AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?

ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?
ಆದಿತ್ಯ ಎಲ್-1Image Credit source: iLearn CANA
ರಾಮು, ಆನೇಕಲ್​
| Edited By: Rakesh Nayak Manchi|

Updated on: Aug 28, 2023 | 5:18 PM

Share

ಆನೇಕಲ್, ಆಗಸ್ಟ್ 28: ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ (ISRO) ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 (Aditya L-1) ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆನೇಕಲ್ ತಾಲ್ಲೂಕಿನ ಜಿಗಣಿಯ ಆಜ್ರೀ ಇಂಜಿನಿಯರಿಂಗ್ ಸಂಸ್ಥೆಗೆ ಭೇಟಿ ನೀಡಿ ಮಾತನಾಡಿದ ಸುರೇಶ್ ಕುಮಾರ್, ಸೆ.2ರಂದು ಆದಿತ್ಯ ಎಲ್​-1 ಉಡಾವಣೆ ಆಗಲಿದೆ. ಈ ಮಿಷನ್​ನ ಉದ್ದೇಶ ಸೂರ್ಯನ ಬಗ್ಗೆ ಅಧ್ಯಯನ ನಡೆಸುವುದಾಗಿದೆ ಎಂದಿದ್ದಾರೆ. “ಆದಿತ್ಯ ಎಲ್​-1 ಸೂರ್ಯನ ಕರೋನಾಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ. ಸೂರ್ಯನ ಸುತ್ತ ಎಷ್ಟು ಲೇಯರ್ ಇದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಚಂದ್ರಯಾನ-3 ಟಚ್‌ಡೌನ್ ಸ್ಪಾಟ್​​​ಗೆ ಶಿವಶಕ್ತಿ ಪಾಯಿಂಟ್ ಎಂದು ಹೆಸರಿಟ್ಟಿದ್ದರಲ್ಲಿ ತಪ್ಪೇನಿಲ್ಲ: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್

ಆದಿತ್ಯ ಎಲ್​-1 ಭೂಮಿಯಿಂದ 15 ಲಕ್ಷ ಕಿ.ಮೀ. ದೂರ ಸಾಗಲಿದೆ. ಅಲ್ಲಿಂದ ಸೂರ್ಯನಿಂದ ಎಷ್ಟು ದೂರ ಇದೇ ಅಂತಾ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಸುರೇಶ್ ಕುಮಾರ್, ಆದಿತ್ಯ ಎಲ್​-1 ಉಡಾವಣೆ ಬಳಿಕ ಲಾಗ್ರೇಂಜ್ ಪಾಯಿಂಟ್ ತಲುಪುತ್ತದೆ. ಭೂಮಿಯಿಂದ ಲಾಗ್ರೇಂಜ್ ಪಾಯಿಂಟ್ ತಲುಪಲು 4 ತಿಂಗಳು ಬೇಕು ಎಂದರು.

ಮಂಗಳಯಾನ ಹಾಗೂ ಚಂದ್ರಯಾನ-4ರ ಬಗ್ಗೆ ಅಧ್ಯಯನ ನಡೆಯುತ್ತಿದೆ. ಹೀಟ್ ಪೈಪ್ ಎಂಬುವುದು ಪ್ರತಿಯೊಂದು ಉಪಗ್ರಹಕ್ಕೂ ಅವಶ್ಯಕತೆ ಇದೆ. ಉಷ್ಣಾಂಶವನ್ನು ಹೆಚ್ಚಿಸಲು ಹೀಟ್ ಪೈಪ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಇಸ್ರೋ ವಿಜ್ಞಾನಿ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?