Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೂ ಆಘಾತ ತಂದಿಟ್ಟ ಪಶ್ಚಿಮ ಏಷ್ಯಾ ಬಿಕ್ಕಟ್ಟು! ರಫ್ತಿನ ಮೇಲೆ ಬಿತ್ತು ನೇರ ಹೊಡೆತ

ದೂರ ದೇಶದಲ್ಲೆಲ್ಲೋ ನಡೆಯುವ ಸಂಘರ್ಷ, ಯುದ್ಧ, ಚುನಾವಣೆಯಿಂದ ನಮಗೇನು ಎಂದುಕೊಳ್ಳುವವರೇ ಹೆಚ್ಚು. ಆದರೆ, ಅವುಗಳಿಂದಲೇ ಇರೋದು ಸಮಸ್ಯೆ. ಇಸ್ರೇಲ್ - ಪ್ಯಾಲೆಸ್ಟಿನ್ ಯುದ್ಧ, ರಷ್ಯಾ - ಉಕ್ರೇನ್ ಸಂಘರ್ಷ, ಅಮೆರಿಕ ಚುನಾವಣೆಯ ಪರಿಣಾಮ ಕರ್ನಾಟಕದ ರಫ್ತು ಉದ್ಯಮದ ಮೇಲೆ ದೊಡ್ಡ ಹೊಡೆತ ಬಿದ್ದಿದೆ ಎನ್ನುತ್ತಿದ್ದಾರೆ ಇಲ್ಲಿನ ಉದ್ಯಮಿಗಳು. ಆ ಕುರಿತ ವಿವರ ಇಲ್ಲಿದೆ.

ಕರ್ನಾಟಕಕ್ಕೂ ಆಘಾತ ತಂದಿಟ್ಟ ಪಶ್ಚಿಮ ಏಷ್ಯಾ ಬಿಕ್ಕಟ್ಟು! ರಫ್ತಿನ ಮೇಲೆ ಬಿತ್ತು ನೇರ ಹೊಡೆತ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Oct 15, 2024 | 9:56 AM

ಬೆಂಗಳೂರು, ಅಕ್ಟೋಬರ್ 15: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಮುಂಬರುವ ಅಮೆರಿಕ ಚುನಾವಣೆಗಳು ಕರ್ನಾಟಕದ ರಫ್ತಿನ ಮೇಲೆ ಪರಿಣಾಮ ಬೀರಿವೆ! ಆಟೋಮೊಬೈಲ್ ಉತ್ಪನ್ನಗಳು, ಇಂಜಿನಿಯರಿಂಗ್ ಮತ್ತು ಏರೋಸ್ಪೇಸ್ ಉಪಕರಣಗಳು, ಕಬ್ಬಿಣದ ಉತ್ಪನ್ನಗಳನ್ನು ತಯಾರಿಸುವ ಕಂಪನಿಗಳಿಗೆ ಹಿನ್ನಡೆಯಾಗಿವೆ ಎಂದು ವರದಿಯಾಗಿದೆ. ಇಲ್ಲಿನ ಕೈಗಾರಿಕೋದ್ಯಮಿಗಳ ಪ್ರಕಾರ, ರಷ್ಯಾ ಉಕ್ರೇನ್ ಯುದ್ಧ, ಇಸ್ರೇಲ್-ಪ್ಯಾಲೆಸ್ಟೈನ್ ಮತ್ತು ಇಸ್ರೇಲ್-ಇರಾನ್ ಸಂಘರ್ಷಗಳು ರಾಜ್ಯದ ರಫ್ತಿನ ಮೇಲೆ ಪ್ರಭಾವ ಬೀರಿವೆ. ಆದಾಗ್ಯೂ, ಇಸ್ರೇಲ್‌ಗೆ ರಕ್ಷಣಾ ವಸ್ತುಗಳ ರಫ್ತು ಬಹುಪಟ್ಟು ಹೆಚ್ಚಾಗಿದೆ ಎನ್ನಲಾಗಿದೆ.

ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿಯಿಂದ ಸ್ವೀಡನ್, ಜರ್ಮನಿ ಮತ್ತು ಜೆಕ್ ಗಣರಾಜ್ಯಕ್ಕೆ ಆಟೋಮೊಬೈಲ್ ಘಟಕಗಳ ರಫ್ತಿನ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ ಮಾಜಿ ಅಧ್ಯಕ್ಷ ಸಿಆರ್ ಜನಾರ್ದನ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಜಾಗತಿಕವಾಗಿ ಏರೋಸ್ಪೇಸ್ ಉದ್ಯಮದಿಂದ ಹೆಚ್ಚು ಬೇಡಿಕೆಯಿರುವ ಕೈಗಾರಿಕೋದ್ಯಮಿಯೊಬ್ಬರ ಮೇಲೆ ಪಶ್ಚಿಮ ಏಷ್ಯಾ ಬಿಕ್ಕಟ್ಟು ಎಷ್ಟು ಕೆಟ್ಟದಾಗಿ ಪರಿಣಾಮ ಬೀರಿತು ಎಂದರೆ, ಅವರು ತಮ್ಮ ವ್ಯವಹಾರವನ್ನೇ ರಕ್ಷಣಾ ಕ್ಷೇತ್ರಕ್ಕೆ ಬದಲಾಯಿಸಿದ್ದಾರೆ ಎಂದು ಸಿಆರ್ ಜನಾರ್ದನ ಹೇಳಿದ್ದಾರೆ.

ನಾವು ಯುಎಸ್, ಯುರೋಪ್ ಮತ್ತು ಸ್ವಿಟ್ಜರ್‌ಲ್ಯಾಂಡ್‌ನ ಸಾರಿಗೆ ವ್ಯವಸ್ಥೆಗಳಿಗೆ ಏರೋಸ್ಪೇಸ್ ಹೈಡ್ರಾಲಿಕ್ ಉಪಕರಣಗಳು ಮತ್ತು ಯಾಂತ್ರಿಕ ಘಟಕಗಳನ್ನು ಪೂರೈಸುತ್ತೇವೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಸಮುದ್ರದ ಮೂಲಕ ಸಾಗಣೆ ವೆಚ್ಚ ಹೆಚ್ಚಾಗಿದೆ. ಆರ್ಡರ್‌ಗಳ ಪ್ರಮಾಣವು ಶೇ 30 ರಿಂದ 40 ರಷ್ಟು ಕಡಿಮೆಯಾಗಿದೆ ಎಂದು ಪೀಣ್ಯದ ಅಕ್ಯುಟೆಕ್ ಎಂಟರ್‌ಪ್ರೈಸಸ್‌ನ ಎಂಜೆ ಪ್ರಸಾದ್ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ವಿದೇಶಿ ವಿನಿಮಯವೂ ಇಳಿಕೆ

ಕಳೆದ ವಾರ ನಮ್ಮ ವಿದೇಶಿ ವಿನಿಮಯ ಸಂಗ್ರಹವು 3.5 ಶತಕೋಟಿ ಡಾಲರ್​​​ಗಳಷ್ಟು ಕಡಿಮೆಯಾಗಿದೆ. ಇದು ರಫ್ತು ವಹಿವಾಟಿನ ಕುಸಿತದ ಸೂಚನೆಯಾಗಿದೆ. ವಾರಕ್ಕೆ 701 ಶತಕೋಟಿ ಡಾಲರ್​​ನಿಂದ ಇದು ಕುಸಿಯುತ್ತಾ ಸಾಗಿದೆ. ಸಾಮಾನ್ಯವಾಗಿ ವಿದೇಶಿ ವಿನಿಮಯ ಸಂಗ್ರಹ ವಾರದಿಂದ ವಾರ ಬೆಳವಣಿಗೆ ಕಾಣುತ್ತದೆ. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್‌ಐಸಿಸಿಐ) ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯ ಡಾ ಜಾಕೋಬ್ ಕ್ರಾಸ್ತಾ ಹೇಳಿದ್ದಾರೆ.

‘ನಾವು ತೈಲ ಮತ್ತು ನೈಸರ್ಗಿಕ ಅನಿಲ ಉದ್ಯಮದಲ್ಲಿ ಪಂಪ್‌ಗಳಿಗೆ ಬಳಸುವ ಕಬ್ಬಿಣದ ಉತ್ಪನ್ನವನ್ನು ಉತ್ತರ ಅಮೆರಿಕ ಮತ್ತು ಯುರೋಪ್‌ಗೆ ರಫ್ತು ಮಾಡುತ್ತೇವೆ. ಈ ವಸ್ತುಗಳು ಸೂಯೆಜ್ ಕಾಲುವೆಯ ಮೂಲಕ ಹಡಗುಗಳಲ್ಲಿ ರಫ್ತಾಗುತ್ತವೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟು ನೇರವಾಗಿ ಸರಕುಗಳ ಸಾಗಣೆಯ ಮೇಲೆ ಪರಿಣಾಮ ಬೀರಿದೆ. ಸರಕು ಸಾಗಾಟ ನಿಧಾನಗೊಂಡಿರುವುದು ರಫ್ತಿನ ಮೇಲೆ ಪರಿಣಾಮ ಬೀರಿದೆ’ ಎಂದು ಬೆಳಗಾವಿ ಬೆಳಗಾವಿಯ ಫೆರೋಕಾಸ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಸಚಿನ್ ಸಬ್ನಿಸ್ ತಿಳಿಸಿದ್ದಾರೆ.

60 ಟನ್​ಗಳಿಗೆ ಕುಸಿದ ರಫ್ತು

ಪ್ರತಿ ತಿಂಗಳು 100 ಟನ್‌ಗಳಷ್ಟು ಉತ್ಪನ್ನಗಳು ರಫ್ತಾದರೆ, ಕಳೆದ ನಾಲ್ಕು ತಿಂಗಳಲ್ಲಿ ಕೇವಲ 60 ಟನ್‌ಗಳಿಗೆ ಇಳಿಕೆಯಾಗಿದೆ. ಮುಂದಿನ ತಿಂಗಳು ನಡೆಯಲಿರುವ ಯುಎಸ್ ಚುನಾವಣೆಗಳು ಆ ದೇಶದಿಂದ ರಫ್ತು ಆರ್ಡರ್​​​ಗಳನ್ನು ಕಡಿಮೆ ಮಾಡಿದೆ. ಇನ್ನೊಂದು ಸಮಸ್ಯೆ ಎಂದರೆ, ಕಂಟೈನರ್‌ಗಳ ಕೊರತೆ ಎಂದು ಸಚಿನ್ ಸಬ್ನಿಸ್ ಹೇಳಿದ್ದಾರೆ.

ನಾವು ಆಟೋಮೊಬೈಲ್ ಮತ್ತು ಹೈಡ್ರಾಲಿಕ್ ಘಟಕಗಳನ್ನು ಯುಎಸ್‌ನಲ್ಲಿ ವಿತರಿಸುವ ಕಂಪನಿಗೆ ರಫ್ತು ಮಾಡುತ್ತೇವೆ. ನನ್ನ ವ್ಯವಹಾರದಲ್ಲಿ ಶೇ 30 ರಷ್ಟು ಕುಸಿತವಾಗಿದೆ ಎಂದು ಬೆಳಗಾವಿಯ ಮಹಾಲಕ್ಷ್ಮಿ ಇಂಜಿನಿಯರಿಂಗ್‌ನ ಉದಯ್ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ರೀಟೇಲ್ ಹಣದುಬ್ಬರ ಶೇ. 5.49ಕ್ಕೆ ಏರಿಕೆ; ಇದು 9 ತಿಂಗಳಲ್ಲೇ ಗರಿಷ್ಠ ಮಟ್ಟ

ನಮ್ಮ ವ್ಯವಹಾರಕ್ಕೆ ಇರಾನ್-ಇಸ್ರೇಲ್ ಬಿಕ್ಕಟ್ಟು ಪರಿಣಾಮ ಬೀರುವುದಿಲ್ಲ. ಆದಾಗ್ಯೂ, ಭಾರತವು ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದರಿಂದ ರಷ್ಯಾ-ಉಕ್ರೇನ್ ಯುದ್ಧವು ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಎಲ್‌ಪಿಜಿ ವ್ಯವಹಾರದಲ್ಲಿರುವ ಎಂಡಿ ಬಾಲಕೃಷ್ಣನ್ ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ