AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ಗಂಟೆಗಳ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾಪ: ಸರ್ಕಾರದ ವಿರುದ್ಧ ಐಟಿ ವೃತ್ತಿಪರರ ಮೇಲ್ ಸಮರ

ಐಟಿ ಕಂಪನಿಗಳಲ್ಲಿ 14 ಗಂಟೆ ಕೆಲಸದ ಅವಧಿ ನಿಗದಿಪಡಿಸುವ ವಿಚಾರವಾಗಿ ಸಿಡಿದೆದ್ದಿರುವ ಐಟಿ ವೃತ್ತಿಪರರು ಇದೀಗ ಮೇಲ್ ಅಭಿಯಾನ ಶುರು ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ‘I oppose the Increase in Working Hours’ ಎಂಬ ಮೇಲ್ ಮಾಡಲು ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.

14 ಗಂಟೆಗಳ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾಪ: ಸರ್ಕಾರದ ವಿರುದ್ಧ ಐಟಿ ವೃತ್ತಿಪರರ ಮೇಲ್ ಸಮರ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Jul 24, 2024 | 10:44 AM

Share

ಬೆಂಗಳೂರು, ಜುಲೈ 24: ಐಟಿ ಕಂಪನಿ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾವದ ವಿರುದ್ಧ ಕರ್ನಾಟಕದ ಐಟಿ ವೃತ್ತಿಪರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಕಾರ್ಮಿಕ ಸಚಿವರಿಗೆ ಸಾಮೂಹಿಕವಾಗಿ ಮೇಲ್ ಮಾಡುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಮೇಲ್ ಮೂಲಕವೇ ಸರ್ಕಾರದ ವಿರುದ್ಧ ಸಮರ ಸಾರಲು ಐಟಿ ವೃತ್ತಿಪರರು ತೀರ್ಮಾನ ಮಾಡಿದ್ದಾರೆ.

ಮೇಲ್ ಮೂಲಕ ಸಿಎಂ ಹಾಗೂ ಕಾರ್ಮಿಕ ಸಚಿವರಿಗೆ ತಮಗಾಗುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿಸಲು ಐಟಿ ವೃತ್ತಿಪರರು ನಿರ್ಧಾರ ಕೈಗೊಂಡಿದ್ದಾರೆ. ಪ್ರಸ್ತಾವನೆ ಜಾರಿಯಾದರೆ ತಮ್ಮ ಕುಟುಂಬಗಳಿಗಾಗುವ ಸಮಸ್ಯೆ, ಅಷ್ಟೇ ಅಲ್ಲದೆ ತಮಗೆ ಆಗಬಹುದಾದ ಸಮಸ್ಯೆಗಳ ಬಗ್ಗೆ ಮೇಲ್ ಸಂದೇಶದಲ್ಲಿ ಉಲ್ಲೇಖಿಸಲು ಕರ್ನಾಟಕ ರಾಜ್ಯ ಐಟಿ ಮತ್ತು ಐಟಿಇಎಸ್ ಎಂಪ್ಲಾಯೀಸ್ ಯೂನಿಯನ್ ಉದ್ಯೋಗಿಗಳಲ್ಲಿ ಮನವಿ ಮಾಡಿದೆ.

‘I oppose the Increase in Working Hours (ಕೆಲಸದ ಅವಧಿ ವಿಸ್ತರಣೆಯನ್ನು ನಾನು ವಿರೋಧಿಸುತ್ತೇನೆ)’ ಎಂಬ ಬರಹದ ಜತೆ ಮೇಲ್ ಮಾಡಲು ಸಲಹೆ ನೀಡಲಾಗಿದೆ.

ಈಗಾಗಲೇ ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಿಎಂ ಸಿದ್ದರಾಮಯ್ಯಗೆ ಸಹಸ್ರಾರು ಸಂಖ್ಯೆಯಲ್ಲಿ ಮೇಲ್ ಸಂದೇಶಗಳು ಬಂದಿವೆ. ಸಾಮಾಜಿಕ ಜಾಲತಾಣ ಎಕ್ಸ್​​​ ಹಾಗೂ ಫೇಸ್​​ಬುಕ್​​ನಲ್ಲಿ ಕೂಡ ಐಟಿ ನೌಕರರ ಕ್ಯಾಂಪೇನ್ ಟ್ರೆಂಡ್ ಆಗುತ್ತಿದೆ.

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಜತೆಗೆ, ಬಿಪಿಓಗಳಲ್ಲಿ 12 ಗಂಟೆಗೂ ಅಧಿಕ ಕೆಲಸ ಮಾಡಲು ಅವಕಾಶ ನೀಡಬೇಕು. ಅಲ್ಲದೇ ನಿಯಮಿತವಾಗಿ ಮೂರು ತಿಂಗಳು 125 ಗಂಟೆ ಮೀರದಂತೆ ಕೆಲಸ ಇರಬೇಕು. ಐಟಿ ಉದ್ಯೋಗಿಗಳಿಗೆ 14 ಗಂಟೆ ಕೆಲಸದ ಅವಧಿ ನಿಗದಿಪಡಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ದಿನಕ್ಕೆ 14 ಗಂಟೆ ಕೆಲಸಕ್ಕೆ ಕರ್ನಾಟಕ ಐಟಿ ಕಂಪನಿಗಳಿಂದ ಸರ್ಕಾರಕ್ಕೆ ಪ್ರಸ್ತಾಪ: ಭುಗಿಲೆದ್ದ ಆಕ್ರೋಶ

ಇದರ ಬೆನ್ನಲ್ಲೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಐಟಿ-ಬಿಟಿ ಕಂಪನಿಗಳು ಉದ್ಯೋಗ ಕಡಿತಗೊಳಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ