AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ವ್ಯವಸ್ಥೆಗೆ ನುಸುಳಲು ಎಚ್​ಎಎಲ್​ ಕೋರ್ಸ್​​ ಸೇರಲು ಅರ್ಜಿ ಸಲ್ಲಿಸಿದ್ದ ಐಎಸ್​​ ಉಗ್ರರು: ಎನ್​ಐಎ ಸ್ಪೋಟಕ ಮಾಹಿತಿ

ಎನ್ಐಎ ಸಂಗ್ರಹಿಸಿದ ಮತ್ತು ವಿಶ್ಲೇಷಿಸಿದ ಮಾಹಿತಿಯ ಪ್ರಕಾರ, ಮಾಜ್ ಎಸ್​​ಕೆವೈಎಫ್ಐ ಲ್ಯಾಬ್ಸ್‌ನಲ್ಲಿ ‘7 ರೊಬೊಟಿಕ್ಸ್ ಆನ್‌ಲೈನ್ ಪ್ರಾಜೆಕ್ಟ್-ಆಧಾರಿತ ಕೋರ್ಸ್'ಗೆ ಸೇರಿದ್ದ ಮತ್ತು ರೊಬೊಟಿಕ್ಸ್ ಕಿಟ್ ಅನ್ನು ಸ್ವೀಕರಿಸಿದ್ದ. ಮತ್ತೊಬ್ಬ ಆರೋಪಿ ಸೈಯದ್ ಯಾಸಿನ್ ‘ಮೊಬೈಲ್ ರೋಬೋಟಿಕ್ ಆನ್‌ಲೈನ್ ಕೋರ್ಸ್'ಗೆ ಸೇರಿಕೊಂಡಿದ್ದ!

ರಕ್ಷಣಾ ವ್ಯವಸ್ಥೆಗೆ ನುಸುಳಲು ಎಚ್​ಎಎಲ್​ ಕೋರ್ಸ್​​ ಸೇರಲು ಅರ್ಜಿ ಸಲ್ಲಿಸಿದ್ದ ಐಎಸ್​​ ಉಗ್ರರು: ಎನ್​ಐಎ ಸ್ಪೋಟಕ ಮಾಹಿತಿ
ಎನ್​ಐಎ
ಗಣಪತಿ ಶರ್ಮಾ
|

Updated on: Oct 25, 2023 | 8:44 PM

Share

ಬೆಂಗಳೂರು, ಅಕ್ಟೋಬರ್ 25: ಇಸ್ಲಾಮಿಕ್ ಸ್ಟೇಟ್ (IS) ಉಗ್ರ ಸಂಘಟನೆ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದ ಆರೋಪಿ ಮಾಜ್ ಮುನೀರ್ ಅಹ್ಮದ್ (Maaz Muneer Ahmed) ಎಚ್‌ಎಎಲ್ (HAL) ಸೇರುವ ಮೂಲಕ ಭಾರತದ ರಕ್ಷಣಾ ವ್ಯವಸ್ಥೆಗೆ ಲಗ್ಗೆ ಇಡಲು ಸಂಚು ಹೂಡಿದ್ದ ಎಂಬ ಆತಂಕಕಾರಿ ವಿಚಾರ ಬಹಿರಂಗವಾಗಿದೆ. ಈ ವಿಚಾರವಾಗಿ ಆರೋಪಿಯ ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಇತರ ದಾಖಲೆಗಳಿಂದ ತಿಳಿದುಬಂದಿದೆ ಎಂದು ರಾಷ್ಟ್ರೀಯ ತನಿಖಾ ದಳ (NIA) ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ.

ಆರೋಪಿಯು ತನ್ನ ಆನ್​ಲೈನ್ ಹ್ಯಾಂಡ್ಲರ್​​​ನ ಸೂಚನೆಯಂತೆ ಬೆಂಗಳೂರಿನ ಎಚ್‌ಎಎಲ್ ಮ್ಯಾನೇಜ್‌ಮೆಂಟ್ ಅಕಾಡೆಮಿಯಲ್ಲಿ ಪಿಜಿ ಡಿಪ್ಲೊಮಾ ಇನ್ ಏವಿಯೇಷನ್ ​​ಮ್ಯಾನೇಜ್‌ಮೆಂಟ್ (PGDM) ಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದ ಎಂದು ಎನ್​ಐಎ ಹೇಳಿದೆ.

ಎನ್ಐಎ ಸಂಗ್ರಹಿಸಿದ ಮತ್ತು ವಿಶ್ಲೇಷಿಸಿದ ಮಾಹಿತಿಯ ಪ್ರಕಾರ, ಮಾಜ್ ಎಸ್​​ಕೆವೈಎಫ್ಐ ಲ್ಯಾಬ್ಸ್‌ನಲ್ಲಿ ‘7 ರೊಬೊಟಿಕ್ಸ್ ಆನ್‌ಲೈನ್ ಪ್ರಾಜೆಕ್ಟ್-ಆಧಾರಿತ ಕೋರ್ಸ್’ಗೆ ಸೇರಿದ್ದ ಮತ್ತು ರೊಬೊಟಿಕ್ಸ್ ಕಿಟ್ ಅನ್ನು ಸ್ವೀಕರಿಸಿದ್ದ. ಮತ್ತೊಬ್ಬ ಆರೋಪಿ ಸೈಯದ್ ಯಾಸಿನ್ ‘ಮೊಬೈಲ್ ರೋಬೋಟಿಕ್ ಆನ್‌ಲೈನ್ ಕೋರ್ಸ್’ಗೆ ಸೇರಿಕೊಂಡಿದ್ದ.

ಬೆಂಗಳೂರಿನ ಫುಡ್ ಡೆಲಿವರಿ ಬಾಯ್ ಮತ್ತು ರಾಪಿಡೋ ರೈಡರ್ ಆಗಿ ಕೆಲಸ ಮಾಡುತ್ತಿದ್ದ ಹುಝೈರ್ ಫರ್ಹಾನ್ ಬೇಗ್ (22) ಮತ್ತು ದಕ್ಷಿಣ ಕನ್ನಡದ ಎಂಜಿನಿಯರಿಂಗ್ ಪದವೀಧರ ಮಜಿನ್ ಅಬ್ದುಲ್ ರಹಮಾನ್ (22) ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸಲ್ಲಿಸಿದ ಆಕ್ಷೇಪಣೆಗಳಲ್ಲಿ ಎನ್‌ಐಎ ಈ ಸಂಗತಿಗಳನ್ನು ಬಹಿರಂಗಪಡಿಸಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: ಉಡುಪಿ ಕೃಷ್ಣ ಮಠ, ಬಿಜೆಪಿ ಕಚೇರಿ ಬ್ಲಾಸ್ಟ್​ಗೆ ಪ್ಲಾನ್: ಎನ್​ಐಎ ತನಿಖೆಯಲ್ಲಿ ಸ್ಪೋಟಕ ರಹಸ್ಯ ಬಯಲು

2022ರ ಆಗಸ್ಟ್‌ನಲ್ಲಿ ಶಿವಮೊಗ್ಗದಲ್ಲಿ ನಡೆದ ಪ್ರೇಮ್ ಸಿಂಗ್ ಹತ್ಯೆಯ ನಂತರ ದೊಡ್ಡ ಸಂಚು ರೂಪಿಸಿದ ಎಂಟು ಆರೋಪಿಗಳಲ್ಲಿ ಇವರಿಬ್ಬರೂ ಸೇರಿದ್ದಾರೆ. ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ತನ್ನ ಆನ್​ಲೈನ್ ಹ್ಯಾಂಡ್ಲರ್ ನಿರ್ದೇಶನದ ಮೇರೆಗೆ ಪ್ರೆಶರ್ ಕುಕ್ಕರ್ ಬಾಂಬ್ ಸಿದ್ಧಪಡಿಸಿದ್ದನ್ನು ಎನ್ಐಎ ಬಹಿರಂಗಪಡಿಸಿದೆ. ಮಂಗಳೂರಿನ ಕದ್ರಿ ದೇವಸ್ಥಾನಕ್ಕೆ ಕುಕ್ಕರ್ ಬಾಂಬ್ ಹಾಕಲು ತೆರಳುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡಿತ್ತು.

ಆನ್​ಲೈನ್ ಹ್ಯಾಂಡ್ಲರ್ ನಿರ್ದೇಶನದ ಮೇರೆಗೆ ಆರೋಪಿಗಳು ಶಿವಮೊಗ್ಗ, ಬ್ರಹ್ಮಾವರ ಮತ್ತು ಸುರತ್ಕಲ್‌ನಲ್ಲಿ ಹಿಂದೂಗಳಿಗೆ ಸೇರಿದ ಸರಕು ವಾಹನಗಳು, ಮದ್ಯ ಮಾರಾಟ ಮಳಿಗೆಗಳು, ಬಣ್ಣ ಮತ್ತು ಹಾರ್ಡ್‌ವೇರ್ ಅಂಗಡಿಗಳು ಮತ್ತು ಹೊನ್ನಾಳಿಯ ವಿಂಡ್‌ಮಿಲ್ ನಿಲ್ದಾಣವನ್ನು ಗುರಿಯಾಗಿಸಿಕೊಂಡಿದ್ದರು. ಅವರು ತ್ರಿವರ್ಣ ಧ್ವಜವನ್ನು ಸುಡುವ ವೀಡಿಯೊವನ್ನು ಸಹ ಹಂಚಿಕೊಂಡಿದ್ದರು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ