AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೊಮ್ಮೆ​ ವರ್ಗಾವಣೆ

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಂಬಾಳ್ಕರ್ ಪಾತ್ರದ ಬಗ್ಗೆ ಅಂದಿನ ಗೃಹ ಕಾರ್ಯದರ್ಶಿ ಡಿ.ರೂಪಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇಬ್ಬರೂ ಐಪಿಎಸ್​ ಅಧಿಕಾರಿಗಳ ನಡುವೆ ಹೇಳಿಕೆ-ಪ್ರತಿಹೇಳಿಕೆಗಳು ಕೆಲ ಸಮಯ ಹರಿದಾಡಿದ್ದವು.

ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೊಮ್ಮೆ​ ವರ್ಗಾವಣೆ
ಐಜಿಪಿ ಹೇಮಂತ್ ನಿಂಬಾಳ್ಕರ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Jan 11, 2021 | 11:19 PM

Share

ಬೆಂಗಳೂರು: ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಡಿ.31ರಂದು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರವು, ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಿತ್ತು.

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಂಬಾಳ್ಕರ್ ಪಾತ್ರದ ಬಗ್ಗೆ ಅಂದಿನ ಗೃಹ ಕಾರ್ಯದರ್ಶಿ ಡಿ.ರೂಪಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇಬ್ಬರೂ ಐಪಿಎಸ್​ ಅಧಿಕಾರಿಗಳ ನಡುವೆ ಹೇಳಿಕೆ-ಪ್ರತಿಹೇಳಿಕೆಗಳು ಕೆಲ ಸಮಯ ಹರಿದಾಡಿದ್ದವು. ನಂತರ ಇಬ್ಬರನ್ನೂ ವರ್ಗಾವಣೆ ಮಾಡಿ ಸರ್ಕಾರ ವಿವಾದಕ್ಕೆ ಇತಿಶ್ರೀ ಹಾಡಲು ಮುಂದಾಗಿತ್ತು.

ರೂಪಾ ಅವರನ್ನು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮತ್ತು ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಸರ್ಕಾರ ವರ್ಗಾವಣೆ ಮಾಡಿತ್ತು. ತಮ್ಮನ್ನು ವರ್ಗಾವಣೆ ಮಾಡಿರುವುಕ್ಕೆ ರೂಪಾ ಬೇಸರ ವ್ಯಕ್ತಪಡಿಸಿದ್ದರು. ‘ಈ ವರ್ಗಾವಣೆಯು ನನ್ನನ್ನೂ, ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ’ ಎಂದು ಆಕ್ಷೇಪಿಸಿದ್ದರು.

ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿದ ಕೇವಲ 11 ದಿನಗಳಲ್ಲಿ ಮತ್ತೊಮ್ಮೆ ವರ್ಗಾವಣೆ ಮಾಡಲಾಗಿದೆ. ಹೇಮಂತ್ ನಿಂಬಾಳ್ಕರ್ ಅವರ ಸೇವಾರ್ಹತೆಗೆ ಅನುಗುಣವಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿ ಹುದ್ದೆಯನ್ನು ಉನ್ನತೀಕರಿಸಲಾಗಿದೆ.

ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ

Published On - 10:58 pm, Mon, 11 January 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?