AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಕ್ರಮ ಆರೋಪ; ಶ್ರೀ ಚೈತನ್ಯ ಶಾಲೆ ಬಳಿ ಪೋಷಕರ ಪ್ರತಿಭಟನೆ‌

ಸಿಬಿಎಸ್​ಸಿ 10 ನೇ ತರಗತಿ ಫಲಿತಾಂಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಾಥಮಿಕ ಹಾಗೂ ಮಧ್ಯಂತರ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಿದೆ. ಅದ್ರೆ ಕಡಿಮೆ ಅಂಕ ಪಡೆದಿದ್ದವರಿಗೆ ಫೈನಲ್​​​ನಲ್ಲಿ ಹೆಚ್ಚು ಅಂಕ ನೀಡಿದ ಆರೋಪ ಕೇಳಿಬಂದಿದೆ.

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಕ್ರಮ ಆರೋಪ; ಶ್ರೀ ಚೈತನ್ಯ ಶಾಲೆ ಬಳಿ ಪೋಷಕರ ಪ್ರತಿಭಟನೆ‌
ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಕ್ರಮ ಆರೋಪ; ಶ್ರೀ ಚೈತನ್ಯ ಶಾಲೆ ಬಳಿ ಪೋಷಕರ ಪ್ರತಿಭಟನೆ‌
TV9 Web
| Edited By: |

Updated on: Aug 05, 2021 | 10:01 AM

Share

ರಾಯಚೂರು: ನಿನ್ನೆ ಪ್ರಕಟವಾದ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಯಚೂರಿನ ಶ್ರೀ ಚೈತನ್ಯ ಶಾಲೆ ಬಳಿ ಪೋಷಕರು ಪ್ರತಿಭಟನೆ‌ಯಲ್ಲಿ ತೊಡಗಿದ್ದಾರೆ. 

ವಿದ್ಯಾರ್ಥಿಗಳಿಗೆ ಮನಸೋಇಚ್ಛೆ ಅಂಕ ನೀಡಿರುವ ಆರೋಪ ಎದುರಾಗಿದ್ದು, ಶ್ರೀ ಚೈತನ್ಯ ಶಾಲೆಯು ಸಿಬಿಎಸ್‌ಇ ಬೋರ್ಡ್‌ಗೆ ತಪ್ಪು ಮಾಹಿತಿ ರವಾನೆ ಮಾಡಿದೆ ಎಂದು ಶ್ರೀ ಚೈತನ್ಯ ಶಾಲೆಯ ಆಡಳಿತ ಮಂಡಳಿ ವಿರುದ್ಧ ಆರೋಪ ಕೇಳಿ ಬಂದಿದೆ. ಇದರಿಂದ ಪ್ರತಿಭಾವಂತ ಮಕ್ಕಳಿಗೆ ಅನ್ಯಾಯವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಬಿಎಸ್​ಸಿ 10 ನೇ ತರಗತಿ ಫಲಿತಾಂಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಾಥಮಿಕ ಹಾಗೂ ಮಧ್ಯಂತರ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಿದೆ. ಅದ್ರೆ ಕಡಿಮೆ ಅಂಕ ಪಡೆದಿದ್ದವರಿಗೆ ಫೈನಲ್​​​ನಲ್ಲಿ ಹೆಚ್ಚು ಅಂಕ ನೀಡಿದ ಆರೋಪ ಕೇಳಿಬಂದಿದೆ. ಹೆಚ್ಚು ಅಂಕ ಪಡೆದಿದ್ದ ಟಾಪರ್ಸ್​​ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ನೀಡಲಾಗಿದೆ ಎಂಬ ಆರೋಪ ಎದುರಾಗಿದೆ. ಹೀಗಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು ಅದನ್ನು ಸರಿಪಡಿಸುವಂತೆ ಶಾಲೆಗೆ ನುಗ್ಗಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ಇನ್ನು, ಶಾಲಾ ಮುಖ್ಯೋಪಾಧ್ಯಾಯರು ಪೋಷಕರ ಆಕ್ಷೇಪಕ್ಕೆ ಉತ್ತರಿಸದೇ  ಪಲಾಯನವಾದ‌ ಮಾಡಿದ್ದಾರೆ. ಇದರಿಂದ ಅನ್ಯಾಯ ಸರಿಪಡಿಸುವಂತೆ ಪೋಷಕರು ನಗರದದಲ್ಲಿರುವ ಶ್ರೀಚೈತನ್ಯ ಶಾಲೆ ಬಳಿ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

(irregularities in CBSE 10 results parents protest at sri chaitanya school in raichur)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?