Cauvery Calling: ಬೆಂಗಳೂರು ಗ್ರಾ. ಸೇರಿ 7 ಜಿಲ್ಲೆಯಲ್ಲಿ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ; ಮರ ಮಿತ್ರರ ನೇಮಕ

Isha foundation cauvery koogu: ರೈತರಿಗೆ ಯಾವ ರೀತಿಯ ಗಿಡಗಳು ಬೇಕು ಎಂಬ ಮಾಹಿತಿ ಪಡೆಯುವ ಉದ್ದೇಶದಿಂದ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ ತಂಡವು ಎಲ್ಲ 1785 ಪಂಚಾಯತ್​ಗಳಲ್ಲಿಯೂ ‘ಮರ ಮಿತ್ರ’ ಎಂಬ ಹಸರಿನಲ್ಲಿ ಸಂಯೋಜಕರನ್ನು ನೇಮಿಸಿಕೊಳ್ಳಲಾಗುವುದು.  

Cauvery Calling: ಬೆಂಗಳೂರು ಗ್ರಾ. ಸೇರಿ 7 ಜಿಲ್ಲೆಯಲ್ಲಿ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ; ಮರ ಮಿತ್ರರ ನೇಮಕ
ಬೆಂಗಳೂರು ಗ್ರಾಮಾಂತರ ಸೇರಿ ಏಳು ಜಿಲ್ಲೆಗಳಲ್ಲಿ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ; ಮರ ಮಿತ್ರರ ನೇಮಕ
Follow us
| Updated By: ಸಾಧು ಶ್ರೀನಾಥ್​

Updated on:Aug 12, 2021 | 10:29 AM

ಮೈಸೂರು: ಕಾವೇರಿ ನದಿ ಉಳಿವಿಗಾಗಿ ಈಶಾ ಫಂಡೇಶನ್​ ಹಮ್ಮಿಕೊಂಡಿರುವ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನವನ್ನು ಜಿಲ್ಲೆಯಾದ್ಯಂತ ನಡೆಸಲಾಗುವುದು. ಕಾವೇರಿ ಕೂಗು ಯೋಜನೆಯ ಭಾಗವಾಗಿ ಕಾವೇರಿ ನದಿ ಹರಿಯುವ ಭಾಗಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವುದರಿಂದ ನದಿ ಸಂರಕ್ಷಣೆ, ಅಂತರ್ಜಲ ಹೆಚ್ಚಳ ಹಾಗೂ ರೈತರಿಗೂ ಆದಾಯ ತರುವ ಕಾರ್ಯಕ್ರಮವಾಗಿದೆ ಎಂದು ಈಶಾ ಫೌಂಡೇಶನ್​  (Isha foundation) ಸ್ವಯಂ ಸೇವಕರಾದ ತೀರ್ಥನ್​ ಮತ್ತು ಸಂಭವ್ ಸುದ್ದಿಗೋಷ್ಠಿಯಲ್ಲಿ​ ತಿಳಿಸಿದ್ದಾರೆ. ಈಗಾಗಲೇ ಈ ಅಭಿಯಾನ ಆರಂಭವಾಗಿದ್ದು, 215 ಗ್ರಾಮ ಪಂಚಾಯತ್​​​ಗಳಿಗೆ ಭೇಟಿ ಕಾರ್ಯಕ್ರಮ ನಡೆಸಲಾಗಿದೆ. ಸೆಪ್ಟೆಂಬರ್​​ವರೆಗೂ ಈ ಅಭಿಯಾನ ನಡೆಯಲಿದೆ.

ಕಾವೇರಿ ನದಿ ಉಳಿವಿಗಾಗಿ ಕಾವೇರಿ ಕೂಗು ಯೋಜನೆ (Cauvery Calling) ನಡೆಸಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ ರೈತರಿಂದ ಗಿಡಗಳಿಗಾಗಿ ಬೇಡಿಕೆ ಪಡೆಯುವ ಉದ್ದೇಶದಿಂದ ಕಾವೇರಿ ಕೂಗು (cauvery koogu) ಗ್ರಾಮ ಸಂಪರ್ಕ ಅಭಿಯಾನಕ್ಕೆ ಆಗಸ್ಟ್​ 2 ರಂದು ಚಾಲನೆ ದೊರೆತಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ 1785 ಪಂಚಾಯತ್​​ಗಳಲ್ಲಿ ಈ ಅಭಿಯಾನ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ ರಾಜ್​ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಸಹಯೋಗದಲ್ಲಿ ಕಾವೇರಿ ಕೊಳ್ಳದ ಜಿಲ್ಲೆಗಳ ಪ್ರತಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್​ ಮತ್ತು ಜಿಲ್ಲಾ ಪಂಚಾಯತ್​​ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಮುಂದಿನ 8 ವಾರಗಳಲ್ಲಿ 1,800 ಪ್ರಚಾರ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಈಶಾ ಸ್ವಯಂ ಸೇವಕರಾದ ತೀರ್ಥನ್​ ಮತ್ತು ಸಂಭವ್ ತಿಳಿಸಿದ್ದಾರೆ.

ರೈತರಿಗೆ ಯಾವ ರೀತಿಯ ಗಿಡಗಳು ಬೇಕು ಎಂಬ ಮಾಹಿತಿ ಪಡೆಯುವ ಉದ್ದೇಶದಿಂದ ಕಾವೇರಿ ಕೂಗು ಗ್ರಾಮ ಸಂಪರ್ಕ ಅಭಿಯಾನ ತಂಡವು ಎಲ್ಲ 1785 ಪಂಚಾಯತ್​ಗಳಲ್ಲಿಯೂ (Cauvery basin) ‘ಮರ ಮಿತ್ರ’ ಎಂಬ ಹಸರಿನಲ್ಲಿ ಸಂಯೋಜಕರನ್ನು ನೇಮಿಸಿಕೊಳ್ಳಲಾಗುವುದು. ಮರ ಮಿತ್ರರು (mara mitra) ಮರ ಆಧಾರಿತ ಕೃಷಿ, ಅರಣ್ಯ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಿ, ರೈತ ಸಮುದಾಯವನ್ನು ಸಂಘಟಿಸಿ, ಅವರಿಂದ ಮರಗಳ ಬೇಡಿಕೆ ಪಡೆಯುತ್ತಾರೆ ಎಂದು ಅವರು ವಿವರಿಸಿದರು.

ಕೆಆರ್​​ಎಸ್ ಅಣೆಕಟ್ಟೆಗೆ ಅಪಾಯ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್

(Isha foundation cauvery koogu Cauvery Calling campaign in 7 districts up to september 2021 mara mitra to be appointed)

Published On - 10:26 am, Thu, 12 August 21

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ