AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಸಾಕ್ಷರತೆ ಇರುವ ರಾಜ್ಯದ ಈ 5 ಜಿಲ್ಲೆಗಳಲ್ಲಿ ವಿವಿಧ ಯೋಜನೆ; 2030ರೊಳಗೆ ಶೇಕಡಾ 100 ಸಾಕ್ಷರತೆಯ ಗುರಿ

1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರವನ್ನು ಈವರೆಗೂ ಮಾಡಿಲ್ಲ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

TV9 Web
| Edited By: |

Updated on: Sep 14, 2021 | 3:40 PM

Share

ಬೆಂಗಳೂರು: ರಾಜ್ಯದಲ್ಲಿ ರಾಯಚೂರು, ಯಾದಗಿರಿ, ಚಾಮರಾಜನಗರ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳನ್ನು ನೀತಿ ಆಯೋಗ ಕಡಿಮೆ ಸಾಕ್ಷರತೆ ಜಿಲ್ಲೆ ಎಂದು ಗುರುತಿಸಿದೆ. ಈ ಜಿಲ್ಲೆಗಳಲ್ಲಿ ಸಾಕ್ಷರತೆ ಹೆಚ್ಚಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. 1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರವನ್ನು ಈವರೆಗೂ ಮಾಡಿಲ್ಲ. ಸದ್ಯ ನಡೆಯುತ್ತಿರುವ ಸದನ‌ ಮುಗಿಯುವವರೆಗೂ ಯಾವುದೇ ತೀರ್ಮಾನ ಮಾಡುವುದಿಲ್ಲ. ಕೊವಿಡ್ ಮೂರನೇ ಅಲೆ ತಡೆಯುವ ಬಗ್ಗೆ ಸರ್ಕಾರ ಗಮನಹರಿಸುತ್ತಿದೆ. ಮಕ್ಕಳ‌ ಮೇಲೆ‌ ಪರಿಣಾಮ ಬೀರಬಹುದಾದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊವಿಡ್ ಟಾಸ್ಕ್​ಫೋರ್ಸ್ ಸಹ ಗಂಭೀರ ಅಧ್ಯಯನ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದರು.

55ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಅವರು, 2021-22ನೇ ಸಾಲಿನ ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಕ್ಷರತಾ ಸಪ್ತಾಹಕ್ಕೆ ಚಾಲನೆ ನೀಡಿದರು.

ಹಮ್ಮಿಕೊಳ್ಳಲಾದ ಯೋಜನೆಗಳು ಈ ಐದು ಜಿಲ್ಲೆಗಳ ಒಟ್ಟು 24 ತಾಲೂಕಿನ 219 ಗ್ರಾಮ ಪಂಚಾಯತ್ ಹಾಗೂ 19 ನಗರ-ಪಟ್ಟಣ ಪ್ರದೇಶಗಳಿವೆ 1)  ಇದರಲ್ಲಿ 15 ವರ್ಷದ ಮೇಲ್ಪಟ್ಟ ಹಾಗೂ 50 ವರ್ಷದ ಒಳಗಿನ ವಯಸ್ಸಿನ ವರಿಗೆ ಶಿಕ್ಷಣ ನೀಡಲಾಗುತ್ತದೆ 2)  20 ಜನರಿಗೆ ಓರ್ವ ಬೋಧಕರು ಕಲಿಕಾ ಕೇಂದ್ರದಲ್ಲಿ ಇರುತ್ತಾರೆ 3)  120 ಗಂಟೆಗಳು, 4 ತಿಂಗಳ ಅವಧಿಯಲ್ಲಿ ಬೆಳಗ್ಗೆ ಮಧ್ಯಾಹ್ನ ಸಂಜೆ ವೇಳೆಯಲ್ಲಿ ಕಲಿಕೆ 4)  ಬಾಳಿನ ಬೆಳಕು ಹಾಗೂ ಬರೆಯೋಣ ಬನ್ನಿ ಎಂಬ ಪಠ್ಯ ಪುಸ್ತಕಗಳೊಂದಿಗೆ ಕಲಿಕೆ 5)  2030 ರವರೆಗೆ ಶೇಕಡಾ 100ರಷ್ಟು ಸಾಕ್ಷರತೆಗೆ ಸರ್ಕಾರ ಗುರಿ ಇಟ್ಟುಕೊಂಡಿದೆ.

ಇದನ್ನೂ ಓದಿ:

ಕೇರಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸದೇ ಇರುವುದಕ್ಕೆ ಕಾರಣ ಅಲ್ಲಿ ಶೇ.90 ಸಾಕ್ಷರತೆ ಇದೆ: ಒ.ರಾಜಗೋಪಾಲ್ 

ಓದಿನ ಹುಚ್ಚು ಹಿಡಿಸಲೆಂದೇ ಈ ರಸ್ತೆಗಳ ಬದಿಯಲ್ಲಿದೆ ಉಚಿತ ಪುಸ್ತಕದ ಬಾಕ್ಸ್​; ಕೇರಳದಲ್ಲಿದೆ ಪುಸ್ತಕ ಗ್ರಾಮ!

(International Literacy Day 2021 Karnataka Education Minister says Will make full literate by 2030)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು