AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕಾದಿದ್ಯಾ ಮತ್ತೊಂದು ಗಂಡಾಂತರ.. ಬ್ರಿಟನ್‌ ಭೂತ ಆಯ್ತು.. ಈಗ ಬ್ರೆಜಿಲ್‌ ಕಂಟಕ..

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಸಿ ಅನ್ನೋ ಹಾಗೆ ಈ ಹೆಮ್ಮಾರಿ ಕೊರೊನಾ ಮತ್ತೆ ಮತ್ತೆ ನಾನಾ ರೂಪದಲ್ಲಿ ಎಂಟ್ರಿಕೊಡ್ತಿದೆ. ಈ ಮ್ಯೂಟೇಶನ್‌ ಭೂತ ಮತ್ತೆ ವಕ್ಕರಿಸಿದ್ದು, ಇದೀಗ ಲಂಡನ್‌ ಬದಲಿಗೆ ಬ್ರೆಜಿಲ್‌ ಭಯ ಶುರುವಾಗಿದೆ.

ಬೆಂಗಳೂರಿಗೆ ಕಾದಿದ್ಯಾ ಮತ್ತೊಂದು ಗಂಡಾಂತರ.. ಬ್ರಿಟನ್‌ ಭೂತ ಆಯ್ತು.. ಈಗ ಬ್ರೆಜಿಲ್‌ ಕಂಟಕ..
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Feb 17, 2021 | 1:25 PM

Share

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಮ್ಮೆ ಕೊರೊನಾ ಹೈ ಅಲರ್ಟ್‌ ಮಂತ್ರ ಜಪಿಸುತ್ತಿದೆ ಆರೋಗ್ಯ ಇಲಾಖೆ. ಬ್ರಿಟನ್‌ ಹೊಸ ರೂಪಾಂತರಿ ವೈರಸ್‌ ಬಗ್ಗೆ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರ ವಹಿಸಲಾಗ್ತಿದೆ. ಇದ್ರ ಬೆನ್ನಲ್ಲೇ ಈಗ ಬ್ರೆಜಿಲ್‌ ಮತ್ತು ದಕ್ಷಿಣ ಆಫ್ರಿಕಾದಲ್ಲಿ ನೂತನ ಕೊರೊನಾ ರೂಪಾಂತರಿ ವೈರಸ್‌ ಪತ್ತೆಯಾಗಿದ್ದು, ಕರುನಾಡಿಗೂ ಕಂಟಕದ ಭೀತಿ ಎದುರಾಗಿದೆ. ಹೀಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಲಾಗಿದೆ.

ಬ್ರೆಜಿಲ್‌ ಮತ್ತು ದಕ್ಷಿಣ ಆಫ್ರಿಕಾ ಪ್ರಯಾಣದ ಹಿನ್ನೆಲೆ ಇರುವವರಿಗೆಲ್ಲಾ ಆರ್‌ಟಿಪಿಸಿಆರ್‌ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಅವ್ರ ಬಳಿ ನೆಗೆಟಿವ್‌ ರಿಪೋರ್ಟ್‌ ಇದ್ರೂ ಇಲ್ಲಿಗೆ ಬಂದ ನಂತ್ರ ಕಡ್ಡಯಾವಾಗಿ ಆರ್‌ಟಿಪಿಸಿಆರ್‌ ಮಾಡಿಸಲೇಬೇಕು. ಪಾಸಿಟಿವ್‌ ಬಂದವ್ರಿಗೆ 14ನ ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ ಮಾಡಲಾಗಿದೆ. ಎಲ್ಲಾ ಪಾಸಿಟಿವ್‌ ಸ್ಯಾಂಪಲ್‌ಗಳನ್ನ ನಿಮ್ಹಾನ್ಸ್‌ಗೆ ಜೆನೆಟಿಕ್‌ ಪರೀಕ್ಷೆಗೆ ರವಾನೆ ಮಾಡಲಾಗುತ್ತೆ. ನೆಗೆಟಿವ್ ಬಂದವರು 14 ದಿನ ಹೋಮ್‌ ಕ್ವಾರಂಟೈನ್‌ ಆಗಲೇಬೇಕು. ಅವ್ರಿಗೂ 7ನೇ ದಿನ ಮತ್ತೊಮ್ಮೆ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗುವುದು ಅಂತ ಆರೋಗ್ಯ ಇಲಾಖೆ ಹೇಳಿದೆ.

ಕೇರಳದಿಂದ ಬಂದವರಿಗೂ ಕೊರೊನಾ ಟೆಸ್ಟ್ ಕಡ್ಡಾಯ ಇನ್ನು ಕೇರಳದಿಂದ ಬಂದವರಿಗೂ ಕೊರೊನಾ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಪಾಸಿಟಿವ್‌ ಕಂಡು ಬಂದ್ರೆ ಅವರ ಸ್ಯಾಂಪಲ್‌ ಜಿನೋಮ್‌ ಸೀಕ್ವೆನ್ಸಿಂಗ್‌ಗೆ ಒಳಪಡಿಸಲಾಗುತ್ತೆ. ಕೇರಳದಿಂದ ಬರುವವರು ಶಿಕ್ಷಣಕ್ಕಾಗಿ, ಪ್ರವಾಸಕ್ಕಾಗಿ, ರೆಸಾರ್ಟ್‌ಗಳಲ್ಲಿ ಉಳಿದುಕೊಳ್ಳುವವರಾಗಲಿ ಆರ್‌ಟಿಪಿಸಿಆರ್‌ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯವಾಗಿದೆ. ಅದು ಕೂಡ 72 ಗಂಟೆಯೊಳಗೆ ಟೆಸ್ಟ್ ಮಾಡಿಸಿರೋ ರಿಪೋರ್ಟ್‌ ಇರಬೇಕು. ಇದ್ರ ನಡುವೆ ಬೊಮ್ಮನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. 1052 ಜನರಿಗೆ ಟೆಸ್ಟ್ ಮಾಡಲಾಗಿದ್ದು, 103 ಜನರಿಗೆ ಸೋಂಕು ಕಾಣಿಸಿಕೊಂಡಿದೆ.

ಒಟ್ನಲ್ಲಿ ಕೊರೊನಾ ಮಹಾಮಾರಿ ಕಂಟಕ ಮತ್ತೆ ಶುರುವಾಗಿದೆ. ಬೇರೆ ಬೇರೆ ದೇಶಗಳಿಂದ ಮತ್ತೊಮ್ಮೆ ನಮ್ಮ ರಾಜ್ಯಕ್ಕೆ ಎಂಟ್ರಿಕೊಟ್ರೆ ಹೇಗಪ್ಪ ಅನ್ನೋ ಭಯ ಆವರಿಸಿದೆ. ಇದರಿಂದಾಗಿ ಏರ್‌ಪೋರ್ಟ್‌ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗ್ತಿದೆ.

ಇದನ್ನೂ ಓದಿ: BBMP ಬೆಂಗಳೂರಲ್ಲಿ ಮತ್ತೆ ಕೊರೊನಾ ಹಾವಳಿ: ಕಾವಲ್‌ಭೈರಸಂದ್ರದಲ್ಲಿ 40 ಕೇಸ್​, ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಸೋಂಕು ದೃಢ

Published On - 7:07 am, Wed, 17 February 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು