AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?

ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?
ಆದಿತ್ಯ ಎಲ್-1Image Credit source: iLearn CANA
ರಾಮು, ಆನೇಕಲ್​
| Updated By: Rakesh Nayak Manchi|

Updated on: Aug 28, 2023 | 5:18 PM

Share

ಆನೇಕಲ್, ಆಗಸ್ಟ್ 28: ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ (ISRO) ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 (Aditya L-1) ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆನೇಕಲ್ ತಾಲ್ಲೂಕಿನ ಜಿಗಣಿಯ ಆಜ್ರೀ ಇಂಜಿನಿಯರಿಂಗ್ ಸಂಸ್ಥೆಗೆ ಭೇಟಿ ನೀಡಿ ಮಾತನಾಡಿದ ಸುರೇಶ್ ಕುಮಾರ್, ಸೆ.2ರಂದು ಆದಿತ್ಯ ಎಲ್​-1 ಉಡಾವಣೆ ಆಗಲಿದೆ. ಈ ಮಿಷನ್​ನ ಉದ್ದೇಶ ಸೂರ್ಯನ ಬಗ್ಗೆ ಅಧ್ಯಯನ ನಡೆಸುವುದಾಗಿದೆ ಎಂದಿದ್ದಾರೆ. “ಆದಿತ್ಯ ಎಲ್​-1 ಸೂರ್ಯನ ಕರೋನಾಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ. ಸೂರ್ಯನ ಸುತ್ತ ಎಷ್ಟು ಲೇಯರ್ ಇದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಚಂದ್ರಯಾನ-3 ಟಚ್‌ಡೌನ್ ಸ್ಪಾಟ್​​​ಗೆ ಶಿವಶಕ್ತಿ ಪಾಯಿಂಟ್ ಎಂದು ಹೆಸರಿಟ್ಟಿದ್ದರಲ್ಲಿ ತಪ್ಪೇನಿಲ್ಲ: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್

ಆದಿತ್ಯ ಎಲ್​-1 ಭೂಮಿಯಿಂದ 15 ಲಕ್ಷ ಕಿ.ಮೀ. ದೂರ ಸಾಗಲಿದೆ. ಅಲ್ಲಿಂದ ಸೂರ್ಯನಿಂದ ಎಷ್ಟು ದೂರ ಇದೇ ಅಂತಾ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಸುರೇಶ್ ಕುಮಾರ್, ಆದಿತ್ಯ ಎಲ್​-1 ಉಡಾವಣೆ ಬಳಿಕ ಲಾಗ್ರೇಂಜ್ ಪಾಯಿಂಟ್ ತಲುಪುತ್ತದೆ. ಭೂಮಿಯಿಂದ ಲಾಗ್ರೇಂಜ್ ಪಾಯಿಂಟ್ ತಲುಪಲು 4 ತಿಂಗಳು ಬೇಕು ಎಂದರು.

ಮಂಗಳಯಾನ ಹಾಗೂ ಚಂದ್ರಯಾನ-4ರ ಬಗ್ಗೆ ಅಧ್ಯಯನ ನಡೆಯುತ್ತಿದೆ. ಹೀಟ್ ಪೈಪ್ ಎಂಬುವುದು ಪ್ರತಿಯೊಂದು ಉಪಗ್ರಹಕ್ಕೂ ಅವಶ್ಯಕತೆ ಇದೆ. ಉಷ್ಣಾಂಶವನ್ನು ಹೆಚ್ಚಿಸಲು ಹೀಟ್ ಪೈಪ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಇಸ್ರೋ ವಿಜ್ಞಾನಿ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್