಯಲ್ಲ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ ಎಂದರು.

ಇದನ್ನೂ ಓದಿ: ಸರ್ಕಾರಕ್ಕೆ ಸಂಕಷ್ಟ: ಕಾಂತರಾಜ್, ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಡ

ಹಿಂದಿನ ಬಿಜೆಪಿ ಸರ್ಕಾರ ಒಳ ಮೀಸಲಾತಿ ಹಂಚಿಕೆ ಮಾಡಿತು. ಆದರೆ ವೈಜ್ಞಾನಿಕವಾಗಿ ಒಳ ಮೀಸಲಾತಿ ಹಂಚಿಕೆ ಮಾಡಿಲ್ಲ. ಇದು ಸುಪ್ರೀಂಕೋರ್ಟ್​ನಲ್ಲಿ ನಿಲ್ಲೋದಿಲ್ಲ. ಯಾಕೆಂದರೆ ಮೀಸಲಾತಿ ಪ್ರಮಾಣ 50% ಮೀರುವ ಹಾಗಿಲ್ಲ. ಈ ನಿಟ್ಟಿನಲ್ಲಿ ಮುಂದಿನ ದಾರಿ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

ತಮ್ಮ ಸಮುದಾಯದ ನಾಯಕರ ಬಗ್ಗೆ ಶಾಸಕಿ ರೂಪಾ ಶಶಿಧರ್ ಬೇಸರ

ಸಭೆಯಲ್ಲಿ ಶಾಸಕಿ ರೂಪಾ ಶಶಿಧರ್​ ಮಾತನಾಡಿ, ತಮ್ಮ ಸಮುದಾಯದ ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ಸರ್ಕಾರವೇ ಅಧಿಕಾರದಲ್ಲಿದೆ. ಒಳ ಮೀಸಲಾತಿ ಸಮುದಾಯಕ್ಕೆ ಅಗತ್ಯ ಅಂತ ಗೊತ್ತಿದ್ರೂ ಒಟ್ಟಿಗೆ ಇಚ್ಛಾಶಕ್ತಿ ಪ್ರದರ್ಶನ ಆಗುತ್ತಿಲ್ಲ. ಒಳ ಮೀಸಲಾತಿ ಬೇಕು ಅಂತ ನಮ್ಮವರೇ ಒತ್ತಡ ತರಬೇಕಿತ್ತು. ಆ ಕೆಲಸವನ್ನು ನಮ್ಮ ಸರ್ಕಾರದಲ್ಲೇ ಯಾಕೆ ಯಾರೂ ಮಾಡಿಲ್ಲ ಅಂತ ಗೊತ್ತಿಲ್ಲ ಎಂದಿದ್ದಾರೆ.

ಮೀಸಲಾತಿ ತಡೆ ಹಿಡಿಯೋದು ಒಂದು ಜನಾಂಗದ ಹತ್ಯೆ ಮಾಡಿದಂತೆ: ಸದಸ್ಯ ಎಲ್.ಹನುಮಂತಯ್ಯ

ಸಭೆಯಲ್ಲಿ ರಾಜ್ಯಸಭೆ ಸದಸ್ಯ ಎಲ್.ಹನುಮಂತಯ್ಯ ಮಾತನಾಡಿ, ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ತಡೆ ಹಿಡಿಯೋದು ಒಂದು ಜನಾಂಗದ ಹತ್ಯೆ ಮಾಡಿದಂತೆ. ಒಳಮೀಸಲಾತಿ ಬಗ್ಗೆ ಮಾದಿಗ ಸಮುದಾಯದವರು ಹೊರತುಪಡಿಸಿ ಉಳಿದ ಪರಿಶಿಷ್ಟ ಸಮುದಾಯದವರು ಮೌನವಾಗಿದ್ದಾರೆ. ಇದು ನಮ್ಮ ಮುಂದೆ ಇರುವ ಇಕ್ಕಟ್ಟು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ