AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೊಮ್ಮೆ​ ವರ್ಗಾವಣೆ

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಂಬಾಳ್ಕರ್ ಪಾತ್ರದ ಬಗ್ಗೆ ಅಂದಿನ ಗೃಹ ಕಾರ್ಯದರ್ಶಿ ಡಿ.ರೂಪಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇಬ್ಬರೂ ಐಪಿಎಸ್​ ಅಧಿಕಾರಿಗಳ ನಡುವೆ ಹೇಳಿಕೆ-ಪ್ರತಿಹೇಳಿಕೆಗಳು ಕೆಲ ಸಮಯ ಹರಿದಾಡಿದ್ದವು.

ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೊಮ್ಮೆ​ ವರ್ಗಾವಣೆ
ಐಜಿಪಿ ಹೇಮಂತ್ ನಿಂಬಾಳ್ಕರ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Jan 11, 2021 | 11:19 PM

Share

ಬೆಂಗಳೂರು: ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಡಿ.31ರಂದು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರವು, ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಿತ್ತು.

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಂಬಾಳ್ಕರ್ ಪಾತ್ರದ ಬಗ್ಗೆ ಅಂದಿನ ಗೃಹ ಕಾರ್ಯದರ್ಶಿ ಡಿ.ರೂಪಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇಬ್ಬರೂ ಐಪಿಎಸ್​ ಅಧಿಕಾರಿಗಳ ನಡುವೆ ಹೇಳಿಕೆ-ಪ್ರತಿಹೇಳಿಕೆಗಳು ಕೆಲ ಸಮಯ ಹರಿದಾಡಿದ್ದವು. ನಂತರ ಇಬ್ಬರನ್ನೂ ವರ್ಗಾವಣೆ ಮಾಡಿ ಸರ್ಕಾರ ವಿವಾದಕ್ಕೆ ಇತಿಶ್ರೀ ಹಾಡಲು ಮುಂದಾಗಿತ್ತು.

ರೂಪಾ ಅವರನ್ನು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮತ್ತು ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಸರ್ಕಾರ ವರ್ಗಾವಣೆ ಮಾಡಿತ್ತು. ತಮ್ಮನ್ನು ವರ್ಗಾವಣೆ ಮಾಡಿರುವುಕ್ಕೆ ರೂಪಾ ಬೇಸರ ವ್ಯಕ್ತಪಡಿಸಿದ್ದರು. ‘ಈ ವರ್ಗಾವಣೆಯು ನನ್ನನ್ನೂ, ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ’ ಎಂದು ಆಕ್ಷೇಪಿಸಿದ್ದರು.

ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿದ ಕೇವಲ 11 ದಿನಗಳಲ್ಲಿ ಮತ್ತೊಮ್ಮೆ ವರ್ಗಾವಣೆ ಮಾಡಲಾಗಿದೆ. ಹೇಮಂತ್ ನಿಂಬಾಳ್ಕರ್ ಅವರ ಸೇವಾರ್ಹತೆಗೆ ಅನುಗುಣವಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿ ಹುದ್ದೆಯನ್ನು ಉನ್ನತೀಕರಿಸಲಾಗಿದೆ.

ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ

Published On - 10:58 pm, Mon, 11 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!