AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಸಾಕ್ಷರತೆ ಇರುವ ರಾಜ್ಯದ ಈ 5 ಜಿಲ್ಲೆಗಳಲ್ಲಿ ವಿವಿಧ ಯೋಜನೆ; 2030ರೊಳಗೆ ಶೇಕಡಾ 100 ಸಾಕ್ಷರತೆಯ ಗುರಿ

1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರವನ್ನು ಈವರೆಗೂ ಮಾಡಿಲ್ಲ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

TV9 Web
| Edited By: |

Updated on: Sep 14, 2021 | 3:40 PM

Share

ಬೆಂಗಳೂರು: ರಾಜ್ಯದಲ್ಲಿ ರಾಯಚೂರು, ಯಾದಗಿರಿ, ಚಾಮರಾಜನಗರ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳನ್ನು ನೀತಿ ಆಯೋಗ ಕಡಿಮೆ ಸಾಕ್ಷರತೆ ಜಿಲ್ಲೆ ಎಂದು ಗುರುತಿಸಿದೆ. ಈ ಜಿಲ್ಲೆಗಳಲ್ಲಿ ಸಾಕ್ಷರತೆ ಹೆಚ್ಚಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. 1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರವನ್ನು ಈವರೆಗೂ ಮಾಡಿಲ್ಲ. ಸದ್ಯ ನಡೆಯುತ್ತಿರುವ ಸದನ‌ ಮುಗಿಯುವವರೆಗೂ ಯಾವುದೇ ತೀರ್ಮಾನ ಮಾಡುವುದಿಲ್ಲ. ಕೊವಿಡ್ ಮೂರನೇ ಅಲೆ ತಡೆಯುವ ಬಗ್ಗೆ ಸರ್ಕಾರ ಗಮನಹರಿಸುತ್ತಿದೆ. ಮಕ್ಕಳ‌ ಮೇಲೆ‌ ಪರಿಣಾಮ ಬೀರಬಹುದಾದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊವಿಡ್ ಟಾಸ್ಕ್​ಫೋರ್ಸ್ ಸಹ ಗಂಭೀರ ಅಧ್ಯಯನ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದರು.

55ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಅವರು, 2021-22ನೇ ಸಾಲಿನ ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಕ್ಷರತಾ ಸಪ್ತಾಹಕ್ಕೆ ಚಾಲನೆ ನೀಡಿದರು.

ಹಮ್ಮಿಕೊಳ್ಳಲಾದ ಯೋಜನೆಗಳು ಈ ಐದು ಜಿಲ್ಲೆಗಳ ಒಟ್ಟು 24 ತಾಲೂಕಿನ 219 ಗ್ರಾಮ ಪಂಚಾಯತ್ ಹಾಗೂ 19 ನಗರ-ಪಟ್ಟಣ ಪ್ರದೇಶಗಳಿವೆ 1)  ಇದರಲ್ಲಿ 15 ವರ್ಷದ ಮೇಲ್ಪಟ್ಟ ಹಾಗೂ 50 ವರ್ಷದ ಒಳಗಿನ ವಯಸ್ಸಿನ ವರಿಗೆ ಶಿಕ್ಷಣ ನೀಡಲಾಗುತ್ತದೆ 2)  20 ಜನರಿಗೆ ಓರ್ವ ಬೋಧಕರು ಕಲಿಕಾ ಕೇಂದ್ರದಲ್ಲಿ ಇರುತ್ತಾರೆ 3)  120 ಗಂಟೆಗಳು, 4 ತಿಂಗಳ ಅವಧಿಯಲ್ಲಿ ಬೆಳಗ್ಗೆ ಮಧ್ಯಾಹ್ನ ಸಂಜೆ ವೇಳೆಯಲ್ಲಿ ಕಲಿಕೆ 4)  ಬಾಳಿನ ಬೆಳಕು ಹಾಗೂ ಬರೆಯೋಣ ಬನ್ನಿ ಎಂಬ ಪಠ್ಯ ಪುಸ್ತಕಗಳೊಂದಿಗೆ ಕಲಿಕೆ 5)  2030 ರವರೆಗೆ ಶೇಕಡಾ 100ರಷ್ಟು ಸಾಕ್ಷರತೆಗೆ ಸರ್ಕಾರ ಗುರಿ ಇಟ್ಟುಕೊಂಡಿದೆ.

ಇದನ್ನೂ ಓದಿ:

ಕೇರಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸದೇ ಇರುವುದಕ್ಕೆ ಕಾರಣ ಅಲ್ಲಿ ಶೇ.90 ಸಾಕ್ಷರತೆ ಇದೆ: ಒ.ರಾಜಗೋಪಾಲ್ 

ಓದಿನ ಹುಚ್ಚು ಹಿಡಿಸಲೆಂದೇ ಈ ರಸ್ತೆಗಳ ಬದಿಯಲ್ಲಿದೆ ಉಚಿತ ಪುಸ್ತಕದ ಬಾಕ್ಸ್​; ಕೇರಳದಲ್ಲಿದೆ ಪುಸ್ತಕ ಗ್ರಾಮ!

(International Literacy Day 2021 Karnataka Education Minister says Will make full literate by 2030)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ