AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಸಾಕ್ಷರತೆ ಇರುವ ರಾಜ್ಯದ ಈ 5 ಜಿಲ್ಲೆಗಳಲ್ಲಿ ವಿವಿಧ ಯೋಜನೆ; 2030ರೊಳಗೆ ಶೇಕಡಾ 100 ಸಾಕ್ಷರತೆಯ ಗುರಿ

1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರವನ್ನು ಈವರೆಗೂ ಮಾಡಿಲ್ಲ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

TV9 Web
| Updated By: guruganesh bhat|

Updated on: Sep 14, 2021 | 3:40 PM

Share

ಬೆಂಗಳೂರು: ರಾಜ್ಯದಲ್ಲಿ ರಾಯಚೂರು, ಯಾದಗಿರಿ, ಚಾಮರಾಜನಗರ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳನ್ನು ನೀತಿ ಆಯೋಗ ಕಡಿಮೆ ಸಾಕ್ಷರತೆ ಜಿಲ್ಲೆ ಎಂದು ಗುರುತಿಸಿದೆ. ಈ ಜಿಲ್ಲೆಗಳಲ್ಲಿ ಸಾಕ್ಷರತೆ ಹೆಚ್ಚಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. 1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರವನ್ನು ಈವರೆಗೂ ಮಾಡಿಲ್ಲ. ಸದ್ಯ ನಡೆಯುತ್ತಿರುವ ಸದನ‌ ಮುಗಿಯುವವರೆಗೂ ಯಾವುದೇ ತೀರ್ಮಾನ ಮಾಡುವುದಿಲ್ಲ. ಕೊವಿಡ್ ಮೂರನೇ ಅಲೆ ತಡೆಯುವ ಬಗ್ಗೆ ಸರ್ಕಾರ ಗಮನಹರಿಸುತ್ತಿದೆ. ಮಕ್ಕಳ‌ ಮೇಲೆ‌ ಪರಿಣಾಮ ಬೀರಬಹುದಾದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊವಿಡ್ ಟಾಸ್ಕ್​ಫೋರ್ಸ್ ಸಹ ಗಂಭೀರ ಅಧ್ಯಯನ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದರು.

55ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಅವರು, 2021-22ನೇ ಸಾಲಿನ ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಕ್ಷರತಾ ಸಪ್ತಾಹಕ್ಕೆ ಚಾಲನೆ ನೀಡಿದರು.

ಹಮ್ಮಿಕೊಳ್ಳಲಾದ ಯೋಜನೆಗಳು ಈ ಐದು ಜಿಲ್ಲೆಗಳ ಒಟ್ಟು 24 ತಾಲೂಕಿನ 219 ಗ್ರಾಮ ಪಂಚಾಯತ್ ಹಾಗೂ 19 ನಗರ-ಪಟ್ಟಣ ಪ್ರದೇಶಗಳಿವೆ 1)  ಇದರಲ್ಲಿ 15 ವರ್ಷದ ಮೇಲ್ಪಟ್ಟ ಹಾಗೂ 50 ವರ್ಷದ ಒಳಗಿನ ವಯಸ್ಸಿನ ವರಿಗೆ ಶಿಕ್ಷಣ ನೀಡಲಾಗುತ್ತದೆ 2)  20 ಜನರಿಗೆ ಓರ್ವ ಬೋಧಕರು ಕಲಿಕಾ ಕೇಂದ್ರದಲ್ಲಿ ಇರುತ್ತಾರೆ 3)  120 ಗಂಟೆಗಳು, 4 ತಿಂಗಳ ಅವಧಿಯಲ್ಲಿ ಬೆಳಗ್ಗೆ ಮಧ್ಯಾಹ್ನ ಸಂಜೆ ವೇಳೆಯಲ್ಲಿ ಕಲಿಕೆ 4)  ಬಾಳಿನ ಬೆಳಕು ಹಾಗೂ ಬರೆಯೋಣ ಬನ್ನಿ ಎಂಬ ಪಠ್ಯ ಪುಸ್ತಕಗಳೊಂದಿಗೆ ಕಲಿಕೆ 5)  2030 ರವರೆಗೆ ಶೇಕಡಾ 100ರಷ್ಟು ಸಾಕ್ಷರತೆಗೆ ಸರ್ಕಾರ ಗುರಿ ಇಟ್ಟುಕೊಂಡಿದೆ.

ಇದನ್ನೂ ಓದಿ:

ಕೇರಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸದೇ ಇರುವುದಕ್ಕೆ ಕಾರಣ ಅಲ್ಲಿ ಶೇ.90 ಸಾಕ್ಷರತೆ ಇದೆ: ಒ.ರಾಜಗೋಪಾಲ್ 

ಓದಿನ ಹುಚ್ಚು ಹಿಡಿಸಲೆಂದೇ ಈ ರಸ್ತೆಗಳ ಬದಿಯಲ್ಲಿದೆ ಉಚಿತ ಪುಸ್ತಕದ ಬಾಕ್ಸ್​; ಕೇರಳದಲ್ಲಿದೆ ಪುಸ್ತಕ ಗ್ರಾಮ!

(International Literacy Day 2021 Karnataka Education Minister says Will make full literate by 2030)

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ