AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕಾದಿದ್ಯಾ ಮತ್ತೊಂದು ಗಂಡಾಂತರ.. ಬ್ರಿಟನ್‌ ಭೂತ ಆಯ್ತು.. ಈಗ ಬ್ರೆಜಿಲ್‌ ಕಂಟಕ..

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಸಿ ಅನ್ನೋ ಹಾಗೆ ಈ ಹೆಮ್ಮಾರಿ ಕೊರೊನಾ ಮತ್ತೆ ಮತ್ತೆ ನಾನಾ ರೂಪದಲ್ಲಿ ಎಂಟ್ರಿಕೊಡ್ತಿದೆ. ಈ ಮ್ಯೂಟೇಶನ್‌ ಭೂತ ಮತ್ತೆ ವಕ್ಕರಿಸಿದ್ದು, ಇದೀಗ ಲಂಡನ್‌ ಬದಲಿಗೆ ಬ್ರೆಜಿಲ್‌ ಭಯ ಶುರುವಾಗಿದೆ.

ಬೆಂಗಳೂರಿಗೆ ಕಾದಿದ್ಯಾ ಮತ್ತೊಂದು ಗಂಡಾಂತರ.. ಬ್ರಿಟನ್‌ ಭೂತ ಆಯ್ತು.. ಈಗ ಬ್ರೆಜಿಲ್‌ ಕಂಟಕ..
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Feb 17, 2021 | 1:25 PM

Share

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಮ್ಮೆ ಕೊರೊನಾ ಹೈ ಅಲರ್ಟ್‌ ಮಂತ್ರ ಜಪಿಸುತ್ತಿದೆ ಆರೋಗ್ಯ ಇಲಾಖೆ. ಬ್ರಿಟನ್‌ ಹೊಸ ರೂಪಾಂತರಿ ವೈರಸ್‌ ಬಗ್ಗೆ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರ ವಹಿಸಲಾಗ್ತಿದೆ. ಇದ್ರ ಬೆನ್ನಲ್ಲೇ ಈಗ ಬ್ರೆಜಿಲ್‌ ಮತ್ತು ದಕ್ಷಿಣ ಆಫ್ರಿಕಾದಲ್ಲಿ ನೂತನ ಕೊರೊನಾ ರೂಪಾಂತರಿ ವೈರಸ್‌ ಪತ್ತೆಯಾಗಿದ್ದು, ಕರುನಾಡಿಗೂ ಕಂಟಕದ ಭೀತಿ ಎದುರಾಗಿದೆ. ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಲಾಗಿದೆ.

ಬ್ರೆಜಿಲ್‌ ಮತ್ತು ದಕ್ಷಿಣ ಆಫ್ರಿಕಾ ಪ್ರಯಾಣದ ಹಿನ್ನೆಲೆ ಇರುವವರಿಗೆಲ್ಲಾ ಆರ್‌ಟಿಪಿಸಿಆರ್‌ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಅವ್ರ ಬಳಿ ನೆಗೆಟಿವ್‌ ರಿಪೋರ್ಟ್‌ ಇದ್ರೂ ಇಲ್ಲಿಗೆ ಬಂದ ನಂತ್ರ ಕಡ್ಡಯಾವಾಗಿ ಆರ್‌ಟಿಪಿಸಿಆರ್‌ ಮಾಡಿಸಲೇಬೇಕು. ಪಾಸಿಟಿವ್‌ ಬಂದವ್ರಿಗೆ 14ನ ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ ಮಾಡಲಾಗಿದೆ. ಎಲ್ಲಾ ಪಾಸಿಟಿವ್‌ ಸ್ಯಾಂಪಲ್‌ಗಳನ್ನ ನಿಮ್ಹಾನ್ಸ್‌ಗೆ ಜೆನೆಟಿಕ್‌ ಪರೀಕ್ಷೆಗೆ ರವಾನೆ ಮಾಡಲಾಗುತ್ತೆ. ನೆಗೆಟಿವ್ ಬಂದವರು 14 ದಿನ ಹೋಮ್‌ ಕ್ವಾರಂಟೈನ್‌ ಆಗಲೇಬೇಕು. ಅವ್ರಿಗೂ 7ನೇ ದಿನ ಮತ್ತೊಮ್ಮೆ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗುವುದು ಅಂತ ಆರೋಗ್ಯ ಇಲಾಖೆ ಹೇಳಿದೆ.

ಕೇರಳದಿಂದ ಬಂದವರಿಗೂ ಕೊರೊನಾ ಟೆಸ್ಟ್ ಕಡ್ಡಾಯ ಇನ್ನು ಕೇರಳದಿಂದ ಬಂದವರಿಗೂ ಕೊರೊನಾ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಪಾಸಿಟಿವ್‌ ಕಂಡು ಬಂದ್ರೆ ಅವರ ಸ್ಯಾಂಪಲ್‌ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಒಳಪಡಿಸಲಾಗುತ್ತೆ. ಕೇರಳದಿಂದ ಬರುವವರು ಶಿಕ್ಷಣಕ್ಕಾಗಿ, ಪ್ರವಾಸಕ್ಕಾಗಿ, ರೆಸಾರ್ಟ್‌ಗಳಲ್ಲಿ ಉಳಿದುಕೊಳ್ಳುವವರಾಗಲಿ ಆರ್‌ಟಿಪಿಸಿಆರ್‌ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯವಾಗಿದೆ. ಅದು ಕೂಡ 72 ಗಂಟೆಯೊಳಗೆ ಟೆಸ್ಟ್ ಮಾಡಿಸಿರೋ ರಿಪೋರ್ಟ್‌ ಇರಬೇಕು. ಇದ್ರ ನಡುವೆ ಬೊಮ್ಮನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. 1052 ಜನರಿಗೆ ಟೆಸ್ಟ್ ಮಾಡಲಾಗಿದ್ದು, 103 ಜನರಿಗೆ ಸೋಂಕು ಕಾಣಿಸಿಕೊಂಡಿದೆ.

ಒಟ್ನಲ್ಲಿ ಕೊರೊನಾ ಮಹಾಮಾರಿ ಕಂಟಕ ಮತ್ತೆ ಶುರುವಾಗಿದೆ. ಬೇರೆ ಬೇರೆ ದೇಶಗಳಿಂದ ಮತ್ತೊಮ್ಮೆ ನಮ್ಮ ರಾಜ್ಯಕ್ಕೆ ಎಂಟ್ರಿಕೊಟ್ರೆ ಹೇಗಪ್ಪ ಅನ್ನೋ ಭಯ ಆವರಿಸಿದೆ. ಇದರಿಂದಾಗಿ ಏರ್‌ಪೋರ್ಟ್‌ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗ್ತಿದೆ.

ಇದನ್ನೂ ಓದಿ: BBMP ಬೆಂಗಳೂರಲ್ಲಿ ಮತ್ತೆ ಕೊರೊನಾ ಹಾವಳಿ: ಕಾವಲ್‌ಭೈರಸಂದ್ರದಲ್ಲಿ 40 ಕೇಸ್​, ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಸೋಂಕು ದೃಢ

Published On - 7:07 am, Wed, 17 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?