AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕರಂದ್ಲಾಜೆ ಪ್ರಶ್ನೆ

ನಟ ದರ್ಶನ್ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದರು. ಇದನ್ನೇ ಮುಂದಿಟ್ಟುಕೊಂಡು ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ದರ್ಶನ್​ರನ್ನು ರಕ್ಷಣೆ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕರಂದ್ಲಾಜೆ ಪ್ರಶ್ನೆ
ಶೋಭಾ ಕರಂದ್ಲಾಜೆ
ಕಿರಣ್​ ಹನಿಯಡ್ಕ
| Edited By: |

Updated on: Jun 14, 2024 | 1:54 PM

Share

ಬೆಂಗಳೂರು, ಜೂನ್ 14: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Congress Givernment) ಅಸ್ತಿತ್ವಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೊಲೆಗಡುಕರ ಪರ ಇದೆ. ಕೊಲೆಗಡುಕರಿಗೆ ರಾಜ್ಯದಲ್ಲಿ ಭಯ ಇಲ್ಲ. ನಟ ದರ್ಶನ್ (Darshan) ಕಾಂಗ್ರೆಸ್ ಪರ ಚುನಾವಣೆಯಲ್ಲಿ ಕೆಲಸ ಮಾಡಿದರು ಎಂದು ಅವರನ್ನು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪ್ರಶ್ನಿಸಿದರು. ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಮಾತನಾಡಿದ ಅವರು, ದರ್ಶನ್ ಇರುವ ಠಾಣೆಗೆ ರಕ್ಷಣೆ ಕೊಡಲಾಗಿದೆ. ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ ಎಂದರು.

ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು ಎಂದು ಶೋಭಾ ಹೇಳಿದರು.

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಕೇಸಿನ ಮಾಹಿತಿ ಗೊತ್ತಿಲ್ಲ. ಮಾಧ್ಯಮದ ಮೂಲಕ ಅಷ್ಟೇ ನೋಡಿದ್ದೇನೆ. ಯಡಿಯೂರಪ್ಪ ಅವರ ಸುದೀರ್ಘವಾದ ರಾಜಕಾರಣ ನೋಡಿದ್ದೇನೆ. ಇದರಲ್ಲಿ ಸರ್ಕಾರದ ಪಾತ್ರದ ಬಗ್ಗೆ ಗೊತ್ತಿಲ್ಲ. ನ್ಯಾಯಾಲಯ ನೆಲದ ಕಾನೂನು ಎತ್ತಿ ಹಿಡಿಯಲಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣ ಜನ ಗಮನಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ಯಡಿಯೂರಪ್ಪ ಬೇಗ ಬಂದರೆ ಒಳ್ಳೆಯದು; ಪರಮೇಶ್ವರ್ ಹೀಗಂದಿದ್ಯಾಕೆ? ವಿಡಿಯೋ ನೋಡಿ

ಈ ತರಹದ ಆರೋಪಗಳು ಯಡಿಯೂರಪ್ಪ ವಿರುದ್ಧ ಈ ಹಿಂದೆ ಯಾವತ್ತೂ ಕೇಳಿ ಬಂದಿರಲಿಲ್ಲ. ಈಗ ಯಾಕೆ ಅವರ ಬಗ್ಗೆ ಈ ತರಹ ಆರೋಪಗಳು ಬರುತ್ತಿವೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕುವಂತಹ ಪ್ರಕರಣಗಳನ್ನು ಕೂಡಾ ಜನ ಗಮನಿಸುತ್ತಿದ್ದಾರೆ ಎಂದು ಶೋಭಾ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?