AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ: ತಮ್ಮದೇ ಶಾಸಕರ ಮನೆಗೆ ಮುತ್ತಿಗೆ ಹಾಕುವಂತೆ ಸಚಿವ ಮುನಿಯಪ್ಪ ಕರೆ

ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸುವಂತೆ ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಕರೆ ನೀಡಿದ್ದಾರೆ. ತಮ್ಮದೇ ಸರ್ಕಾರ ಇದ್ದರೂ ಶಾಸಕರ ಮನೆಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದಾರೆ.

ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ: ತಮ್ಮದೇ ಶಾಸಕರ ಮನೆಗೆ ಮುತ್ತಿಗೆ ಹಾಕುವಂತೆ ಸಚಿವ ಮುನಿಯಪ್ಪ ಕರೆ
ಆಹಾರ ಇಲಾಖೆ ಸಚಿವ ಮುನಿಯಪ್ಪ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 06, 2023 | 8:32 PM

Share

ಬೆಂಗಳೂರು, ನವೆಂಬರ್​​​​ 06: ನ್ಯಾ.ಸದಾಶಿವ ಆಯೋಗದ (Justice Sadashiva Commission) ವರದಿಯಂತೆ ಒಳ ಮೀಸಲಾತಿ ವಿಚಾರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸುವಂತೆ ಮಾದಿಗ ಸಮುದಾಯದ ಮುಖಂಡರಿಗೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಕರೆ ನೀಡಿದ್ದಾರೆ. ತಮ್ಮದೇ ಸರ್ಕಾರ ಇದ್ದರೂ ಶಾಸಕರ ಮನೆಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದಾರೆ. ನ್ಯಾ.ಸದಾಶಿವ ಆಯೋಗ, ಕಾಂತರಾಜ್ ವರದಿ ವಿಚಾರವಾಗಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸಮುದಾಯದವರ ಹೋರಾಟ ಒಗ್ಗಟ್ಟಿನಲ್ಲಿ ಸಾಗಬೇಕು ಎಂದು ಹೇಳಿದ್ದಾರೆ.

ನಿಮ್ಮ ಕ್ಷೇತ್ರಗಳ ಶಾಸಕರ ಮನೆಗಳಿಗೆ ಮುತ್ತಿಗೆ ಹಾಕಿ. ಹೋರಾಟ ತೀವ್ರಸ್ವರೂಪ ಕಾಣಬೇಕು, ಆಗ ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ. ನಾನು ಸಚಿವನಾಗಿ ಈ ಮಾತು ಹೇಳ್ತಿದ್ದೇನೆ, ಹೀಗೆ ಹೇಳುವ ಸಂದರ್ಭ ಬಂದಿದೆ. ನಾನು ಈಗ ಸಚಿವನಾಗಿದ್ದೇನೆ, ನಾನಿದ್ದ ಮೇಲೆ ಬೇರೆಯವರ ಆಟ ನಡೆಯಲ್ಲ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ ಎಂದರು.

ಇದನ್ನೂ ಓದಿ: ಸರ್ಕಾರಕ್ಕೆ ಸಂಕಷ್ಟ: ಕಾಂತರಾಜ್, ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಡ

ಹಿಂದಿನ ಬಿಜೆಪಿ ಸರ್ಕಾರ ಒಳ ಮೀಸಲಾತಿ ಹಂಚಿಕೆ ಮಾಡಿತು. ಆದರೆ ವೈಜ್ಞಾನಿಕವಾಗಿ ಒಳ ಮೀಸಲಾತಿ ಹಂಚಿಕೆ ಮಾಡಿಲ್ಲ. ಇದು ಸುಪ್ರೀಂಕೋರ್ಟ್​ನಲ್ಲಿ ನಿಲ್ಲೋದಿಲ್ಲ. ಯಾಕೆಂದರೆ ಮೀಸಲಾತಿ ಪ್ರಮಾಣ 50% ಮೀರುವ ಹಾಗಿಲ್ಲ. ಈ ನಿಟ್ಟಿನಲ್ಲಿ ಮುಂದಿನ ದಾರಿ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

ತಮ್ಮ ಸಮುದಾಯದ ನಾಯಕರ ಬಗ್ಗೆ ಶಾಸಕಿ ರೂಪಾ ಶಶಿಧರ್ ಬೇಸರ

ಸಭೆಯಲ್ಲಿ ಶಾಸಕಿ ರೂಪಾ ಶಶಿಧರ್​ ಮಾತನಾಡಿ, ತಮ್ಮ ಸಮುದಾಯದ ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ಸರ್ಕಾರವೇ ಅಧಿಕಾರದಲ್ಲಿದೆ. ಒಳ ಮೀಸಲಾತಿ ಸಮುದಾಯಕ್ಕೆ ಅಗತ್ಯ ಅಂತ ಗೊತ್ತಿದ್ರೂ ಒಟ್ಟಿಗೆ ಇಚ್ಛಾಶಕ್ತಿ ಪ್ರದರ್ಶನ ಆಗುತ್ತಿಲ್ಲ. ಒಳ ಮೀಸಲಾತಿ ಬೇಕು ಅಂತ ನಮ್ಮವರೇ ಒತ್ತಡ ತರಬೇಕಿತ್ತು. ಆ ಕೆಲಸವನ್ನು ನಮ್ಮ ಸರ್ಕಾರದಲ್ಲೇ ಯಾಕೆ ಯಾರೂ ಮಾಡಿಲ್ಲ ಅಂತ ಗೊತ್ತಿಲ್ಲ ಎಂದಿದ್ದಾರೆ.

ಮೀಸಲಾತಿ ತಡೆ ಹಿಡಿಯೋದು ಒಂದು ಜನಾಂಗದ ಹತ್ಯೆ ಮಾಡಿದಂತೆ: ಸದಸ್ಯ ಎಲ್.ಹನುಮಂತಯ್ಯ

ಸಭೆಯಲ್ಲಿ ರಾಜ್ಯಸಭೆ ಸದಸ್ಯ ಎಲ್.ಹನುಮಂತಯ್ಯ ಮಾತನಾಡಿ, ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ತಡೆ ಹಿಡಿಯೋದು ಒಂದು ಜನಾಂಗದ ಹತ್ಯೆ ಮಾಡಿದಂತೆ. ಒಳಮೀಸಲಾತಿ ಬಗ್ಗೆ ಮಾದಿಗ ಸಮುದಾಯದವರು ಹೊರತುಪಡಿಸಿ ಉಳಿದ ಪರಿಶಿಷ್ಟ ಸಮುದಾಯದವರು ಮೌನವಾಗಿದ್ದಾರೆ. ಇದು ನಮ್ಮ ಮುಂದೆ ಇರುವ ಇಕ್ಕಟ್ಟು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ