AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

ಇರಾನ್​ ಮತ್ತು ಅಮೆರಿಕ, ಇಸ್ರೇಲ್​ ಯುದ್ಧದಾಹಕ್ಕೆ ದೇಶದಲ್ಲಿ ಗ್ಯಾಸ್​ ಸಿಲಿಂಡರ್​ಗಳ ಕಥೆಯೇ ಅಯೋಮಯವಾಗಿದೆ. ಇತ್ತ ಕರ್ನಾಟಕದಲ್ಲಿ ಕೂಡ ಗ್ಯಾಸ್​ ಸಿಲಿಂಡರ್​​ ಕೊರತೆ ವಿಷಯವೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಸಿಟಿ ಜನರಿಗೆ ಮತ್ತೊಂದು ಶಾಕ್​​ ಎದುರಾಗಿದೆ. ಅದೇನೆಂದರೆ ಅಡುಗೆ ಎಣ್ಣೆ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಎದುರಾಗಿದೆ.

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!
ಅಡುಗೆ ಎಣ್ಣೆImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Mar 13, 2026 | 3:11 PM

Share

ಬೆಂಗಳೂರು, ಮಾರ್ಚ್​​ 13: ಇಸ್ರೇಲ್​, ಅಮೆರಿಕ ಮತ್ತು ಇರಾನ್​ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಯುದ್ಧದ ಎಫೆಕ್ಟ್​​ಗೆ ರಾಜ್ಯದಲ್ಲಿ ಕಮರ್ಷಿಯಲ್​ ಗ್ಯಾಸ್​​​ನ ಅಭಾವ ಸೃಷ್ಟಿಯಾಗಿದೆ. ಈ ಮಧ್ಯೆ ಹೋಟೆಲ್​​ ನಂತರ ಇದೀಗ ಅಡುಗೆ ಎಣ್ಣೆ (cooking oil) ಅಂಗಡಿಯ ಸರದಿ. ಗ್ಯಾಸ್​​ನಂತೆ ಅಡುಗೆ ಆಯಿಲ್ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ. ಆ ಮೂಲಕ ಸಿಟಿ ಜನರಿಗೆ ಮತ್ತೊಂದು ಶಾಕ್​​ ಎದುರಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಕೇಳತೀರದಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಬಂದ್​ ಕೂಡ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ.

ಅಡುಗೆ ಎಣ್ಣೆ ಅಂಗಡಿಯ ಮಾಲೀಕರು ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಅಡುಗೆ ಎಣ್ಣೆ ಅಂಗಡಿಯ ಮಾಲೀಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100 ರಿಂದ 200 ಬಾಕ್ಸ್ ಬುಕ್ ಮಾಡಿದರೆ ಕೇವಲ 20 ರಿಂದ 50 ಬಾಕ್ಸ್​​ ಮಾತ್ರ ಏಜೆಂಟರು ಕಳಿಸುತ್ತಿದ್ದಾರೆ. ಏಕೆ ಅಂತಾ ಕೇಳಿದರೆ ಸಪ್ಲೈ ಆಗುತ್ತಿಲ್ಲ ಎನ್ನುತ್ತಿದ್ದಾರೆ. ಹೆಚ್ಚು ಬಾಕ್ಸ್ ನೀಡುವುದಕ್ಕೆ ಆಗಲ್ಲ ಎನ್ನುತ್ತಿದ್ದಾರೆ. ಇದರ ನಡುವೆ 15 ರಿಂದ 20 ರೂ ದರ ಕೂಡ ಜಾಸ್ತಿ ಆಗಿದೆ. ಇದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎನ್ನುತ್ತಿದ್ದಾರೆ ಮಾಲೀಕರು.

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲೂ ಸಿಲಿಂಡರ್ ಅಭಾವ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೂ ಕಮರ್ಷಿಯಲ್ ಸಿಲಿಂಡರ್​​ ಅಭಾವದ ಎಫೆಕ್ಟ್​ ತಟ್ಟಿದೆ. ಆಸ್ಪತ್ರೆ ಹೊರಗಿರುವ ಫುಡ್​ ಪ್ಯಾಲೇಸ್​​ನಲ್ಲಿ ಅನ್ನ ಸಾಂಬಾರ್, ರೈಸ್ ಬಾತ್ ಸೇರಿ ಕೆಲವೇ ಕೆಲವು ಆಹಾರ ಲಭ್ಯವಾಗುತ್ತಿದೆ. ಚೈನೀಸ್, ತಂದೂರ್ ಆಹಾರಗಳ ತಯಾರಿಕೆಯನ್ನ ನಿಲ್ಲಿಸಿದ್ದಾರೆ.

ಕೆ.ಆರ್​ ಮಾರ್ಕೆಟ್​ನಲ್ಲಿ ತರಕಾರಿ ವ್ಯಾಪಾರಕ್ಕೆ ತಟ್ಟಿದ ಬಿಸಿ

ಕಮರ್ಷಿಯಲ್ ಸಿಲಿಂಡರ್ ಇಲ್ಲದೇ ದರ್ಶಿನಿ, ಬೀದಿ ಬದಿ ಹೋಟೆಲ್​​ಗಳು ಕ್ಲೋಸ್ ಆಗಿವೆ. ಇದರಿಂದ ಕೆ.ಆರ್​ ಮಾರ್ಕೆಟ್​​ನಲ್ಲಿ ತರಕಾರಿ ವ್ಯಾಪಾರದ ಮೇಲೂ ಪರಿಣಾಮ ಬೀರಿದೆ. ಹೋಟೆಲ್​ಗಳು ಬಂದ್ ಆಗಿರೋದ್ರಿಂದ ತರಕಾರಿ ತೆಗೆದುಕೊಳ್ಳೋರೇ ಇಲ್ಲದಂತಾಗಿದೆ.

ವರದಿ: ಅರುಣ್​​ ಕುಮಾರ್​ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!