AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ವಯೋಜಿತ ರಾಜಕೀಯ ಷಡ್ಯಂತ್ರ ಎಂದು ನಿರೂಪಿಸಲು ಬಲವಾದ ಸಾಕ್ಷ್ಯದ ಬೇಟೆಯಲ್ಲಿ ರಮೇಶ್​ ಜಾರಕಿಹೊಳಿ?

ಸದ್ಯದ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸ್ತಿರುವ ರಮೇಶ್ ಜಾರಕಿಹೊಳಿ, ವಕೀಲರ ಸಲಹೆ ಪಡೆಯುತ್ತಿದ್ದು ನಿರೀಕ್ಷಣಾ ಜಾಮೀನು ಪಡೆಯಬೇಕೆ, ಬೇಡವೇ ಎಂದು ಚರ್ಚೆ ನಡೆಸಿದ್ದಾರೆ. ಹೇಗಾದರೂ ಮಾಡಿ ಬಲವಾದ ಸಾಕ್ಷಿ ಕಲೆಹಾಕುವ ಮೂಲಕ ಈ ಸಿಡಿ ರಾಜಕೀಯ ಷಡ್ಯಂತ್ರದ ಪ್ರತಿಫಲ ಎಂದು ತೋರಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಪೂರ್ವಯೋಜಿತ ರಾಜಕೀಯ ಷಡ್ಯಂತ್ರ ಎಂದು ನಿರೂಪಿಸಲು ಬಲವಾದ ಸಾಕ್ಷ್ಯದ ಬೇಟೆಯಲ್ಲಿ ರಮೇಶ್​ ಜಾರಕಿಹೊಳಿ?
ರಮೇಶ್ ಜಾರಕಿಹೊಳಿ‌
Skanda
|

Updated on:Apr 02, 2021 | 6:28 PM

Share

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸದ್ಯ ಗೋಕಾಕ್​ನಲ್ಲಿದ್ದಾರೆ ಹಾಗೂ ವಿಚಾರಣೆಗೆ ಹಾಜರಾಗದೆ ಕೆಲ ದಿನಗಳ ಕಾಲಾವಕಾಶ ಕೋರಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಬಹುಮುಖ್ಯವಾಗಿ ಬಲವಾದ ಸಾಕ್ಷಿಯನ್ನು ಬೇಟೆಯಾಡಲು ಪ್ರಯತ್ನಿಸುತ್ತಿರುವ ರಮೇಶ್ ಜಾರಕಿಹೊಳಿ ಇದು ಒಂದು ರಾಜಕೀಯ ಷಡ್ಯಂತ್ರವೆಂದು ನಿರೂಪಿಸುವ ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸದ್ಯದ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸ್ತಿರುವ ರಮೇಶ್ ಜಾರಕಿಹೊಳಿ, ವಕೀಲರ ಸಲಹೆ ಪಡೆಯುತ್ತಿದ್ದು ನಿರೀಕ್ಷಣಾ ಜಾಮೀನು ಪಡೆಯಬೇಕೆ, ಬೇಡವೇ ಎಂದು ಚರ್ಚೆ ನಡೆಸಿದ್ದಾರೆ. ಕಾದುನೋಡುವ ತಂತ್ರದ ಮೊರೆಹೋಗಿರುವ ಅವರು ಹೇಗಾದರೂ ಮಾಡಿ ಬಲವಾದ ಸಾಕ್ಷಿ ಕಲೆಹಾಕುವ ಮೂಲಕ ಸಿಡಿ ರಾಜಕೀಯ ಷಡ್ಯಂತ್ರದ ಪ್ರತಿಫಲ ಎಂದು ತೋರಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕಾಗಿಯೇ ಅಜ್ಞಾತ ಸ್ಥಳದಲ್ಲೇ ಇದ್ದು ಸಹೋದರರಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿಯಿಂದಲೂ ಸಲಹೆ ಪಡೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸಿಡಿ ಬಿಡುಗಡೆಯಾದ ಸಂದರ್ಭದಿಂದಲೂ ಇದು ನಕಲಿ ಸಿಡಿ, ಸಿಡಿಯಲ್ಲಿರುವುದು ನಾನಲ್ಲ, ಆ ಯುವತಿ ಯಾರು ಎನ್ನುವುದೇ ನನಗೆ ಗೊತ್ತಿಲ್ಲ ಎನ್ನುತ್ತಿರುವ ರಮೇಶ್ ಜಾರಕಿಹೊಳಿ ಇದು ರಾಜಕೀಯ ಷಡ್ಯಂತ್ರ ಎನ್ನುವುದನ್ನು ಪ್ರತಿಪಾದಿಸುತ್ತಲೇ ಬಂದಿದ್ದಾರೆ. ಈ ವಿಚಾರದಲ್ಲಿ ಕೆಲ ಸ್ವಪಕ್ಷೀಯ ನಾಯಕರೂ ರಮೇಶ್ ಜಾರಕಿಹೊಳಿ ಪರ ಬಹಿರಂಗ ಹೇಳಿಕೆ ನೀಡಿದ್ದು, ಅವರು ಆರೋಪ ಮುಕ್ತರಾಗಿ ಹೊರಬರಲಿದ್ದಾರೆ ಎಂದು ಹೇಳಿದ್ದಾರೆ.

ಸದ್ಯದ ಬೆಳವಣಿಗೆಯಲ್ಲಿ ಶತಾಯುಗತಾಯ ಇದು ರಾಜಕೀಯ ಷಡ್ಯಂತ್ರ, ಪೂರ್ವಯೋಜಿತ ಕೃತ್ಯ ಎಂದು ನಿರೂಪಿಸಲು ಕಾಯುತ್ತಿರುವ ರಮೇಶ್ ಜಾರಕಿಹೊಳಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಕಾದು ಕುಳಿತು ಸೂಕ್ಷ್ಮವಾಗಿ ಅವಲೋಕಿಸಿ ನಂತರ ಮುಂದಿನ ಹೆಜ್ಜೆ ಇಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಿಡಿ ಲೇಡಿ ಮೆಡಿಕಲ್ ಟೆಸ್ಟ್ ಬಳಿಕ.. ರಮೇಶ್​ ಜಾರಕಿಹೊಳಿಗೂ ಮೆಡಿಕಲ್ ಟೆಸ್ಟ್? ರಮೇಶ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ 

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಅಂತ್ಯವಾಗಿ ಬಂಧಿಸದಿದ್ದರೆ ಆಗ ಪ್ರಶ್ನಿಸಿ -ಡಿಜಿಪಿ ಪ್ರವೀಣ್ ಸೂದ್

Published On - 6:10 pm, Fri, 2 April 21

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು