AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್ ಡಿ ರೂಪಾ ಫೇಸ್​ಬುಕ್ ಪೋಸ್ಟ್​ಗಳನ್ನು ಟ್ರೋಲ್ ಮಾಡಲು ಏಜೆನ್ಸಿಗೆ ಗುತ್ತಿಗೆ? ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ಆರೋಪ

ಐಪಿಎಸ್ ಅಧಿಕಾರಿ ಡಿ.ರೂಪಾ ಫೇಸ್​ಬುಕ್ ಪೋಸ್ಟ್​ಗಳಿಗೆ ಕೆಟ್ಟದಾಗಿ ಟ್ರೋಲ್ ಮಾಡಲು ಎಂದೇ ಏಜೆನ್ಸಿಗೆ ಜವಾಬ್ದಾರಿ ನೀಡಲಾಗಿದೆ. ಅಲ್ಲದೇ ಕೆಟ್ಟದಾಗಿ ಕಮೆಂಟ್​ಗಳನ್ನೂ ಹಾಕಿಸಲಾಗುತ್ತಿದೆ. ಹೀಗಾಗಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ಪೋಸ್ಟ್ ಹಾಕದಂತೆ ಡಿ. ರೂಪಾ ಅವರಿಗೆ ಹೆಸರು ಬಹಿರಂಗಪಡಿಸಲು ಇಚ್ಛಿಸಿದ ವ್ಯಕ್ತಿ ಮೆಸೇಜ್ ಮೂಲಕ ಮನವಿ ಮಾಡಿದ್ದಾನೆ.

ಐಪಿಎಸ್ ಡಿ ರೂಪಾ ಫೇಸ್​ಬುಕ್ ಪೋಸ್ಟ್​ಗಳನ್ನು ಟ್ರೋಲ್ ಮಾಡಲು ಏಜೆನ್ಸಿಗೆ ಗುತ್ತಿಗೆ? ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ಆರೋಪ
ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ
TV9 Web
| Edited By: |

Updated on: Jul 04, 2021 | 4:01 PM

Share

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಘರ್ಷಣೆ ಮತ್ತೆ ಮುನ್ನೆಲೆಗೆ ಬಂದಿದೆ. ಐಪಿಎಸ್ ಡಿ. ರೂಪಾ ಅವರ ಫೇಸ್​ಬುಕ್​ನ ಪೋಸ್ಟ್​ಗಳಿಗೆ ಕೆಟ್ಟದಾಗಿ ಟ್ರೋಲ್​ ಮಾಡಿಸುವ ಆರೋಪ ಕೇಳಿಬಂದಿದ್ದು, ರೋಹಿಣಿ ಸಿಂಧೂರಿ ಅವರ ಪತಿ ಪಿಆರ್​ಒ ಏಜೆನ್ಸಿ ಮೂಲಕ ಟ್ರೋಲ್ ಮಾಡಿಸುತ್ತಿದ್ದಾರೆ ಎಂದು ಹೆಸರು ಬಹಿರಂಗಪಡಿಸದ ವ್ಯಕ್ತಿಯೊಬ್ಬರು ಅರೋಪ ಮಾಡಿದ್ದಾರೆ. ಡಿ.ರೂಪಾ ಅವರಿಗೆ ಈ ಕುರಿತು ವಾಟ್ಸ್​ಆ್ಯಪ್​ನಲ್ಲಿ ಮಾಹಿತಿ ನೀಡಿರುವ ವ್ಯಕ್ತಿ ತನ್ನ ಹೆಸರನ್ನು ಬಹಿರಂಗಪಡಿಸದಂತೆ ಕೋರಿಕೊಂಡಿದ್ದಾನೆ. ಅಲ್ಲದೇ, ಈ ಮುನ್ನ ತಾನು ಆ ಪಿಆರ್ ಏಜೆನ್ಸಿಯಲ್ಲಿ ಕೆಲಸ ಮಾಡಿದ್ದಾಗಿಯೂ ಹೇಳಿಕೊಂಡಿದ್ದಾನೆ.

ಐಪಿಎಸ್ ಅಧಿಕಾರಿ ಡಿ.ರೂಪಾ ಫೇಸ್​ಬುಕ್ ಪೋಸ್ಟ್​ಗಳಿಗೆ ಕೆಟ್ಟದಾಗಿ ಟ್ರೋಲ್ ಮಾಡಲು ಎಂದೇ ಏಜೆನ್ಸಿಗೆ ಜವಾಬ್ದಾರಿ ನೀಡಲಾಗಿದೆ. ಅಲ್ಲದೇ ಕೆಟ್ಟದಾಗಿ ಕಮೆಂಟ್​ಗಳನ್ನೂ ಹಾಕಿಸಲಾಗುತ್ತಿದೆ. ಹೀಗಾಗಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ಪೋಸ್ಟ್ ಹಾಕದಂತೆ ಡಿ. ರೂಪಾ ಅವರಿಗೆ ಹೆಸರು ಬಹಿರಂಗಪಡಿಸಲು ಇಚ್ಛಿಸಿದ ವ್ಯಕ್ತಿ ಮೆಸೇಜ್ ಮೂಲಕ ಮನವಿ ಮಾಡಿದ್ದಾನೆ. ಐಪಿಎಸ್ ಡಿ.ರೂಪಾ ಆ ವ್ಯಕ್ತಿಯ ಜತೆ ನಡೆಸಿದ ವಾಟ್ಸ್​ಆ್ಯಪ್ ಚಾಟ್​ನ ಸ್ಕ್ರೀನ್​ಶಾಟ್​ಗಳನ್ನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ.

ಡಿ.ರೂಪಾ ಅವರು ಫೇಸ್​ಬುಕ್​ನಲ್ಲಿ ಬರೆದ ಇಂತಿದೆ

ಈ ಸಂಭಾಷಣೆ 25 ನೇ ಜೂನ್ ನಡೆದದ್ದು. ಸಂಭಾಷಣೆ ಸ್ವಯಂ ವೇದ್ಯ. ನನಗೆ ಹೆಚ್ಚಾಗಿ ತಿಳಿಯದ ಈ ವ್ಯಕ್ತಿ ಹೇಳಿದ್ದು ನಿಜ ಇದ್ದರೆ, ಅಂದರೆ, ನಾನು ಹಾಕುವ ನನ್ನ ಅಭಿಪ್ರಾಯಕ್ಕೆ paid trolls ಗಳು ನಕಾರಾತ್ಮಕವಾಗಿ,. ಅನಾಗರಿಕ ರೀತಿಯಲ್ಲಿ ಪ್ರತಿಕ್ರಿಯಿಸಿದರ ಹಿಂದೆ ಅಂಥವರ ವಿಕೃತ ಮನೋಭಾವ ಎದ್ದು ತೋರುತ್ತದೆ. ಸತ್ಯ ಹೇಳೋಕೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಡ. ಹಾಗೆ, paid trolls ಗಳು ಒಬ್ಬ ಅಧಿಕಾರಿಯ ಪರ ಕೆಲಸ ಮಾಡುತ್ತಾ, ಇನ್ನೊಬ್ಬ ಅಧಿಕಾರಿಯ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವುದು ” ಹೊಸ ಸಾಮಾನ್ಯ?”. New normal’? Sad. ಆದರೆ, ಆ ಪೇಯ್ಡ್/ ಬಾಡಿಗೆ ಟ್ರೊಲ್ ಗಳಿಗೆ ಗೊತ್ತಿಲ್ಲವೆ… ನಾಯಿ ಬೊಗಳಿದರೆ ಅಂಬಾರಿ ಹೋಗೋದು ನಿಲ್ಲಲ್ಲ. ಹಾಗೇ ಈ ವ್ಯಕ್ತಿ ಹೇಳಿದ ವಿಷಯ ಸತ್ಯವೇ, ತನಿಖೆ ಆಗಲಿ..

ಈ ಮುನ್ನವು ರೋಹಿಣಿ ಸಿಂಧೂರಿ ವಿರುದ್ಧ ಹಲವು ಬಾರಿ ಡಿ ರೂಪಾ ಅಸಮಧಾನ ತೋಡಿಕೊಂಡಿದ್ದರು. ಕೊರೊನಾ ಕಾಲದಲ್ಲಿ ಈಜುಕೊಳ ಕಟ್ಟಿದ್ದು ನೈತಿಕ ಅಧಃಪತನ: ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಟ್ವೀಟ್ ಮಾಡಿ ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರು ಎಂದು ಇಲ್ಲಿ ಉಲ್ಲೇಖಿಸಬಹುದು.

ಇದನ್ನೂ ಓದಿ:

ರೋಹಿಣಿ ಸಿಂಧೂರಿ ಬಾಯಲ್ಲಿ ಮಾತ್ರ ಭೂ ಮಾಫಿಯಾ ವಿರುದ್ಧ ಜೋರಾಗಿ ಮಾತನಾಡಿದ್ದರು; ಐಪಿಎಸ್ ಅಧಿಕಾರಿ ಡಿ ರೂಪಾ ಬೇಸರ

ಕೊರೊನಾ ಕಾಲದಲ್ಲಿ ಈಜುಕೊಳ ಕಟ್ಟಿದ್ದು ನೈತಿಕ ಅಧಃಪತನ: ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಟ್ವೀಟ್

(IPS D Roopa verses IAS Rohini Sindhuri about troll against D Roopa facebook post)

Follow Us
Web contact
Web contact

TV9 Kannada

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ