AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಗ್ರೀನ್ ಹೈಡ್ರೋಜನ್​ ಹಬ್ ಆಗಬೇಕಿದೆ: ಪ್ರಲ್ಹಾದ್ ಜೋಶಿ

ಭೂಮಿಯ ಸುರಕ್ಷತೆ ವಿಚಾರದಲ್ಲಿ ಭಾರತ ಜಾಗತಿಕ ನಾಯಕನಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಗ್ರೀನ್​ ಹೈಡ್ರೋಜನ್​ ಮಿಷನ್​​​​ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳ ಜತೆ ಕರ್ನಾಟಕ ರಾಜಕೀಯಕ್ಕೆ ಸಂಬಂಧಿಸಿಯೂ ಮಾತನಾಡಿದರು.

ಭಾರತ ಗ್ರೀನ್ ಹೈಡ್ರೋಜನ್​ ಹಬ್ ಆಗಬೇಕಿದೆ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
ಹರೀಶ್ ಜಿ.ಆರ್​.
| Edited By: |

Updated on: Sep 04, 2024 | 12:46 PM

Share

ನವದೆಹಲಿ, ಸೆಪ್ಟೆಂಬರ್ 4: ಭಾರತ ಗ್ರೀನ್ ಹೈಡ್ರೋಜನ್​ ಹಬ್ ಆಗಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ದೆಹಲಿಯಲ್ಲಿ ಸೆಪ್ಟೆಂಬರ್ 11ರಿಂದ 13ರ ವರೆಗೆ ನಡೆಯಲಿರುವ ಗ್ರೀನ್​ ಹೈಡ್ರೋಜನ್​ ಮಿಷನ್​​​​ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗ್ರೀನ್ ಹೈಡ್ರೋಜನ್​ ಹಬ್​​ನಿಂದ ಸುಸ್ಥಿರ ಭವಿಷ್ಯ ನಿರ್ಮಾಣ ಸಾಧ್ಯ. ಭೂಮಂಡಲ ಸುರಕ್ಷತೆ ವಿಚಾರದಲ್ಲಿ ಭಾರತ ಜಾಗತಿಕ ನಾಯಕನಾಗುತ್ತಿದೆ. ಅಭಿವೃದ್ಧಿ ಹೊಂದಿದ ದೇಶಗಳಂತೆ ಭಾರತವೂ ಹೊಸ ಆವಿಷ್ಕಾರ ಶುರುಮಾಡಿದೆ ಎಂದರು.

ಗ್ರೀನ್​ ಹೈಡ್ರೋಜನ್​ ಮಿಷನ್​​​​ ಅಂತಾರಾಷ್ಟ್ರೀಯ ಸಮ್ಮೇಳನದ ಉತ್ಪನ್ನ ಮತ್ತು ತಂತ್ರಜ್ಞಾನದ ಪ್ರದರ್ಶನದಲ್ಲಿ 120 ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. 150ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಭಾಷಿಕರು ಭಾಗವಹಿಸಲಿದ್ದಾರೆ.

ಗ್ರೀನ್​ ಹೈಡ್ರೋಜನ್ ಸಂಬಂಧ ಯುರೋಪಿಯನ್ ಯೂನಿಯನ್, ಆಸ್ಟ್ರೇಲಿಯಾ, ಸಿಂಗಾಪುರ್ ಮತ್ತು ನೆದರ್ಲ್ಯಾಂಡ್ಸ್ ಬಗ್ಗೆ ಅಧಿವೇಶನಗಳಲ್ಲಿ ಚರ್ಚೆ ನಡೆಯಲಿದೆ.

ಕಾರ್ಯಕ್ರಮವನ್ನು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ಭಾರತ ಸರ್ಕಾರದ ಪ್ರಧಾನ ವಿಜ್ಞಾನಿಗಳ ಕಚೇರಿಯ ಸಹಯೋಗದೊಂದಿಗೆ ಆಯೋಜಿಸುತ್ತಿದೆ.

ಕಾಂಗ್ರೆಸ್ ಜತೆಗಿದ್ದಾಗ ಕತ್ತೆ ಕಾಯ್ತಿದ್ದರಾ: ಜೋಶಿ ಪ್ರಶ್ನೆ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲಾ ವಿಚಾರಗಳನ್ನು ರಾಜ್ಯಪಾಲರು ಪರಿಶೀಲನೆ ಮಾಡುತ್ತಾರೆ ಎಂದರು. ನಾನು ಈಗಾಗಲೇ ಕೇಳಿರುವ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಲಿ. ಕುಮಾರಸ್ವಾಮಿ ಪ್ರಕರಣ ನಡೆದಿರೋದು ಯಾವಾಗ? 2006ರಲ್ಲಿ ಹೆಚ್​​ಡಿಕೆ ಪ್ರಕರಣ ನಡೆದಿದೆ ಎಂದರು. 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿತ್ತು. 2018ರಲ್ಲಿ ಕುಮಾರಸ್ವಾಮಿ ಕೈ ಕಾಲು ಹಿಡಿದು ಸಿಎಂ ಮಾಡಿದ್ದರು. ಆಗ ಯಾಕೆ ಹೆಚ್​ಡಿಕೆ ವಿರುದ್ಧ ಪ್ರಾಸಿಕ್ಯೂಷನ್​​ಗೆ ಕೊಡಲಿಲ್ಲ. 8 ವರ್ಷಗಳ ಕಾಲ ಏನೂ ಮಾಡದೆ ಈಗ ಡ್ರಾಮಾ ಮಾಡ್ತಿದ್ದಾರೆ ಎಂದು ಜೋಶಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕೆಐಎಡಿಬಿ ಅಕ್ರಮ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಮಾಜಿ ಸಚಿವ ಮುರುಗೇಶ್​​ ನಿರಾಣಿ ಮೇಲಿನ ಆರೋಪ ಹಳೆಯದ್ದು. ಛಲವಾದಿ ನಾರಾಯಣಸ್ವಾಮಿ ಮೇಲಿನ ಆರೋಪ 2004ರದ್ದು. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್​ನವರು ಏನು ಮಾಡ್ತಿದ್ದರು? ಕಾಂಗ್ರೆಸ್​ನವರ ಡ್ರಾಮಾವನ್ನು ಜನರು ಅರ್ಥ ಮಾಡಿಕೊಳ್ತಾರೆ ಎಂದು ಜೋಶಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್