AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ಪ್ರಕರಣದ ವಿಚಾರಣೆ ಶುಕ್ರವಾರ ನಡೆಯುವುದು ಅನುಮಾನ; ಕಾರಣ ಇಲ್ಲಿದೆ

ಸಂವಿಧಾನ ಪೀಠದಲ್ಲಿ ಬಿಆರ್ ಗವಾಯಿ ಇರುವ ಕಾರಣ ಕಾವೇರಿ ನೀರು ಬಿಡುಗಡೆ ಸಂಬಂದದ ಅರ್ಜಿ ವಿಚಾರಣೆ ನಡೆಯುವುದು ಅನುಮಾನವಾಗಿದೆ. ಆದರೆ, ತಮಿಳುನಾಡು ಸರ್ಕಾರ ಅರ್ಜಿ ವಿಚಾರಣೆ ಮಾಡಲು ಪ್ರಸ್ತಾಪಿಸುವ ಸಾದ್ಯತೆ ಇದ್ದು, ಕಾವೇರಿ ನೀರು ಹಂಚಿಕೆ ಕುರಿತ ಅರ್ಜಿ ವಿಚಾರಣೆ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ಪ್ರಕರಣದ ವಿಚಾರಣೆ ಶುಕ್ರವಾರ ನಡೆಯುವುದು ಅನುಮಾನ; ಕಾರಣ ಇಲ್ಲಿದೆ
ಸುಪ್ರೀಂ ಕೋರ್ಟ್‌
ಹರೀಶ್ ಜಿ.ಆರ್​.
| Edited By: |

Updated on: Aug 31, 2023 | 7:52 PM

Share

ನವದೆಹಲಿ, ಆಗಸ್ಟ್ 31: ಕಾವೇರಿ ನದಿ ನೀರು ಹಂಚಿಕೆ ಪ್ರಕರಣದ (Cauvery water dispute) ವಿಚಾರಣೆಯನ್ನು ಸುಪ್ರೀಂ ಕೋರ್ಟ್​​​ (Supreme Court) ಶುಕ್ರವಾರ ನಡೆಸುವುದು ಅನುಮಾನವಾಗಿದೆ. ನ್ಯಾಯಮೂರ್ತಿ ಗವಾಯಿ ನೇತೃತ್ವದ ಪೀಠದ ವಿಚಾರಣಾ ಪಟ್ಟಿಯಲ್ಲಿ ಪ್ರಕರಣದ ಬಗ್ಗೆ ಉಲ್ಲೇಖಿಸದೇ ಇರುವುದು ಗುರುವಾರ ತಿಳಿದುಬಂದಿದೆ. ಶುಕ್ರವಾರ ಸಾಂವಿಧಾನಿಕ ಪೀಠದಲ್ಲಿ ಆರ್ಟಿಕಲ್‌ 370 ಪ್ರಕರಣದ ವಿಚಾರಣೆ ನಡೆಯಲಿದೆ. ಸಂವಿಧಾನ ಪೀಠದಲ್ಲಿ ಬಿಆರ್ ಗವಾಯಿ ಇರುವ ಕಾರಣ ಕಾವೇರಿ ನೀರು ಬಿಡುಗಡೆ ಸಂಬಂದದ ಅರ್ಜಿ ವಿಚಾರಣೆ ನಡೆಯುವುದು ಅನುಮಾನವಾಗಿದೆ.

ಆದರೆ, ತಮಿಳುನಾಡು ಸರ್ಕಾರ ಅರ್ಜಿ ವಿಚಾರಣೆ ಮಾಡಲು ಪ್ರಸ್ತಾಪಿಸುವ ಸಾದ್ಯತೆ ಇದ್ದು, ಕಾವೇರಿ ನೀರು ಹಂಚಿಕೆ ಕುರಿತ ಅರ್ಜಿ ವಿಚಾರಣೆ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಈ ಮಧ್ಯೆ, ಕರ್ನಾಟಕದ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ದೆಹಲಿ ವಕೀಲರ ಜತೆ ಈಗಾಗಲೇ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್​​ನಲ್ಲಿ ರಾಜ್ಯ ಸರ್ಕಾರದ ಪರ ವಾದ ಮಂಡನೆಗೆ ಪೂರಕ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ತಜ್ಞರ ಜತೆಗೂ ಸಭೆ ನಡೆಸಿದ್ದಾರೆ. ನಾವು ನೀರು ಬಿಟ್ಟಿದ್ದೇವೆ, ತಮಿಳುನಾಡು ಹೇಗೆ ಬಳಕೆ‌ ಮಾಡಿಕೊಂಡಿದ್ದಾರೆ ಎಂಬುದು ನಮಗೆ ಅಗತ್ಯ ಇಲ್ಲ. ನಾವು ಆ ವಿಚಾರ ಚರ್ಚೆ ಬಗ್ಗೆ ಮಾಡಲ್ಲ. ಮೇಕೆದಾಟು ಒಂದೇ ಪರಿಹಾರ, ಇದು ತಮಿಳುನಾಡಿಗೆ ಅನುಕೂಲ. ವಾಸ್ತವಾಂಶ ನೋಡಲು ಕಾವೇರಿ ನೀರು ನಿಯಂತ್ರಣ ಸಮಿತಿ ತಂಡ ಕರೆಯಲಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ವಿವಾದ; ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ತಮಿಳುನಾಡು ಹೇಳಿದ್ದೇನು?

ಈ ಮಧ್ಯೆ, ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ಸೂಚನೆ ನೀಡಿರುವ ಪ್ರಮಾಣದಲ್ಲಿ ಕರ್ನಾಟಕ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ದೂರಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ ಅಫಿಡವಿಟ್​​ನಲ್ಲಿ ತಮಿಳುನಾಡು ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್