AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?

ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?
ಆದಿತ್ಯ ಎಲ್-1Image Credit source: iLearn CANA
ರಾಮು, ಆನೇಕಲ್​
| Edited By: |

Updated on: Aug 28, 2023 | 5:18 PM

Share

ಆನೇಕಲ್, ಆಗಸ್ಟ್ 28: ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ (ISRO) ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 (Aditya L-1) ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆನೇಕಲ್ ತಾಲ್ಲೂಕಿನ ಜಿಗಣಿಯ ಆಜ್ರೀ ಇಂಜಿನಿಯರಿಂಗ್ ಸಂಸ್ಥೆಗೆ ಭೇಟಿ ನೀಡಿ ಮಾತನಾಡಿದ ಸುರೇಶ್ ಕುಮಾರ್, ಸೆ.2ರಂದು ಆದಿತ್ಯ ಎಲ್​-1 ಉಡಾವಣೆ ಆಗಲಿದೆ. ಈ ಮಿಷನ್​ನ ಉದ್ದೇಶ ಸೂರ್ಯನ ಬಗ್ಗೆ ಅಧ್ಯಯನ ನಡೆಸುವುದಾಗಿದೆ ಎಂದಿದ್ದಾರೆ. “ಆದಿತ್ಯ ಎಲ್​-1 ಸೂರ್ಯನ ಕರೋನಾಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ. ಸೂರ್ಯನ ಸುತ್ತ ಎಷ್ಟು ಲೇಯರ್ ಇದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಚಂದ್ರಯಾನ-3 ಟಚ್‌ಡೌನ್ ಸ್ಪಾಟ್​​​ಗೆ ಶಿವಶಕ್ತಿ ಪಾಯಿಂಟ್ ಎಂದು ಹೆಸರಿಟ್ಟಿದ್ದರಲ್ಲಿ ತಪ್ಪೇನಿಲ್ಲ: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್

ಆದಿತ್ಯ ಎಲ್​-1 ಭೂಮಿಯಿಂದ 15 ಲಕ್ಷ ಕಿ.ಮೀ. ದೂರ ಸಾಗಲಿದೆ. ಅಲ್ಲಿಂದ ಸೂರ್ಯನಿಂದ ಎಷ್ಟು ದೂರ ಇದೇ ಅಂತಾ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಸುರೇಶ್ ಕುಮಾರ್, ಆದಿತ್ಯ ಎಲ್​-1 ಉಡಾವಣೆ ಬಳಿಕ ಲಾಗ್ರೇಂಜ್ ಪಾಯಿಂಟ್ ತಲುಪುತ್ತದೆ. ಭೂಮಿಯಿಂದ ಲಾಗ್ರೇಂಜ್ ಪಾಯಿಂಟ್ ತಲುಪಲು 4 ತಿಂಗಳು ಬೇಕು ಎಂದರು.

ಮಂಗಳಯಾನ ಹಾಗೂ ಚಂದ್ರಯಾನ-4ರ ಬಗ್ಗೆ ಅಧ್ಯಯನ ನಡೆಯುತ್ತಿದೆ. ಹೀಟ್ ಪೈಪ್ ಎಂಬುವುದು ಪ್ರತಿಯೊಂದು ಉಪಗ್ರಹಕ್ಕೂ ಅವಶ್ಯಕತೆ ಇದೆ. ಉಷ್ಣಾಂಶವನ್ನು ಹೆಚ್ಚಿಸಲು ಹೀಟ್ ಪೈಪ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಇಸ್ರೋ ವಿಜ್ಞಾನಿ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್