AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆಯನ್ನ ಕಷ್ಟದಲ್ಲೇ ಒಪ್ಪಿಕೊಂಡಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

ಶಕ್ತಿ ಯೋಜನೆಯನ್ನ ಕಷ್ಡದಲ್ಲೇ ಒಪ್ಪಿಕೊಂಡಿದ್ದೇವೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಕ್ಕೆ ನಾವು ಶಕ್ತಿ ಯೋಜನೆ ಮುಂದುವರೆಸೋ ಅನಿವಾರ್ಯ ಇದೆ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.

ಶಕ್ತಿ ಯೋಜನೆಯನ್ನ ಕಷ್ಟದಲ್ಲೇ ಒಪ್ಪಿಕೊಂಡಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
Kiran Surya
| Updated By: Rakesh Nayak Manchi|

Updated on: Oct 07, 2023 | 11:33 AM

Share

ಬೆಂಗಳೂರು, ಅ.7: ಶಕ್ತಿ ಯೋಜನೆಯನ್ನ (Shakti Scheme) ಕಷ್ಟದಲ್ಲೇ ಒಪ್ಪಿಕೊಂಡಿದ್ದೇವೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಕ್ಕೆ ನಾವು ಶಕ್ತಿ ಯೋಜನೆ ಮುಂದುವರೆಸೋ ಅನಿವಾರ್ಯ ಇದೆ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ನಡೆದ 148 ಬಸ್​ಗಳ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರಿಗೆ ನಿಗಮದಲ್ಲಿ ಕಳೆದ 6 ವರ್ಷದಿಂದ ವೇತನ ಪರಿಷ್ಕರಣೆ ಆಗಿಲ್ಲ. ಸದ್ಯ KSRTC ಯಲ್ಲಿ ಕರ್ತವ್ಯದಲ್ಲಿ ಮೃತ ನೌಕರರಿಗೆ 1 ಕೋಟಿ ವಿಮೆ ನೀಡಲಾಗುತ್ತಿದೆ. ಇದನ್ನ ಇತರ ನಿಗಮಗಳಿಗೂ ವಿಸ್ತರಣೆ ಮಾಡುವ ಚಿಂತನೆ ಇದೆ ಎಂದರು.

ನಾನು ಪಲ್ಲಕ್ಕಿ ಬಸ್​ನಲ್ಲಿ ಕುಳಿತು ನೋಡಿದೆ. ಹಾಗೆನೇ ಬಸ್​ನ ಸೀಟ್​ನಲ್ಲಿ ಮಲಗಿ ನೋಡಿದೆ. ಸರಿಯಾಗಿ ಬಸ್ ಸೀಟ್ 6 ಅಡಿ ಉದ್ದವಾಗಿದೆ. ನನ್ನ ಹೆಂಡತಿಗೂ ಪಲ್ಲಕ್ಕಿ ಬಸ್​ನಲ್ಲಿ ಮೈಸೂರಿಗೆ ಹೋಗುವಂತೆ ತಿಳಿಸಿದ್ದೇನೆ ಎಂದರು.

ಇದನ್ನೂ ಓದಿ: ಪಲ್ಲಕ್ಕಿ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ವಿಶೇಷತೆಗಳು ಹೀಗಿವೆ

ಇಡೀ ದೇಶದಲ್ಲೇ ನಮ್ಮ ರಾಜ್ಯದ ಸಾರಿಗೆ ಮಾದರಿಯಾಗಿದೆ. ಇಲ್ಲಿನ ಸೇವೆಯನ್ನ ಇತರ ರಾಜ್ಯಗಳ ಸಾರಿಗೆಗೂ ಅಳವಡಿಕೆ ಮಾಡುವ ಚಿಂತನೆ ಮಾಡುತ್ತಿದ್ದಾರೆ. ನೂತನ ಬಸ್​ಗೆ ಪಲ್ಲಕ್ಕಿ ಹೆಸರು ಕೊಟ್ಟ ಸಚಿವರಿಗೆ ಪ್ರಶಸ್ತಿ ಕೊಡಬೇಕು. ಪಲ್ಲಕ್ಕಿ ಬಸ್ ಪ್ರತಿ ಮನೆಯರ ಮಹಾರಾಣಿಯನ್ನ ಕರೆದುಕೊಂಡು ಹೋಗಲಿದೆ ಎಂದರು.

ಒಂದು ವರ್ಷದಲ್ಲಿ ಸಾವಿರ ಬಸ್​ಗಳ ಸೇರ್ಪಡೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇನ್ನೊಂದು ವರ್ಷದಲ್ಲಿ ಇಲಾಖೆಗೆ ಒಂದು ಸಾವಿರ ಬಸ್​ಗಳನ್ನು ಸೇರ್ಪಡೆ ಮಾಡಲಾಗುವುದು ಎಂದರು. ನಾಲ್ಕೂ ನಿಗಮಗಳಲ್ಲಿ 24000 ಬಸ್​ಗಳು ಸಂಚಾರ ಮಾಡುತ್ತಿವೆ. ಪ್ರತಿವರ್ಷ ಶೇಕಡಾ 10 ರಷ್ಟು ಬಸ್​ಗಳು ಸ್ಕ್ರ್ಯಾಪ್ ಆಗುತ್ತಿವೆ. ಕಳೆದ 6 ವರ್ಷದಿಂದ ಹೊಸ ಬಸ್ ಖರೀದಿ ಮಾಡಿರಲಿಲ್ಲ. ಸದ್ಯ 148 ಬಸ್​ಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಜನಸಂಖ್ಯೆಗೆ ಅನುಗುಣವಾಗಿ ಬಸ್​ಗಳು ಇಲ್ಲ, ಕೊರತೆ ಇದೆ. ಜನಸಂಖ್ಯೆಗೆ ಅನುಗುಣವಾಗಿ 12000 ಬಸ್​ಗಳ ಅಗತ್ಯವಿದೆ. ಬೆಂಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಪ್ರದೇಶಗಳಲ್ಲಿ 2 ಕೋಟಿ ಜನಸಂಖ್ಯೆ ಇದೆ ಎಂದರು.

ಪ್ರಸ್ತುತ ನಾನ್ ಎಸಿ ಬಸ್​ಗಳಿಗೆ ಡಿಮ್ಯಾಂಡ್ ಇದೆ. ಹೀಗಾಗಿ ಇಂದು ವಿನೂತನ ಮಾದರಿಯ ನಾನ್ ಎಸಿ ಬಸ್​ಗಳಿಗೆ ಚಾಲನೆ ನೀಡಲಾಗಿದೆ. ಒಟ್ಟು 100 ಹೊಸ ನಾನ್ ಎಸಿ ಬಸ್​ಗಳನ್ನು ಕೆಎಸ್​ಆರ್​ಟಿಸಿಗೆ ಸೇರ್ಪಡೆಯಾಗಲಿದೆ ಎಂದರು. ನಾಲ್ಕೂ ನಿಗಮಗಳಲ್ಲಿ ನೇಮಕಾತಿ ಆಗಿಲ್ಲ. ಬಾಕಿ ಇರುವ ನೇಮಕಾತಿಯೂ ಆಗಲಿದೆ ಅಂತಾನೂ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್