AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ವೆಸ್ಟ್ ಕರ್ನಾಟಕ-2022: ರಾಜ್ಯಕ್ಕೆ ಹರಿದು ಬಂತು 9.82 ಲಕ್ಷ ಕೋಟಿ; 6 ಲಕ್ಷ ಉದ್ಯೋಗ ಸೃಷ್ಟಿ

ಇನ್ವೆಸ್ಟ್ ಕರ್ನಾಟಕ-2022ಯಿಂದ ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಸಚಿವ ಮುರಗೇಶ್​ ನಿರಾಣಿ ಹೇಳಿದ್ದಾರೆ

ಇನ್ವೆಸ್ಟ್ ಕರ್ನಾಟಕ-2022: ರಾಜ್ಯಕ್ಕೆ ಹರಿದು ಬಂತು 9.82 ಲಕ್ಷ ಕೋಟಿ; 6 ಲಕ್ಷ ಉದ್ಯೋಗ ಸೃಷ್ಟಿ
ಮುರುಗೇಶ್ ನಿರಾಣಿ
TV9 Web
| Edited By: |

Updated on:Nov 05, 2022 | 3:17 PM

Share

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಹೂಡಿಕೆದಾರರ ಸಮಾವೇಶ (Invest Karnataka 2022) ‘ಇನ್ವೆಸ್ಟ್ ಕರ್ನಾಟಕ-2022’ ಶುಕ್ರವಾರ (ನ.4) ಸಂಜೆ ಸಂಪನ್ನಗೊಂಡಿತು. ಈ ಸಮಾವೇಶದಿಂದ ರಾಜ್ಯದಲ್ಲಿ ಅಂದಾಜು 9.82 ಲಕ್ಷ ಕೋಟಿ ರೂ. ಹೂಡಿಕೆಯಾಗಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ತಿಳಿಸಿದರು. ಬೆಂಗಳೂರಿನಲ್ಲಿ ಇಂದು (ನ.5) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೂಡಿಕೆಯಿಂದ ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದರು.

ಮುಂದುವರೆದು ಸಿಂಗಲ್ ವಿಂಡೋದಲ್ಲಿ 2,83,415 ಕೋಟಿ ಒಡಂಬಡಿಕೆಯಾಗಿದೆ. ಸರ್ಕಾರದ ಜೊತೆ ಒಟ್ಟು 5,41,369 ಕೋಟಿ ಒಡಂಬಡಿಕೆಯಾಗಿದೆ. ಇನ್ವೆಸ್ಟ್ ಕರ್ನಾಟಕದಲ್ಲೇ 1,56,000 ಕೋಟಿ ಘೋಷಣೆಯಾಗಿದೆ. ರಾಜ್ಯದಲ್ಲಿ ಒಟ್ಟು 9,81,784 ಕೋಟಿ ರೂ. ಹೂಡಿಕೆಯಾಗಲಿದೆ ಎಂದು ಮಾಹಿತಿ ನೀಡಿದರು.

ಈ ಬಾರಿ ಶೇ 90 ರಷ್ಟು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯಾಗಲಿದೆ. ಇಂಧನ ಕ್ಷೇತ್ರದಲ್ಲಿ ಶೇ 38, ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಶೇ 33, ಮೂಲಸೌಕರ್ಯ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಶೇ 9 ಹೂಡಿಕೆಯಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 5 ಏರ್‌ಪೋರ್ಟ್​​ ನಿರ್ಮಾಣ ಆಗಲಿದೆ

ರಾಜ್ಯದಲ್ಲಿ ಹೊಸದಾಗಿ 5 ಏರ್‌ಪೋರ್ಟ್​​ ನಿರ್ಮಾಣ ಆಗಲಿದೆ. ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿಯಾಗಿವೆ. ರಸ್ತೆ ಅಭಿವೃದ್ಧಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತೀನ್ ಗಡ್ಕರಿ ಹೆಚ್ಚು ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಬಂದರುಗಳ ಅಭಿವೃದ್ಧಿಗೂ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಬೇಕಾದ ಜಾಗವನ್ನು ರೈತರಿಂದ ಖರೀದಿ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಹೂಡಿಕೆಗೆ ಬೇಕಾದ ಎಲ್ಲಾ ವಾತಾವರಣ ಇದೆ. ಮುಂದಿನ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ.ಬಂಡವಾಳ ಹೂಡಿಕೆ ಒಪ್ಪಂದ‌ ನಾವೇ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Sat, 5 November 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್