AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಕ್ರಮ ಆರೋಪ; ಶ್ರೀ ಚೈತನ್ಯ ಶಾಲೆ ಬಳಿ ಪೋಷಕರ ಪ್ರತಿಭಟನೆ‌

ಸಿಬಿಎಸ್​ಸಿ 10 ನೇ ತರಗತಿ ಫಲಿತಾಂಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಾಥಮಿಕ ಹಾಗೂ ಮಧ್ಯಂತರ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಿದೆ. ಅದ್ರೆ ಕಡಿಮೆ ಅಂಕ ಪಡೆದಿದ್ದವರಿಗೆ ಫೈನಲ್​​​ನಲ್ಲಿ ಹೆಚ್ಚು ಅಂಕ ನೀಡಿದ ಆರೋಪ ಕೇಳಿಬಂದಿದೆ.

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಕ್ರಮ ಆರೋಪ; ಶ್ರೀ ಚೈತನ್ಯ ಶಾಲೆ ಬಳಿ ಪೋಷಕರ ಪ್ರತಿಭಟನೆ‌
ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಕ್ರಮ ಆರೋಪ; ಶ್ರೀ ಚೈತನ್ಯ ಶಾಲೆ ಬಳಿ ಪೋಷಕರ ಪ್ರತಿಭಟನೆ‌
TV9 Web
| Edited By: ಸಾಧು ಶ್ರೀನಾಥ್​|

Updated on: Aug 05, 2021 | 10:01 AM

Share

ರಾಯಚೂರು: ನಿನ್ನೆ ಪ್ರಕಟವಾದ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಯಚೂರಿನ ಶ್ರೀ ಚೈತನ್ಯ ಶಾಲೆ ಬಳಿ ಪೋಷಕರು ಪ್ರತಿಭಟನೆ‌ಯಲ್ಲಿ ತೊಡಗಿದ್ದಾರೆ. 

ವಿದ್ಯಾರ್ಥಿಗಳಿಗೆ ಮನಸೋಇಚ್ಛೆ ಅಂಕ ನೀಡಿರುವ ಆರೋಪ ಎದುರಾಗಿದ್ದು, ಶ್ರೀ ಚೈತನ್ಯ ಶಾಲೆಯು ಸಿಬಿಎಸ್‌ಇ ಬೋರ್ಡ್‌ಗೆ ತಪ್ಪು ಮಾಹಿತಿ ರವಾನೆ ಮಾಡಿದೆ ಎಂದು ಶ್ರೀ ಚೈತನ್ಯ ಶಾಲೆಯ ಆಡಳಿತ ಮಂಡಳಿ ವಿರುದ್ಧ ಆರೋಪ ಕೇಳಿ ಬಂದಿದೆ. ಇದರಿಂದ ಪ್ರತಿಭಾವಂತ ಮಕ್ಕಳಿಗೆ ಅನ್ಯಾಯವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಬಿಎಸ್​ಸಿ 10 ನೇ ತರಗತಿ ಫಲಿತಾಂಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಾಥಮಿಕ ಹಾಗೂ ಮಧ್ಯಂತರ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಿದೆ. ಅದ್ರೆ ಕಡಿಮೆ ಅಂಕ ಪಡೆದಿದ್ದವರಿಗೆ ಫೈನಲ್​​​ನಲ್ಲಿ ಹೆಚ್ಚು ಅಂಕ ನೀಡಿದ ಆರೋಪ ಕೇಳಿಬಂದಿದೆ. ಹೆಚ್ಚು ಅಂಕ ಪಡೆದಿದ್ದ ಟಾಪರ್ಸ್​​ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ನೀಡಲಾಗಿದೆ ಎಂಬ ಆರೋಪ ಎದುರಾಗಿದೆ. ಹೀಗಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು ಅದನ್ನು ಸರಿಪಡಿಸುವಂತೆ ಶಾಲೆಗೆ ನುಗ್ಗಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ಇನ್ನು, ಶಾಲಾ ಮುಖ್ಯೋಪಾಧ್ಯಾಯರು ಪೋಷಕರ ಆಕ್ಷೇಪಕ್ಕೆ ಉತ್ತರಿಸದೇ  ಪಲಾಯನವಾದ‌ ಮಾಡಿದ್ದಾರೆ. ಇದರಿಂದ ಅನ್ಯಾಯ ಸರಿಪಡಿಸುವಂತೆ ಪೋಷಕರು ನಗರದದಲ್ಲಿರುವ ಶ್ರೀಚೈತನ್ಯ ಶಾಲೆ ಬಳಿ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

(irregularities in CBSE 10 results parents protest at sri chaitanya school in raichur)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು