ಕಡಿಮೆ ಸಾಕ್ಷರತೆ ಇರುವ ರಾಜ್ಯದ ಈ 5 ಜಿಲ್ಲೆಗಳಲ್ಲಿ ವಿವಿಧ ಯೋಜನೆ; 2030ರೊಳಗೆ ಶೇಕಡಾ 100 ಸಾಕ್ಷರತೆಯ ಗುರಿ

1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರವನ್ನು ಈವರೆಗೂ ಮಾಡಿಲ್ಲ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

Follow us
| Updated By: guruganesh bhat

Updated on: Sep 14, 2021 | 3:40 PM

ಬೆಂಗಳೂರು: ರಾಜ್ಯದಲ್ಲಿ ರಾಯಚೂರು, ಯಾದಗಿರಿ, ಚಾಮರಾಜನಗರ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳನ್ನು ನೀತಿ ಆಯೋಗ ಕಡಿಮೆ ಸಾಕ್ಷರತೆ ಜಿಲ್ಲೆ ಎಂದು ಗುರುತಿಸಿದೆ. ಈ ಜಿಲ್ಲೆಗಳಲ್ಲಿ ಸಾಕ್ಷರತೆ ಹೆಚ್ಚಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. 1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರವನ್ನು ಈವರೆಗೂ ಮಾಡಿಲ್ಲ. ಸದ್ಯ ನಡೆಯುತ್ತಿರುವ ಸದನ‌ ಮುಗಿಯುವವರೆಗೂ ಯಾವುದೇ ತೀರ್ಮಾನ ಮಾಡುವುದಿಲ್ಲ. ಕೊವಿಡ್ ಮೂರನೇ ಅಲೆ ತಡೆಯುವ ಬಗ್ಗೆ ಸರ್ಕಾರ ಗಮನಹರಿಸುತ್ತಿದೆ. ಮಕ್ಕಳ‌ ಮೇಲೆ‌ ಪರಿಣಾಮ ಬೀರಬಹುದಾದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊವಿಡ್ ಟಾಸ್ಕ್​ಫೋರ್ಸ್ ಸಹ ಗಂಭೀರ ಅಧ್ಯಯನ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದರು.

55ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಅವರು, 2021-22ನೇ ಸಾಲಿನ ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಕ್ಷರತಾ ಸಪ್ತಾಹಕ್ಕೆ ಚಾಲನೆ ನೀಡಿದರು.

ಹಮ್ಮಿಕೊಳ್ಳಲಾದ ಯೋಜನೆಗಳು ಈ ಐದು ಜಿಲ್ಲೆಗಳ ಒಟ್ಟು 24 ತಾಲೂಕಿನ 219 ಗ್ರಾಮ ಪಂಚಾಯತ್ ಹಾಗೂ 19 ನಗರ-ಪಟ್ಟಣ ಪ್ರದೇಶಗಳಿವೆ 1)  ಇದರಲ್ಲಿ 15 ವರ್ಷದ ಮೇಲ್ಪಟ್ಟ ಹಾಗೂ 50 ವರ್ಷದ ಒಳಗಿನ ವಯಸ್ಸಿನ ವರಿಗೆ ಶಿಕ್ಷಣ ನೀಡಲಾಗುತ್ತದೆ 2)  20 ಜನರಿಗೆ ಓರ್ವ ಬೋಧಕರು ಕಲಿಕಾ ಕೇಂದ್ರದಲ್ಲಿ ಇರುತ್ತಾರೆ 3)  120 ಗಂಟೆಗಳು, 4 ತಿಂಗಳ ಅವಧಿಯಲ್ಲಿ ಬೆಳಗ್ಗೆ ಮಧ್ಯಾಹ್ನ ಸಂಜೆ ವೇಳೆಯಲ್ಲಿ ಕಲಿಕೆ 4)  ಬಾಳಿನ ಬೆಳಕು ಹಾಗೂ ಬರೆಯೋಣ ಬನ್ನಿ ಎಂಬ ಪಠ್ಯ ಪುಸ್ತಕಗಳೊಂದಿಗೆ ಕಲಿಕೆ 5)  2030 ರವರೆಗೆ ಶೇಕಡಾ 100ರಷ್ಟು ಸಾಕ್ಷರತೆಗೆ ಸರ್ಕಾರ ಗುರಿ ಇಟ್ಟುಕೊಂಡಿದೆ.

ಇದನ್ನೂ ಓದಿ:

ಕೇರಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸದೇ ಇರುವುದಕ್ಕೆ ಕಾರಣ ಅಲ್ಲಿ ಶೇ.90 ಸಾಕ್ಷರತೆ ಇದೆ: ಒ.ರಾಜಗೋಪಾಲ್ 

ಓದಿನ ಹುಚ್ಚು ಹಿಡಿಸಲೆಂದೇ ಈ ರಸ್ತೆಗಳ ಬದಿಯಲ್ಲಿದೆ ಉಚಿತ ಪುಸ್ತಕದ ಬಾಕ್ಸ್​; ಕೇರಳದಲ್ಲಿದೆ ಪುಸ್ತಕ ಗ್ರಾಮ!

(International Literacy Day 2021 Karnataka Education Minister says Will make full literate by 2030)

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್