AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS Transferred: ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಇತ್ತೀಗೆಚೆ ವರ್ಗಾವಣೆ ಮಾಡಲಾಗಿತ್ತು. ಇದೀಗ ನಾಲ್ವರು ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. 

IPS Transferred: ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ
ಸರ್ಕಾರ
ಕಿರಣ್​ ಹನಿಯಡ್ಕ
| Edited By: |

Updated on:Feb 01, 2024 | 11:09 PM

Share

ಬೆಂಗಳೂರು, ಫೆಬ್ರುವರಿ 1: ನಾಲ್ವರು ಐಪಿಎಸ್(IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು), ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ) ಮತ್ತು ಎ.ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ.

4 ಐಪಿಎಸ್ ಅಧಿಕಾರಿಗಳ ವರ್ಗಾವಣೆ

  • ಅಮಿತ್ ಸಿಂಗ್: ಡಿಐಜಿ, ದಕ್ಷಿಣ ವಲಯ
  • ಡಾ. ಎಂ.ಬಿ. ಬೋರಲಿಂಗಯ್ಯ: ಡಿಐಜಿ, ಪಶ್ಚಿಮ ವಲಯ
  • ಎಸ್.ಪಿ‌. ದೇವರಾಜು: ಎಸ್ಪಿ, ಕಲಬುರಗಿ
  • ಎ. ಶ್ರೀನಿವಾಸುಲು: ಡಿಸಿಪಿ ಸಂಚಾರ, ದಕ್ಷಿಣ ವಿಭಾಗ, ಬೆಂಗಳೂರು ನಗರ

42 ಕೆಎಎಸ್​ ಅಧಿಕಾರಿಗಳ ವರ್ಗಾವಣೆ

ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ವರ್ಗಾವಣೆ 42 ಕೆಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಹುದ್ದೆಗಳಲ್ಲೇ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

218 ಪಿಎಸ್‌ಐಗಳ ವರ್ಗಾವಣೆ

ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಇತ್ತೀಗೆಚೆ ವರ್ಗಾವಣೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಮೇಜರ್​ ಸರ್ಜರಿ ಮಾಡಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ 218 ಪಿಎಸ್‌ಐಗಳನ್ನು ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆ ಆದೇಶ ಹೊರಡಿಸಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ: ಹೊಸ ವರ್ಷಕ್ಕೆ ಮುನ್ನವೇ 37 ಐಪಿಎಸ್​ಗಳ ವರ್ಗಾವಣೆ, 46 IAS ಅಧಿಕಾರಿಗಳಿಗೆ ಬಡ್ತಿ: ಸರ್ಕಾರ ಆದೇಶ

ಶಿವಪ್ಪ ಎಂ.ನಾಯ್ಕರ್‌-ರಾಮಮೂರ್ತಿನಗರ ಠಾಣೆ, ಶಿವಪ್ಪ -ವೈಟ್‌ಫೀಲ್ಡ್‌ ಠಾಣೆ, ರಮಾದೇವಿ ಬಿ.ಎಸ್‌.ಮಹದೇವಪುರ ಠಾಣೆ, ಮೂರ್ತಿ- ಮಲ್ಲೇಶ್ವರಂ ಠಾಣೆ, ಪ್ರಭುಗೌಡ ಎಸ್‌. ಪಾಟೀಲ್‌-ಆಡುಗೋಡಿ ಸಂಚಾರ ಠಾಣೆ, ವಿನೂತ್‌ ಎಚ್‌.ಎಂ.-ಬಸವನಗುಡಿ ಠಾಣೆ, ಶ್ರೀನಿವಾಸ್‌ ಪ್ರಸಾದ್- ಹುಳಿಮಾವು ಠಾಣೆಗೆ ಸೇರಿ 218 ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವಧಿ ಮತ್ತೆ ವಿಸ್ತರಣೆ

ರಾಜ್ಯ ಸರ್ಕಾರ ಇತ್ತೀಚೆಗೆ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿತ್ತು. ಕೆಲ ಹಿಂದಷ್ಟೇ 2018, 2019 ಮತ್ತು 2020ರ ಬ್ಯಾಚ್‌ನ ಹತ್ತು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:01 pm, Thu, 1 February 24

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​