AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS vs IPS: ಡಿ ರೂಪಾ ಹಾಗೂ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿದ ಸರ್ಕಾರ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜತೆಗೆ ಐಎಎಸ್​ ಅಧಿಕಾರಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ.

IAS vs IPS: ಡಿ ರೂಪಾ ಹಾಗೂ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿದ ಸರ್ಕಾರ
ಡಿ ರೂಪಾ (ಎಡಚಿತ್ರ) ರೋಹಿಣಿ ಸಿಂಧೂರಿ (ಬಲಚಿತ್ರ)
ಗಣಪತಿ ಶರ್ಮಾ
|

Updated on:Feb 21, 2023 | 2:42 PM

Share

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ (D Roopa Moudgil) ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್​ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ (Department of Personnel and Administrative Reforms) ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಇಬ್ಬರು ಅಧಿಕಾರಿಗಳ ನಡುವಣ ಸಂಘರ್ಷ ತಾರಕಕ್ಕೇರಿತ್ತು. ರೋಹಿಣಿ ಸಿಂಧೂರಿ ಅವರು ಜೆಡಿಎಸ್ ಶಾಸಕ ಸಾರಾ ಮಹೇಶ್ ಜತೆ ಸಂಧಾನಕ್ಕೆ ತೆರಳಿದ್ದರು ಎಂಬ ಬಗ್ಗೆ ವರದಿಯಾದ ಬೆನ್ನಲ್ಲೇ ಅವರ ವಿರುದ್ಧ ಡಿ ರೂಪಾ ಆರೋಪಗಳ ಸುರಿಮಳೆಯನ್ನೇ ಮಾಡಿದ್ದರು. ನಂತರ ಪ್ರಕರಣ ರಾಜಕೀಯ ವಲಯದಲ್ಲಿಯೂ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಪ್ರಕರಣದ ಬಗ್ಗೆ ಸರ್ಕಾರ ತನಿಖೆ ನಡೆಸಲಿದೆ; ಆರಗ ಜ್ಞಾನೇಂದ್ರ

ಐಪಿಎಸ್ ಡಿ.ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಉನ್ನತ ಹುದ್ದೆಯ ಅಧಿಕಾರಿಗಳು ಹೀಗೆ ಕಿತ್ತಾಡುವುದು ಸರಿಯಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮಕೈಗೊಂಡಿದೆ. ಪ್ರಕರಣದ ಬಗ್ಗೆ ಸರ್ಕಾರ ತನಿಖೆ ನಡೆಸಲಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9ಗೆ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಡಿ ರೂಪಾ, ರೋಹಿಣಿ ಸಿಂಧೂರಿ ಮತ್ತು ಮುನೀಷ್​ ಮೌದ್ಗಿಲ್​ ವರ್ಗಾವಣೆಗೊಳಿಸಿದ ಆದೇಶ ಪ್ರತಿ

ಇದನ್ನೂ ಓದಿ: D Roopa Moudgil: ಯಾರು ಡಿ ರೂಪಾ ಮೌದ್ಗಿಲ್? ರೋಹಿಣಿ ಸಿಂಧೂರಿ ಜತೆ ಕದನಕ್ಕೆ ಕಾರಣವೇನು? ಇಲ್ಲಿದೆ ವಿವರ

ರೋಹಿಣಿ ಸಿಂಧೂರಿ ಅವರು ಕೆಲವು ಐಎಎಸ್‌ ಅಧಿಕಾರಿಗಳಿಗೆ ಕಳುಹಿಸಿದ್ದಾರೆ ಎನ್ನಲಾದ ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಇತ್ತೀಚೆಗೆ ರೂಪಾ ಪ್ರಕಟಿಸಿದ್ದರು. ಜತೆಗೆ, ಐಎಎಸ್ ಅಧಿಕಾರಿ ಆಗಿ ರಾಜಕಾರಣಿಗಳ ಬಳಿ ಸಂಧಾನಕ್ಕೆ ಯಾಕೆ ಹೋಗಬೇಕು? ದೇಶದ ಇತಿಹಾಸದಲ್ಲಿ ಮೊದಲ ಬಾರಿ ಐಎಎಸ್ ರಾಜಕಾರಣಿ ಬಳಿ ಸಂಧಾನಕ್ಕೆ ಹೋಗಿದ್ದಾರೆ. ರಾಜಕಾರಣಿ ಬಳಿ ಐಎಎಸ್ ಅಧಿಕಾರಿ ಹೋಗಿರುವುದು ಖೇದ ಅನಿಸುತ್ತಿದೆ ಎಂದು ಹೇಳಿದ್ದರು. ಇದು ತೀವ್ರ ಚರ್ಚಗೆ ಗ್ರಾಸವಾಗಿತ್ತು. ಏತನ್ಮಧ್ಯೆ, ರೋಹಿಣಿ ವಿರುದ್ಧ ರೂಪಾ. ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಸಾಮಾಜಿಕ ಹೋರಾಟಗಾರ ದಿನೇಶ್‌ ಕಲ್ಲಹಳ್ಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಇಬ್ಬರೂ ಅಧಿಕಾರಿಗಳಿಗೆ ನೋಟಿಸ್‌ ನೀಡಿದ್ದ ಮುಖ್ಯ ಕಾರ್ಯದರ್ಶಿ ಪ೦ದಿತಾ ಶರ್ಮ ವಿವರಣೆ ಕೇಳಿದ್ದರು.

ಸೋಮವಾರ ವಿಧಾನಸಭೆ ಅಧಿವೇಶನದಲ್ಲಿಯೂ ಐಎಎಸ್ – ಐಪಿಎಸ್ ಅಧಿಕಾರಿಗಳ ನಡುವಣ ಸಂಘರ್ಷದ ಬಗ್ಗೆ ಚರ್ಚೆಯಾಗಿತ್ತು. ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ವಿಚಾರ ಪ್ರಸ್ತಾಪವಾಗಿತ್ತು. ಇದರ ಬೆನ್ನಲ್ಲೇ ಅಧಿಕಾರಿಗಳಿಬ್ಬರನ್ನೂ ವರ್ಗಾವಣೆ ಅಥವಾ ಕಡ್ಡಾಯ ರಜೆ ಮೇಲೆ ಕಳುಹಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿದ್ದವು. ಇದೀಗ ಸರ್ಕಾರ ಅದೇ ಕ್ರಮ ಕೈಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:03 pm, Tue, 21 February 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು