AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Illegal Permit for Bike Taxis | ಅಕ್ರಮ ಬಯಲಿಗೆಳೆಯಲು ಹೋದ ಟಿವಿ9 ಸಿಬ್ಬಂದಿ ಮೇಲೆ IPS ಅಧಿಕಾರಿಯ ದರ್ಪ!

Illegal Permit for Bike Taxis | ಬೈಕ್‌ ಟ್ಯಾಕ್ಸಿಗಳ ಸಂಚಾರಕ್ಕೆ ಅಕ್ರಮವಾಗಿ ಪರ್ಮಿಟ್ ನೀಡಿರುವ ಆರೋಪದ ಬಗ್ಗೆ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆಯ ಆಯುಕ್ತ ಶಿವಕುಮಾರ್ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಬೈಕ್‌ ಟ್ಯಾಕ್ಸಿಗಳ ಅಕ್ರಮ ಓಡಾಟಕ್ಕೆ ಪರ್ಮಿಟ್‌ ಕೊಟ್ಟಿದ್ದೀರಾ ಅಂತಾ ಟಿವಿ9 ಪ್ರತಿನಿಧಿ ಪ್ರಶ್ನಿಸಿದ್ರೆ ಧಿಮಾಕಿನ ಉತ್ತರ ಕೊಟ್ಟಿದ್ದಾರೆ. ನಾನ್‌ ಏನೂ ಹೇಳಲ್ಲ.. ನಾನ್ಯಾಕೆ ಮಾತಾಡಬೇಕು.. ನಾನು ಹೇಳಿದ್ದನ್ನಷ್ಟೇ ನೀವು ಕೇಳಬೇಕು ಅಂತಾ ಉತ್ತರಿಸಿದ್ದಾರೆ.

Illegal Permit for Bike Taxis | ಅಕ್ರಮ ಬಯಲಿಗೆಳೆಯಲು ಹೋದ ಟಿವಿ9 ಸಿಬ್ಬಂದಿ ಮೇಲೆ IPS ಅಧಿಕಾರಿಯ ದರ್ಪ!
ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆಯ ಆಯುಕ್ತ ಶಿವಕುಮಾರ್‌ ಟಿವಿ9 ಕ್ಯಾಮರಾ ಕಿತ್ತೆಸೆಯಲು ಯತ್ನಿಸಿದರು.
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 18, 2021 | 5:29 PM

Share

ಬೆಂಗಳೂರು: ಶಾಂತಿನಗರ RTO ಕಚೇರಿಯಲ್ಲಿ ದೌಲತ್ತಿನ ಅಧಿಕಾರಿಯೊಬ್ಬರಿದ್ದಾರೆ. ಹೌದು, ಸಾರಿಗೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ IPS ಅಧಿಕಾರಿ ಶಿವಕುಮಾರ್ ಅಧಿಕಾರದ ದರ್ಪ ತೋರುತ್ತಿದ್ದಾರೆ. ನಗರದಲ್ಲಿ ಬೈಕ್​ ಟ್ಯಾಕ್ಸಿಗಳ ಅಕ್ರಮದ ಬಗ್ಗೆ ಸುದ್ದಿ ಮಾಡಲು ಹೋದ ಟಿವಿ9 ತಂಡದ ಕ್ಯಾಮರಾವನ್ನು ಕಿತ್ತೆಸೆಯಲು ಯತ್ನಿಸಿದ್ದಲ್ಲದೆ ಉಡಾಫೆಯಾಗಿ ವರ್ತಿಸಿದ್ದಾರೆ. ಇದಲ್ಲದೆ,  ಸಾರಿಗೆ ಆಯುಕ್ತರ ಕಚೇರಿಯಲ್ಲೇ ಟಿವಿ9 ರಿಪೋರ್ಟರ್ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ.

ರಾಜ್ಯದ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆಯ ಆಯುಕ್ತ ಶಿವಕುಮಾರ್‌ ಅಚಾನಕ್ಕಾಗಿ ಈ ಸ್ಥಾನಕ್ಕೆ ಬಂದ್ರೋ ಅಥವಾ ಈ ಸ್ಥಾನದ ಜವಾಬ್ದಾರಿ ಅರಿತು ಬಂದ್ರೋ ಗೊತ್ತಿಲ್ಲ. ಆದರೆ, ಒಬ್ಬ ಆಯುಕ್ತರಿಗೆ ಇರಬೇಕಾದ ಕನಿಷ್ಠ ಘನತೆ ಕೂಡ ಇದ್ದಂತಿಲ್ಲ. ಉನ್ನತ ಹುದ್ದೆಯಲ್ಲಿ ಕುಳಿತು ದುರಹಂಕಾರದಿಂದ ಮಾತನಾಡ್ತಾರೆ.

ಟಿವಿ9 ಕ್ಯಾಮರಾ ಮೇಲೆ ಎರಗಿದ ಶಿವಕುಮಾರ್! ಸಾರಿಗೆ ಇಲಾಖೆಯಲ್ಲಿ ಏನೇ ಆದ್ರೂ, ಎಲ್ಲವನ್ನೂ ನಿಭಾಯಿಸಬೇಕಾದ ಹೊಣೆ ಆಯುಕ್ತರ ಮೇಲಿರುತ್ತೆ. ಆದ್ರೆ, ಈ IPS ಅಧಿಕಾರಿ‌ ಶಿವಕುಮಾರ್​​ಗೆ ಅದ್ಯಾವುದರ ಪರಿಜ್ಞಾನವೇ ಇದ್ದಂತಿಲ್ಲ.

ನಗರದಲ್ಲಿ ಬೈಕ್‌ ಟ್ಯಾಕ್ಸಿಗಳು ಅನಧಿಕೃತವಾಗಿ ಓಡಾಡ್ತಿವೆ. ಅವುಗಳ ಓಡಾಟಕ್ಕೆ ಪರ್ಮಿಟ್‌ ಕೊಟ್ಟಿದ್ದೀರಾ ಅಂತಾ ನಮ್ಮ ಪ್ರತಿನಿಧಿ ಪ್ರಶ್ನಿಸಿದ್ರೆ ಧಿಮಾಕಿನ ಉತ್ತರ ಕೊಟ್ಟಿದ್ದಾರೆ. ನಾನ್‌ ಏನೂ ಹೇಳಲ್ಲ.. ನಾನ್ಯಾಕೆ ಮಾತಾಡಬೇಕು.. ನಾನು ಹೇಳಿದ್ದನ್ನಷ್ಟೇ ಕೇಳಬೇಕು ಅಂತಾ ಉತ್ತರಿಸಿದ್ದಾರೆ. ಅದಕ್ಕೆ, ನಮ್ಮ ಪ್ರತಿನಿಧಿ ಎಷ್ಟೋ ಅಧಿಕಾರಿಗಳಿದ್ರು ಅವರುಯಾರೂ ನಿಮ್ಮ ಹಾಗೆ ವರ್ತಿಸ್ತಿರಲಿಲ್ಲ ಎಂದು ಸೌಜನ್ಯದಿಂದ ಹೇಳಿದ್ದಕ್ಕೆ, ಸಿಟ್ಟಿಗೆದ್ದ ಅಧಿಕಾರಿ ಕುರ್ಚಿಯಿಂದ ಎದ್ದು ಬಂದು  ಏಕಾಏಕಿ ಕ್ಯಾಮರಾ ಕಿತ್ತುಕೊಳ್ಳಲು ಯತ್ನಿಸಿದ್ದಲ್ಲದೆ ಕ್ಯಾಮರಾದ ಕೇಬಲ್‌ ಕಿತ್ತೆಸೆದಿದ್ದಾರೆ. ಜೊತೆಗೆ, ಕ್ಯಾಮರಾ ಟ್ರೈಪಾಟ್​ ಅನ್ನು ನೆಲಕ್ಕೆ ತಳ್ಳಿ ದಾಂಧಲೆ ಎಬ್ಬಿಸಿದ್ದಾರೆ.

ಅಂದ ಹಾಗೆ, ಟಿವಿ9 ತಂಡ ಸಾರ್ವಜನಿಕ ಸಂಪರ್ಕಾಧಿಕಾರಿಯ ಅಪಾಯಿಂಟ್ಮೆಂಟ್ ಪಡೆದೇ ಸಾರಿಗೆ ಇಲಾಖೆ ಕಚೇರಿಗೆ ಪ್ರತಿಕ್ರಿಯೆ ಪಡೆಯಲು ತೆರಳಿತ್ತು. ಕಚೇರಿಗೆ ಬಂದ ಸಾರ್ವಜನಿಕರಿಗೆ ಅಥವಾ ಮಾಧ್ಯಮದವರಿಗೆ ಉತ್ತರಿಸಬೇಕಾಗಿರುವುದು ಒಬ್ಬ ಸರ್ಕಾರಿ ಅಧಿಕಾರಿಯ ಕರ್ತವ್ಯ. ಆದರೆ, ಇದು ಈ IPS ಅಧಿಕಾರಿಗೆ ಅನ್ವಯಿಸುವುದಿಲ್ಲವೇನೋ. ನಿಯತ್ತಾಗಿ, ಜವಾಬ್ದಾರಿ ಹೊತ್ತು ಉತ್ತರ ಕೊಡುವ ಬದಲು ದೌಲತ್ತು ತೋರಿಸಿದ್ದಾರೆ.

ಬಹುಶಃ, ಸಾರಿಗೆ ಇಲಾಖೆಯನ್ನ ಶಿವಕುಮಾರ್ ತನ್ನ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ಎಂದುಕೊಂಡಿರಬೇಕು. ಅಲ್ಲಿ ಅವರನ್ನು ಯಾರೂ ಪ್ರಶ್ನಿಸುವಂತಿಲ್ಲ, ಅಕ್ರಮದ ಬಗ್ಗೆ ಕೇಳುವಂತಿಲ್ಲ. ಈ IPS‌ ಅಧಿಕಾರಿಯ ವರ್ತನೆ ನೋಡಿದ್ರೆ ಇವರ ಪ್ರಾಮಾಣಿಕತೆ ಬಗ್ಗೆ ಸಂಶಯ ಹುಟ್ಟುತ್ತಿದೆ.

IPS Officer Behaves Like A Rowdy with media

ರಾಜ್ಯದ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆಯ ಆಯುಕ್ತ ಶಿವಕುಮಾರ್‌

IPS Officer Behaves Like A Rowdy with media

ಟಿವಿ9 ತಂಡದ ಮೇಲೆ ದರ್ಪ ಮೆರೆದ ಆಯುಕ್ತ ಶಿವಕುಮಾರ್‌

ಇದನ್ನೂ ಓದಿ: IAS ಅಧಿಕಾರಿ ಮೇಲೆ ಪತಿಯ ದರ್ಪ: ಬಾಗಿಲು ಮುರಿದವ.. ಕೊನೆಗೆ ಜೈಲುಪಾಲಾದ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು