AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೊಮ್ಮೆ​ ವರ್ಗಾವಣೆ

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಂಬಾಳ್ಕರ್ ಪಾತ್ರದ ಬಗ್ಗೆ ಅಂದಿನ ಗೃಹ ಕಾರ್ಯದರ್ಶಿ ಡಿ.ರೂಪಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇಬ್ಬರೂ ಐಪಿಎಸ್​ ಅಧಿಕಾರಿಗಳ ನಡುವೆ ಹೇಳಿಕೆ-ಪ್ರತಿಹೇಳಿಕೆಗಳು ಕೆಲ ಸಮಯ ಹರಿದಾಡಿದ್ದವು.

ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೊಮ್ಮೆ​ ವರ್ಗಾವಣೆ
ಐಜಿಪಿ ಹೇಮಂತ್ ನಿಂಬಾಳ್ಕರ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Jan 11, 2021 | 11:19 PM

Share

ಬೆಂಗಳೂರು: ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಡಿ.31ರಂದು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರವು, ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಿತ್ತು.

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಂಬಾಳ್ಕರ್ ಪಾತ್ರದ ಬಗ್ಗೆ ಅಂದಿನ ಗೃಹ ಕಾರ್ಯದರ್ಶಿ ಡಿ.ರೂಪಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇಬ್ಬರೂ ಐಪಿಎಸ್​ ಅಧಿಕಾರಿಗಳ ನಡುವೆ ಹೇಳಿಕೆ-ಪ್ರತಿಹೇಳಿಕೆಗಳು ಕೆಲ ಸಮಯ ಹರಿದಾಡಿದ್ದವು. ನಂತರ ಇಬ್ಬರನ್ನೂ ವರ್ಗಾವಣೆ ಮಾಡಿ ಸರ್ಕಾರ ವಿವಾದಕ್ಕೆ ಇತಿಶ್ರೀ ಹಾಡಲು ಮುಂದಾಗಿತ್ತು.

ರೂಪಾ ಅವರನ್ನು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮತ್ತು ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಸರ್ಕಾರ ವರ್ಗಾವಣೆ ಮಾಡಿತ್ತು. ತಮ್ಮನ್ನು ವರ್ಗಾವಣೆ ಮಾಡಿರುವುಕ್ಕೆ ರೂಪಾ ಬೇಸರ ವ್ಯಕ್ತಪಡಿಸಿದ್ದರು. ‘ಈ ವರ್ಗಾವಣೆಯು ನನ್ನನ್ನೂ, ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ’ ಎಂದು ಆಕ್ಷೇಪಿಸಿದ್ದರು.

ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿದ ಕೇವಲ 11 ದಿನಗಳಲ್ಲಿ ಮತ್ತೊಮ್ಮೆ ವರ್ಗಾವಣೆ ಮಾಡಲಾಗಿದೆ. ಹೇಮಂತ್ ನಿಂಬಾಳ್ಕರ್ ಅವರ ಸೇವಾರ್ಹತೆಗೆ ಅನುಗುಣವಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿ ಹುದ್ದೆಯನ್ನು ಉನ್ನತೀಕರಿಸಲಾಗಿದೆ.

ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

ಇದು ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ: ಡಿ.ರೂಪಾ

Published On - 10:58 pm, Mon, 11 January 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ