AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohini Vs Roopa: ಸತ್ಯಮೇವ ಜಯತೇ ಎಂದ ಡಿ.ರೂಪಾ, ಕುತೂಹಲ ಮೂಡಿಸಿದ IPS ನಡೆ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನ್ಯಾಯಾಲಯದಲ್ಲಿ ಹಾಕಿರುವ ಅರ್ಜಿ ವಿರುದ್ಧವಾಗಿ ಐಪಿಎಸ್ ಡಿ ರೂಪಾ ಸಹ ಕೋರ್ಟ್​ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.

Rohini Vs Roopa: ಸತ್ಯಮೇವ ಜಯತೇ ಎಂದ ಡಿ.ರೂಪಾ, ಕುತೂಹಲ ಮೂಡಿಸಿದ IPS ನಡೆ
ಡಿ.ರೂಪಾ, ರೋಹಿಣಿ ಸಿಂಧೂರಿ
TV9 Web
| Edited By: |

Updated on: Feb 23, 2023 | 10:05 PM

Share

ಬೆಂಗಳೂರು: ಐಪಿಎಸ್ ಡಿ ರೂಪಾ ಮೌದ್ಗಿಲ್ (D Roopa Moudgil)ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ಆರೋಪ-ಪ್ರತ್ಯಾರೋಪಗಳು ಇಲ್ಲಿಗೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಕಾನೂನು ಹೋರಾಟಕ್ಕಿಳಿದಿದ್ದಾರೆ. ಇದೀಗ ರೂಪಾ ಸಹ ತಮ್ಮ ಎದುರಾಳಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಸಮರಕ್ಕೆ ಸಿದ್ಧರಾಗಿದ್ದು, ಕೋರ್ಟ್​ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೋಹಿಣಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಟಿವಿ9 ಹೊರತುಪಡಿಸಿ ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಕೋರ್ಟ್ ನಿರ್ಬಂಧ

ಹೌದು..ತಮ್ಮ ಅಧಿಕೃತ ಫೇಸ್​ಬುಕ್​ನಲ್ಲಿ ಮತ್ತೊಂದು ಪೋಸ್ಟ್ ಮಾಡಿರುವ ರೂಪಾ, ನನ್ನ ಮಾತು ಕೇಳಲು ಅವಕಾಶ ನೀಡಿದ ಕೋರ್ಟ್‌ಗೆ ಕೃತಜ್ಞಳಾಗಿದ್ದೇನೆ. ಗೌರವಾನ್ವಿತ ನ್ಯಾಯಾಲಯದ ಮುಂದೆ ನನ್ನ ಮನವಿ ಸಲ್ಲಿಸುತ್ತೇನೆ. ಸತ್ಯಮೇವ ಜಯತೇ. ಆತ್ಮೀಯ ಸ್ನೇಹಿತರೇ, ಹಿತೈಷಿಗಳೇ ನಿಮ್ಮಿಂದ ಅಪಾರ ಬೆಂಬಲ ಸಿಕ್ಕಿದೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಹೋರಾಟಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ TV9 ಹೊರತುಪಡಿಸಿ ಐಪಿಎಸ್ ಅಧಿಕಾರಿ ಡಿ.ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ ಇಂದು(ಫೆಬ್ರುವರಿ 23) ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ಆದಶ ಹೊರಡಿಸಿದೆ. ಆದ್ರೆ, ಇನ್ನು ರೋಹಿಣಿ ಸಿಂಧೂರಿ ಅರ್ಜಿಗೆ ಆಕ್ಷೇಪ ಸಲ್ಲಿಸಲು ಐಪಿಎಸ್ ಡಿ ರೂಪಾ ಮೌದ್ಗಿಲ್ ಅವರಿಗೂ ಕೋರ್ಟ್​ ಕಾಲವಕಾಶ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ.

ಇದನ್ನೂ ಓದಿ: Rohini Vs Roopa: ರೂಪಾ ವಿರುದ್ಧ FIR ದಾಖಲಿಸಲು ರೋಹಿಣಿ ಸಿಂಧೂರಿ ಪಟ್ಟು, ಪೊಲೀಸ್ ಆಯುಕ್ತರಿಗೆ ಪತ್ರ

ಕೋರ್ಟ್​ ಆಕ್ಷೇಪಣೆಗೆ ಕಾಲಾವಕಾಶ ನೀಡಿದ್ದರಿಂದ ರೂಪಾ ಅವರು ತಮ್ಮ ಮನವಿಯನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ರೋಹಿಣಿ ಹಾಗೂ ರೂಪಾ ಪರ ವಕೀಲರ ನಡುವಿನ ವಾದ-ಪ್ರತಿವಾದ ನಡೆಯಲಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಪು ನೀಡಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!