Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಟಿಐ ಕಾರ್ಯಕರ್ತರನ್ನು ಬೆದರಿಸಲು ಮುಂದಾಗಿದೆಯಾ ಕಾಂಗ್ರೆಸ್ ಸರ್ಕಾರ? ಪಟ್ಟಿ ಒದಗಿಸಲು ನಿರ್ದೇಶನ

Karnataka Congress Government and RTI Activists; ಮುಖ್ಯ ಕಾರ್ಯದರ್ಶಿ ಕಚೇರಿ, ಇಲಾಖೆಗಳು, ಸಚಿವಾಲಯಗಳಲ್ಲಿ ಮಾಹಿತಿ ಕೇಳುವವರ ಮಾಹಿತಿ ಕಲೆ ಹಾಕಲು ಮುಂದಾಗಿರುವ ಸರ್ಕಾರ, ಹೆಚ್ಚು ಬಾರಿ ಆರ್‌ಟಿಐ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸುವಂತೆ ಈಗಾಗಲೇ ನಿರ್ದೇಶನ ನೀಡಿದೆ.

ಆರ್‌ಟಿಐ ಕಾರ್ಯಕರ್ತರನ್ನು ಬೆದರಿಸಲು ಮುಂದಾಗಿದೆಯಾ ಕಾಂಗ್ರೆಸ್ ಸರ್ಕಾರ? ಪಟ್ಟಿ ಒದಗಿಸಲು ನಿರ್ದೇಶನ
ಸಾಂದರ್ಭಿಕ ಚಿತ್ರ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Sep 30, 2023 | 10:58 AM

ಬೆಂಗಳೂರು, ಸೆಪ್ಟೆಂಬರ್ 30: ಮಾಹಿತಿ ಹಕ್ಕು ಕಾಯ್ದೆಯಡಿ (RTI) ಅರ್ಜಿ ಸಲ್ಲಿಸುವ ಕಾರ್ಯಕರ್ತರ ಮಾಹಿತಿ ಕಲೆ ಹಾಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Congress Government) ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಜತೆಗೆ, ಆರ್​ಟಿಐ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಕಾನೂನು ಪ್ರಕಾರ ಆರ್​ಟಿಐ ಕಾರ್ಯಕರ್ತರ ಗೋಪ್ಯತೆ ಕಾಪಾಡಬೇಕು. ಆದರೆ, ಇಲ್ಲಿ ಸರ್ಕಾರವೇ ಮಾಹಿತಿ ಕಲೆ ಹಾಕಲು ಮುಂದಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೆ, ಆರ್‌ಟಿಐ ಕಾರ್ಯಕರ್ತರನ್ನು ಬೆದರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎಂಬ ಅನುಮಾನ ಹುಟ್ಟುಹಾಕಿದೆ.

ಹೆಚ್ಚೆಚ್ಚು ಆರ್‌ಟಿಐ ಅರ್ಜಿ ಹಾಕುವವರು ಯಾರು ಎಂಬ ಮಾಹಿತಿ ಕ್ರೋಢೀಕರಿಸಲು ಸರ್ಕಾರ ಮುಂದಾಗಿದೆ. ಆದರೆ, ಇದಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆರ್‌ಟಿಐ ಅರ್ಜಿ ಹಾಕುವವರ ಮಾಹಿತಿ ಪಡೆದು ಏನು ಮಾಡಲು ಹೊರಟಿದೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಂಬ ಪ್ರಶ್ನೆ ಉದ್ಭವಿಸಿದೆ.

ಮುಖ್ಯ ಕಾರ್ಯದರ್ಶಿ ಕಚೇರಿ, ಇಲಾಖೆಗಳು, ಸಚಿವಾಲಯಗಳಲ್ಲಿ ಮಾಹಿತಿ ಕೇಳುವವರ ಮಾಹಿತಿ ಕಲೆ ಹಾಕಲು ಮುಂದಾಗಿರುವ ಸರ್ಕಾರ, ಹೆಚ್ಚು ಬಾರಿ ಆರ್‌ಟಿಐ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸುವಂತೆ ಈಗಾಗಲೇ ನಿರ್ದೇಶನ ನೀಡಿದೆ. ಕಲಬುರಗಿ ಪೀಠದ ಮಾಹಿತಿ ಆಯುಕ್ತರು ಪತ್ರ ಬರೆದ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ. 2023ರ ಏಪ್ರಿಲ್‌ನಲ್ಲೇ ಕಲಬುರಗಿ ಪೀಠದ ಮಾಹಿತಿ ಆಯುಕ್ತರು ಪತ್ರ ಬರೆದಿದ್ದರು. ಆದರೆ ಬಿಜೆಪಿ ಸರ್ಕಾರವು ಯಾವುದೇ ಕ್ರಮವಹಿಸಿರಲಿಲ್ಲ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಆರ್‌ಟಿಐ ಕಾರ್ಯಕರ್ತರ ಮಾಹಿತಿ ಕಲೆಹಾಕಲು ಮುಂದಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಈಗಾಗಲೇ ಆರ್‌ಟಿಐ ಅರ್ಜಿದಾರರ ಮಾಹಿತಿ ನೀಡಲು ‌ನಿರ್ದೇಶನ ನೀಡಲಾಗಿದೆ. ಆರ್‌ಟಿಐ ಅಡಿ ಅರ್ಜಿದಾರರ ವಿವರಗಳ ಗೋಪ್ಯತೆ ಕಾಪಾಡುವುದು ಕಾನೂನಿನಲ್ಲಿದೆ. ಆದಾಗ್ಯೂ, ಸರ್ಕಾರವೇ ಮಾಹಿತಿ ಕಲೆ ಹಾಕಲು ಮುಂದಾಗಿರುವುದು ಈಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಏನಿದು ಮಾಹಿತಿ ಹಕ್ಕು ಕಾಯ್ದೆ?

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಸತ್ತು 2005ರಲ್ಲಿ ಅಂಗೀಕರಿಸಿತು. ಇದರಲ್ಲಿ ಭಾರತದ ಪ್ರತಿಯೊಬ್ಬ ಪ್ರಜೆಗೂ ಸರ್ಕಾರಿ ಸಂಸ್ಥೆಗಳಿಂದ ಮಾಹಿತಿ ಪಡೆಯುವ ಹಕ್ಕನ್ನು ನೀಡಲಾಯಿತು. ಈ ಕಾನೂನಿನ ಅಡಿಯಲ್ಲಿ, ಸರ್ಕಾರಿ ಕಚೇರಿಗಳು, ಇಲಾಖೆಗಳು, ಸಚಿವಾಲಯಗಳು ಮತ್ತು ಸರ್ಕಾರಿ ಸಂಸ್ಥೆಗಳಿಂದ ಮಾಹಿತಿಯನ್ನು ಪಡೆಯುವ ಹಕ್ಕನ್ನು ಸಾರ್ವಜನಿಕರು ಹೊಂದಿರುತ್ತಾರೆ.

ಇದನ್ನೂ ಓದಿ: ಡಿಎಂಕೆ ಒತ್ತಡಕ್ಕೆ ಮಣಿದು ನೀರು ಬಿಡುತ್ತಿದ್ದೀರಿ: ಸಿದ್ದರಾಮಯ್ಯ ಟ್ವೀಟ್​ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

ಮಾಹಿತಿ ಹಕ್ಕು ಕಾಯ್ದೆಯ ಮೂಲ ಉದ್ದೇಶವು ಸರ್ಕಾರದ ಇಲಾಖೆಗಳ ವ್ಯವಹಾರಗಳ ಬಗ್ಗೆ ಮಾಹಿತಿ ತಿಳಿಯುವ ಅಧಿಕಾರವನ್ನು ಜನರಿಗೆ ನೀಡುವುದಾಗಿದೆ. ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸುವುದು, ಭ್ರಷ್ಟಾಚಾರವನ್ನು ನಿಯಂತ್ರಿಸುವುದು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ನಿಜವಾದ ಅರ್ಥದಲ್ಲಿ ಜನರಿಗಾಗಿ ಕೆಲಸ ಮಾಡುವಂತೆ ಮಾಡುವ ಉದ್ದೇಶದೊಂದಿಗೆ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್