AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಸ್​ಗೆ ಚಿಕಿತ್ಸೆ ಹೆಲ್ತ್​ ಇನ್ಷೂರೆನ್ಸ್​ ವ್ಯಾಪ್ತಿಗೆ ಒಳಪಡುತ್ತದಾ?

ಬೆಂಗಳೂರು: ಡ್ರ್ಯಾಗನ್​ ಸೋಂಕು ಅಂದ್ರೆ ಕೊವಿಡ್ 19 ಸೋಂಕು ಅಕ್ಷರಷಃ ಸಾಂಕ್ರಾಮಿಕವಾಗಿದ್ದು ಆತಂಕ ಮೂಡಿಸಿದೆ. ಈ ಮಧ್ಯೆ ಸೋಂಕು ಪೀಡಿತರು ಮತ್ತು ಸಾರ್ವಜನಿಕರಲ್ಲಿ ಒಂದು ದೊಡ್ಡ ಅತಂಕ ಮನೆಮಾಡಿದೆ. ಕೊರೊನಾ ವೈರಸ್ ಚಿಕಿತ್ಸೆಗೆ ಅಸಲಿಗೆ ಮದ್ದೇ ಇಲ್ಲವಾದರೂ ಅದು ಇದು ಅಂತ ಚಿಕಿತ್ಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ ಅದು ದುಬಾರಿಯೂ ಆಗುತ್ತಿವೆ ಎಂಬ ಅಳಲು ಸಾರ್ವಜನಿಕರಲ್ಲಿ ಮೂಡಿವೆ. ಈ ಕೊರೊನಾ ವೈರಸ್​ಗೆ ಚಿಕಿತ್ಸೆಗೆಂದು ಸಾಮಾನ್ಯ ಆರೋಗ್ಯ ವಿಮೆ ಪಾಲಿಸಿಗಳು ಅನ್ವಯವಾಗುತ್ತವಾ? ಎಂದು ಜನ ಪ್ರಶ್ನಿಸತೊಡಗಿದ್ದಾರೆ. […]

ಕೊರೊನಾ ವೈರಸ್​ಗೆ ಚಿಕಿತ್ಸೆ ಹೆಲ್ತ್​ ಇನ್ಷೂರೆನ್ಸ್​ ವ್ಯಾಪ್ತಿಗೆ ಒಳಪಡುತ್ತದಾ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 06, 2020 | 12:20 PM

Share

ಬೆಂಗಳೂರು: ಡ್ರ್ಯಾಗನ್​ ಸೋಂಕು ಅಂದ್ರೆ ಕೊವಿಡ್ 19 ಸೋಂಕು ಅಕ್ಷರಷಃ ಸಾಂಕ್ರಾಮಿಕವಾಗಿದ್ದು ಆತಂಕ ಮೂಡಿಸಿದೆ. ಈ ಮಧ್ಯೆ ಸೋಂಕು ಪೀಡಿತರು ಮತ್ತು ಸಾರ್ವಜನಿಕರಲ್ಲಿ ಒಂದು ದೊಡ್ಡ ಅತಂಕ ಮನೆಮಾಡಿದೆ. ಕೊರೊನಾ ವೈರಸ್ ಚಿಕಿತ್ಸೆಗೆ ಅಸಲಿಗೆ ಮದ್ದೇ ಇಲ್ಲವಾದರೂ ಅದು ಇದು ಅಂತ ಚಿಕಿತ್ಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ ಅದು ದುಬಾರಿಯೂ ಆಗುತ್ತಿವೆ ಎಂಬ ಅಳಲು ಸಾರ್ವಜನಿಕರಲ್ಲಿ ಮೂಡಿವೆ.

ಈ ಕೊರೊನಾ ವೈರಸ್​ಗೆ ಚಿಕಿತ್ಸೆಗೆಂದು ಸಾಮಾನ್ಯ ಆರೋಗ್ಯ ವಿಮೆ ಪಾಲಿಸಿಗಳು ಅನ್ವಯವಾಗುತ್ತವಾ? ಎಂದು ಜನ ಪ್ರಶ್ನಿಸತೊಡಗಿದ್ದಾರೆ. ಇಷ್ಟಕ್ಕೂ ಕೊರೊನಾ ಚಿಕಿತ್ಸೆ ಆರೋಗ್ಯ ವಿಮೆ ಪಾಲಿಸಿಗೆ ಒಳಪಡುತ್ತದಾ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದೇ ವೇಳೆ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವೂ (IRDAI) ವಿಮಾ ಕಂಪನಿಗಳಿಗೆ ಆದೇಶವೊಂದನ್ನು ಹೊರಡಿಸಿದ್ದು, ಕೊರೊನಾ ಚಿಕಿತ್ಸೆ ಪ್ರಕರಣಗಳನ್ನು ತಕ್ಷಣವೇ ಇತ್ಯರ್ಥಪಡಿಸಬೇಕು ಎಂದು ವಿಮೆ ಕಂಪನಿಗಳಿಗೆ ಸೂಚಿಸಿದೆ.

ಇದರ ಫಲವಾಗಿ 44 ಸಾಮಾನ್ಯ ವಿಮೆ ಕಂಪನಿಗಳ ಉನ್ನತ ಮಂಡಳಿಯು ನಿನ್ನೆ ಸಭೆ ಸೇರಿ ಎಲ್ಲಾ ಆರೋಗ್ಯ ವಿಮೆ ಪಾಲಿಸಿಗಳು ಕೊರೊನಾ ವೈರಸ್ ಚಿಕಿತ್ಸೆಯೂ ಎಲ್ಲಾ ಆರೋಗ್ಯ ವಿಮೆಗಳಿಗೆ ಒಳಪಡುತ್ತದೆ ಎಂದು ಸ್ಪಷ್ಟಪಡಿಸಿದೆ. ಇದರಿಂದ ಸಾರ್ವಜನಿಕರು ನಿಟ್ಟುಸಿರುಬಿಟ್ಟಿದ್ದಾರೆ.

ಅದಕ್ಕಿಂತಾ ಹೆಚ್ಚಿಗೆ ಕೊರೊನಾ ಚಿಕಿತ್ಸೆ ವಿಷಯದಲ್ಲಿ ಸ್ವತಹ ಸರ್ಕಾರಗಳೇ ಅತ್ಯಗತ್ಯ ಮುತುವರ್ಜಿ ವಹಿಸಿದ್ದು, ಬಹುತೇಕ ಪ್ರಕರಣಗಳಲ್ಲಿ ಸೋಂಕು ಪೀಡಿತರನ್ನು ತಾನೇ ವಿಚಾರಿಸಿಕೊಳ್ಳುತ್ತಿದೆ ಎಂಬುದು ಗಮನಾರ್ಹವಾಗಿದೆ.

Published On - 12:19 pm, Fri, 6 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ