AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?

ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?
ಆದಿತ್ಯ ಎಲ್-1Image Credit source: iLearn CANA
Follow us
ರಾಮು, ಆನೇಕಲ್​
| Updated By: Rakesh Nayak Manchi

Updated on: Aug 28, 2023 | 5:18 PM

ಆನೇಕಲ್, ಆಗಸ್ಟ್ 28: ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ (ISRO) ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 (Aditya L-1) ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆನೇಕಲ್ ತಾಲ್ಲೂಕಿನ ಜಿಗಣಿಯ ಆಜ್ರೀ ಇಂಜಿನಿಯರಿಂಗ್ ಸಂಸ್ಥೆಗೆ ಭೇಟಿ ನೀಡಿ ಮಾತನಾಡಿದ ಸುರೇಶ್ ಕುಮಾರ್, ಸೆ.2ರಂದು ಆದಿತ್ಯ ಎಲ್​-1 ಉಡಾವಣೆ ಆಗಲಿದೆ. ಈ ಮಿಷನ್​ನ ಉದ್ದೇಶ ಸೂರ್ಯನ ಬಗ್ಗೆ ಅಧ್ಯಯನ ನಡೆಸುವುದಾಗಿದೆ ಎಂದಿದ್ದಾರೆ. “ಆದಿತ್ಯ ಎಲ್​-1 ಸೂರ್ಯನ ಕರೋನಾಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ. ಸೂರ್ಯನ ಸುತ್ತ ಎಷ್ಟು ಲೇಯರ್ ಇದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಚಂದ್ರಯಾನ-3 ಟಚ್‌ಡೌನ್ ಸ್ಪಾಟ್​​​ಗೆ ಶಿವಶಕ್ತಿ ಪಾಯಿಂಟ್ ಎಂದು ಹೆಸರಿಟ್ಟಿದ್ದರಲ್ಲಿ ತಪ್ಪೇನಿಲ್ಲ: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್

ಆದಿತ್ಯ ಎಲ್​-1 ಭೂಮಿಯಿಂದ 15 ಲಕ್ಷ ಕಿ.ಮೀ. ದೂರ ಸಾಗಲಿದೆ. ಅಲ್ಲಿಂದ ಸೂರ್ಯನಿಂದ ಎಷ್ಟು ದೂರ ಇದೇ ಅಂತಾ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಸುರೇಶ್ ಕುಮಾರ್, ಆದಿತ್ಯ ಎಲ್​-1 ಉಡಾವಣೆ ಬಳಿಕ ಲಾಗ್ರೇಂಜ್ ಪಾಯಿಂಟ್ ತಲುಪುತ್ತದೆ. ಭೂಮಿಯಿಂದ ಲಾಗ್ರೇಂಜ್ ಪಾಯಿಂಟ್ ತಲುಪಲು 4 ತಿಂಗಳು ಬೇಕು ಎಂದರು.

ಮಂಗಳಯಾನ ಹಾಗೂ ಚಂದ್ರಯಾನ-4ರ ಬಗ್ಗೆ ಅಧ್ಯಯನ ನಡೆಯುತ್ತಿದೆ. ಹೀಟ್ ಪೈಪ್ ಎಂಬುವುದು ಪ್ರತಿಯೊಂದು ಉಪಗ್ರಹಕ್ಕೂ ಅವಶ್ಯಕತೆ ಇದೆ. ಉಷ್ಣಾಂಶವನ್ನು ಹೆಚ್ಚಿಸಲು ಹೀಟ್ ಪೈಪ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಇಸ್ರೋ ವಿಜ್ಞಾನಿ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ