ಇಂದಿನಿಂದ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ವಿಮಾನಗಳ ಹಾರಾಟ ಶುರು, ಏನೆಲ್ಲ ವಿಶೇಷತೆಗಳಿವೆ ಗೊತ್ತಾ?

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿರುವ ಟರ್ಮಿನಲ್‌-2 ಇನ್ನು ಮುಂದೆ ಸಂಪೂರ್ಣ ಅಂತಾರಾಷ್ಟ್ರೀಯ ವಿಮಾನ ಸೇವೆಗೆ ಮೀಸಲಿಡಲಾಗಿದ್ದು, ಅದು ಇಂದಿನಿಂದ ಅಧಿಕೃತವಾಗಿ ಟರ್ಮಿನಲ್‌-2ನಿಂದ ವಿಮಾನಗಳು ಹಾರಾಟ ಮಾಡಲಿವೆ. ಆಗಮನ ಹಾಗೂ ನಿರ್ಗಮನ ಕಾರ್ಯಾಚರಣೆಯೂ ಟರ್ಮಿನಲ್‌-2 ರಿಂದಲೇ ನಡೆಯಲಿದೆ. ಇನ್ನು ಟರ್ಮಿನಲ್‌-2ನ ವಿಶೇಷತೆಗಳೇನು? ಏನೆಲ್ಲಾ ಸೌಲಭ್ಯಗಳನ್ನು ಹೊಂದಿದೆ ಎನ್ನುವ ಸಂಕ್ಷಿಪ್ತ ವಿವರ ಇಲ್ಲಿದೆ.

ಇಂದಿನಿಂದ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ವಿಮಾನಗಳ ಹಾರಾಟ ಶುರು, ಏನೆಲ್ಲ ವಿಶೇಷತೆಗಳಿವೆ ಗೊತ್ತಾ?
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2
Follow us
| Updated By: ರಮೇಶ್ ಬಿ. ಜವಳಗೇರಾ

Updated on: Sep 12, 2023 | 9:38 AM

ಬೆಂಗಳೂರು, (ಸೆಪ್ಟೆಂಬರ್ 12): ಬಹು ನಿರೀಕ್ಷಿತ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ (Kempegowda International airport) ಟರ್ಮಿನಲ್-2ನಿಂದ (Terminal 2)  ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ. ಕೆಂಪೇಗೌಡ ಏರ್ಪೋಟ್ ಎಂಡಿ ಹರಿಮಾರನ್ ಅವರು ಇಂದಿನಿಂದ (ಸೆಪ್ಟೆಂಬರ್ 12) ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಿದ್ದಾರೆ. ಇನ್ನು ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿಯಲಿದೆ. ಇನ್ನು ಹಳೆಯ ಟರ್ಮಿನಲ್-1 ದೇಶಿಯ ವಿಮಾನಗಳ‌ ಹಾರಾಟಕ್ಕೆ ಮೀಸಲಿಡಲಾಗಿದೆ.

ಅತ್ಯಾಧುನಿಕ ತಂತ್ರಜ್ಞಾನವುಳ್ಳ ಟರ್ಮಿನಲ್-2

ವಿವಿಧ ಜಾತಿಯ ಸಸ್ಯಗಳು ಮತ್ತು ಮರಗಳಿಂದ ಸುತ್ತುವರಿದಿರುವ ಈ ಟರ್ಮಿನಲ್ ಅನ್ನು ಟರ್ಮಿನಲ್ ಇನ್​ ದಿ ಗಾರ್ಡನ್ ಎಂದು ಕರೆಯಲಾಗುತ್ತಿದೆ. ಈ ಟರ್ಮಿನಲ್​​​ನಲ್ಲಿ 180 ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಜಾತಿಯ ಸಸ್ಯಗಳಿವೆ. 3,600 ಕ್ಕೂ ಹೆಚ್ಚು ಸಸ್ಯ ಪ್ರಭೇದಗಳು, ಬಿದಿರು, 620 ಸ್ಥಳೀಯ ಸಸ್ಯಗಳು, 7,700 ಕಸಿ ಮರಗಳು, 96 ಕಮಲ ಮತ್ತು ಇನ್ನೂ ಹೆಚ್ಚಿನ ಸಸ್ಯಗಳಿವೆ.

10 ಸಾವಿರ ಚದರ‌ ಮೀಟರ್ ಹಸಿರು ಗೋಡೆ, ಕೃತಕ ವಾಟರ್ ಫಾಲ್ಸ್​ ಜೊತೆ ನೂರಾರು ವರ್ಷಗಳ ಹಳೆಯ ಮರವನ್ನು ಟರ್ಮಿನಲ್-2 ಹೊಂದಿದೆ. ಇನ್ನು 2 ಲಕ್ಷ 55 ಸಾವಿರದ 661 ಚದರ್ ಮೀಟರ್​ನ ನೂತನ ಟರ್ಮಿನಲ್-2ನಲ್ಲಿ ಪ್ರತ್ಯೇಕ ವಿಮಾನ ಆಗಮ‌ನ ಹಾಗೂ ನಿರ್ಗಮನದ 2 ಹಂತಗಳನ್ನು ಹೊಂದಿದ್ದು, 5 ಜಿ ನೆಟ್ವರ್ಕ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನದ ಚೆಕ್ ಇನ್, ಬ್ಯಾಗೇಜ್ ಡ್ರಾಪ್ ಕೌಂಟರ್ ವ್ಯವಸ್ಥೆ ಇದೆ.

ಕಳೆದ ವರ್ಷ ನವೆಂಬರ್​​ನಲ್ಲಿ ಪ್ರಧಾನಿ ಮೋದಿ 5 ಸಾವಿರ ಕೋಟಿ ‌ವೆಚ್ಚದಲ್ಲಿ‌ ನಿರ್ಮಾಣವಾಗಿರುವ ಗಾರ್ಡನ್ ಟರ್ಮಿನಲ್ 2 ಉದ್ಘಾಟಿಸಿದ್ದ,. ಆಗಸ್ಟ್‌ 31 ರಿಂದಲೇ ಟರ್ಮಿನಲ್‌-2ರಿಂದ ಅಂತರರಾಷ್ಟ್ರೀಯ ವಿಮಾನಯಾನ ಅಧಿಕೃತವಾಗಿ ಪ್ರಾರಂಭವಾಗಬೇಕಿತ್ತು. ಆದರೆ, ತಾಂತ್ರಿಕ ಅಡೆತಡೆ ಹಾಗೂ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ನಿರ್ವಹಣಾ ಮಂಡಳಿ ಮುಂದೂಡಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ