AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Day of Forests 2021| ನೈಸರ್ಗಿಕ ಸಂಪತ್ತು ಉಳಿಸಲು ಪ್ರತ್ಯೇಕ ಹಣ ಮೀಸಲಿಟ್ಟಿದ್ದೇವೆ: ಬಿ.ಎಸ್​.ಯಡಿಯೂರಪ್ಪ

ಈಶಾ ಫೌಂಡೇಷನ್‌ನಿಂದ ಕಾವೇರಿ ಕೂಗು ಅಭಿಯಾನ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಅರಣ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

International Day of Forests 2021| ನೈಸರ್ಗಿಕ ಸಂಪತ್ತು ಉಳಿಸಲು ಪ್ರತ್ಯೇಕ ಹಣ ಮೀಸಲಿಟ್ಟಿದ್ದೇವೆ: ಬಿ.ಎಸ್​.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Follow us
shruti hegde
|

Updated on:Mar 22, 2021 | 7:49 AM

ಬೆಂಗಳೂರು: ಈಶಾ ಫೌಂಡೇಷನ್‌ನಿಂದ ಕಾವೇರಿ ಕೂಗು ಅಭಿಯಾನ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಅರಣ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಸೇರಿ ಹಲವರು ಭಾಗಿಯಾದ್ದರು. ಕಾರ್ಯಕ್ರಮದಲ್ಲಿ ಪರಿಸರ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ, ಈಶಾ ಫೌಂಡೇಶನ್​ ಸದ್ಗುರು ಜಗ್ಗಿ ವಾಸುದೇವ್ ಅವರಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಾತನಾಡಿ ಅರಣ್ಯ ಉಳಿಸುವ ನಿಟ್ಟಿನಲ್ಲಿ ಸಸ್ಯ ಸಂಪತ್ತು ಮಹತ್ವ ಪಡೆದಿದೆ. ನೈಸರ್ಗಿಕ ಸಂಪತ್ತು ಉಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನೈಸರ್ಗಿಕ ಸಂಪತ್ತು ಉಳಿಸಲು ಪ್ರತ್ಯೇಕ ಹಣ ಮೀಸಲಿಟ್ಟಿದ್ದೇವೆ. 2 ಅರಣ್ಯ ಪ್ರದೇಶದ ನಡುವೆ ಕಾರಿಡಾರ್ ರಸ್ತೆ ನಿರ್ಮಾಣ ಹಾಗೂ ಸ್ಯಾಟಲೈಟ್ ಮೂಲಕ ಅರಣ್ಯ ಪ್ರದೇಶ ನಕ್ಷೆ ತಯಾರಿಸಿ, ವೈಜ್ಞಾನಿಕ ಪದ್ಧತಿ ಅಳವಡಿಸಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು.

ಇನ್ನು, ಸಂಸ್ಕೃತಿ, ಪರಂಪರೆ ರಕ್ಷಣೆಗೆ 2,900 ಕೋಟಿ ರೂಪಾಯಿ ಮೀಸಲು ಹಾಗೂ 9 ಜಿಲ್ಲೆಗಳಲ್ಲಿ ರೈತರಿಗೆ ಬೀಜಗಳನ್ನು ನೀಡಲಾಗುವುದು. ಹಣ್ಣು ಬಿಡುವ ಮರಗಳನ್ನ ಹೆಚ್ಚು ಬೆಳೆಸಲಾಗುವುದು ಎಂದು ಮಾತನಾಡಿದರು. ಉತ್ತರ ಕನ್ನಡದಲ್ಲಿ ಅಪ್ಸರಕೊಂಡ ಅಭಯಾರಣ್ಯ ಪ್ರದೇಶವನ್ನು ಶೀಘ್ರದಲ್ಲಿ ಉದ್ಘಾಟಿಸುತ್ತೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ, ಜೊತೆಗೆ ಅರಣ್ಯ ಮತ್ತು ರೈತರ ಭೂ ಪ್ರದೇಶಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದ ಹೇಳಿದರು.

ಬೆಂಗಳೂರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಜಾವಡೇಕರ್ ನಮ್ಮ ದೇಶದ ಹಸಿರು ನಗರಗಳಲ್ಲಿ ಬೆಂಗಳೂರು ಸಹ ಒಂದು. ಗಾರ್ಡನ್ ಸಿಟಿ ಬೆಂಗಳೂರಲ್ಲಿ ಉಳಿದುಕೊಂಡರೆ ಬೆಳಿಗ್ಗೆ ಕಬ್ಬನ್ ಪಾರ್ಕ್​ನಲ್ಲಿ ವಾಯುವಿಹಾರ ಮಾಡುತ್ತೇನೆ. ಕಬ್ಬನ್ ಪಾರ್ಕ್​ನಲ್ಲಿ ವಾಕಿಂಗ್​ ಮಾಡುತ್ತಿರುವಾಗ ನಗರಗಳಲ್ಲಿ ಅರಣ್ಯ ಎಷ್ಟು ಮುಖ್ಯ ಎಂದೆನಿಸುತ್ತಿತ್ತು. ದೇಶದ 200 ನಗರಗಳಲ್ಲಿ ನಗರ ಅರಣ್ಯೀಕರಣ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕದಲ್ಲಿಯೂ ಸಮೃದ್ಧವಾದ ಅರಣ್ಯ ಪ್ರದೇಶವಿದೆ ಎಂದು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.

ಇದನ್ನೂ ಓದಿ: ಆಧುನಿಕ ತಂತ್ರಜ್ಞಾನದ ಅಳವಡಿಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ -ಉಲ್ಲಾಸ ಕಾರಂತ

ಅರಣ್ಯ ಅಭಿವೃದ್ಧಿಗೆ ಅನುದಾನ ನೀಡಲು ಸಿದ್ಧ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Published On - 3:20 pm, Sun, 21 March 21

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ