AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?

ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆದಿತ್ಯ ಎಲ್​-1 ಉಡಾವಣೆ ಕುರಿತು ಮಾಹಿತಿ ಹಂಚಿಕೊಂಡ ಇಸ್ರೋ ವಿಜ್ಞಾನಿ, ಏನಿದರ ಉದ್ದೇಶ?
ಆದಿತ್ಯ ಎಲ್-1Image Credit source: iLearn CANA
ರಾಮು, ಆನೇಕಲ್​
| Edited By: |

Updated on: Aug 28, 2023 | 5:18 PM

Share

ಆನೇಕಲ್, ಆಗಸ್ಟ್ 28: ಚಂದ್ರಯಾನ-3 ಯಶಸ್ವಿಯಾದ ಖುಷಿಯಲ್ಲಿರುವ ಇಸ್ರೋ (ISRO) ಇದೀಗ ಮತ್ತೊಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆದಿತ್ಯ ಎಲ್​-1 (Aditya L-1) ಉಡಾವಣೆ ಕುರಿತು ಇಸ್ರೋ ವಿಜ್ಞಾನಿ ಹೆಚ್.ಎನ್.ಸುರೇಶ್ ಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದು, ಈ ಮಿಷನ್​ನ ಉದ್ದೇಶ ಸೂರ್ಯನ ವಿಸ್ತ್ರತವಾದ ಅಧ್ಯಯನ ಮಾಡುವುದಾಗಿದ್ದು, ಸೆ.2ರಂದು ಉಡ್ಡಯನವಾಗಲಿದೆ ಎಂದಿದ್ದಾರೆ.

ಆನೇಕಲ್ ತಾಲ್ಲೂಕಿನ ಜಿಗಣಿಯ ಆಜ್ರೀ ಇಂಜಿನಿಯರಿಂಗ್ ಸಂಸ್ಥೆಗೆ ಭೇಟಿ ನೀಡಿ ಮಾತನಾಡಿದ ಸುರೇಶ್ ಕುಮಾರ್, ಸೆ.2ರಂದು ಆದಿತ್ಯ ಎಲ್​-1 ಉಡಾವಣೆ ಆಗಲಿದೆ. ಈ ಮಿಷನ್​ನ ಉದ್ದೇಶ ಸೂರ್ಯನ ಬಗ್ಗೆ ಅಧ್ಯಯನ ನಡೆಸುವುದಾಗಿದೆ ಎಂದಿದ್ದಾರೆ. “ಆದಿತ್ಯ ಎಲ್​-1 ಸೂರ್ಯನ ಕರೋನಾಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ. ಸೂರ್ಯನ ಸುತ್ತ ಎಷ್ಟು ಲೇಯರ್ ಇದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ಚಂದ್ರಯಾನ-3 ಟಚ್‌ಡೌನ್ ಸ್ಪಾಟ್​​​ಗೆ ಶಿವಶಕ್ತಿ ಪಾಯಿಂಟ್ ಎಂದು ಹೆಸರಿಟ್ಟಿದ್ದರಲ್ಲಿ ತಪ್ಪೇನಿಲ್ಲ: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್

ಆದಿತ್ಯ ಎಲ್​-1 ಭೂಮಿಯಿಂದ 15 ಲಕ್ಷ ಕಿ.ಮೀ. ದೂರ ಸಾಗಲಿದೆ. ಅಲ್ಲಿಂದ ಸೂರ್ಯನಿಂದ ಎಷ್ಟು ದೂರ ಇದೇ ಅಂತಾ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಸುರೇಶ್ ಕುಮಾರ್, ಆದಿತ್ಯ ಎಲ್​-1 ಉಡಾವಣೆ ಬಳಿಕ ಲಾಗ್ರೇಂಜ್ ಪಾಯಿಂಟ್ ತಲುಪುತ್ತದೆ. ಭೂಮಿಯಿಂದ ಲಾಗ್ರೇಂಜ್ ಪಾಯಿಂಟ್ ತಲುಪಲು 4 ತಿಂಗಳು ಬೇಕು ಎಂದರು.

ಮಂಗಳಯಾನ ಹಾಗೂ ಚಂದ್ರಯಾನ-4ರ ಬಗ್ಗೆ ಅಧ್ಯಯನ ನಡೆಯುತ್ತಿದೆ. ಹೀಟ್ ಪೈಪ್ ಎಂಬುವುದು ಪ್ರತಿಯೊಂದು ಉಪಗ್ರಹಕ್ಕೂ ಅವಶ್ಯಕತೆ ಇದೆ. ಉಷ್ಣಾಂಶವನ್ನು ಹೆಚ್ಚಿಸಲು ಹೀಟ್ ಪೈಪ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಇಸ್ರೋ ವಿಜ್ಞಾನಿ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್