AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳುವುದು ತಪ್ಪು: ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ

ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ. ಆದರೆ ಹೈಕಮಾಂಡ್ ತೀರ್ಮಾನ ಮಾಡಬೇಕು. ಈ ಸಂದರ್ಭದಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಸರಿಯಲ್ಲ. ಸೂಕ್ತ ಸಮಯದಲ್ಲಿ ಇದರ ಬಗ್ಗೆ ಹೇಳಬೇಕು ಎಂದು ಹೇಳಿದರು.

ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳುವುದು ತಪ್ಪು: ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ
ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ
TV9 Web
| Updated By: sandhya thejappa|

Updated on: Jun 21, 2021 | 12:38 PM

Share

ಕೊಪ್ಪಳ: ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವುದು ತಪ್ಪು ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ, ಕಾಂಗ್ರೆಸ್ನಲ್ಲಿ ನಾವು ಹೇಳಿದಂತೆ ಮುಖ್ಯಮಂತ್ರಿ ಮಾಡಲ್ಲ. ಕಾಂಗ್ರೆಸ್ನಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗುತ್ತೆ. ಹೀಗಾಗಿ ಯಾರೂ ಮುಂದಿನ ಸಿಎಂ ಬಗ್ಗೆ ಮಾತಾಡಬಾರದು. ಶಾಸಕ ಜಮೀರ್ ಅಹ್ಮದ್ಗೂ ಪಕ್ಷ ನಿರ್ದೇಶನ ಕೊಟ್ಟಿದೆ. ಆದರೂ ಅವರು ಪದೇಪದೆ ಅದನ್ನೇ ಹೇಳೋದು ಸರಿಯಲ್ಲ. ಇದರಿಂದ ಕಾಂಗ್ರೆಸ್ಗೆ ಮುಜುಗರವಾಗುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ. ಆದರೆ ಹೈಕಮಾಂಡ್ ತೀರ್ಮಾನ ಮಾಡಬೇಕು. ಈ ಸಂದರ್ಭದಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಸರಿಯಲ್ಲ. ಸೂಕ್ತ ಸಮಯದಲ್ಲಿ ಇದರ ಬಗ್ಗೆ ಹೇಳಬೇಕು ಎಂದು ಹೇಳಿದರು.

ಇನ್ನೂ ಎರಡು ವರ್ಷ ಚುನಾವಣೆ ಇದೆ. ಹೈಕಮಾಂಡ ಮೊದಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ್ರೆ, ನಾವು ಅದನ್ನೆ ಹೇಳ್ತೀವಿ. ಬಿಜೆಪಿಯವರ ಬಗ್ಗೆ ನಾವು ಮಾತಾಡೋದು ಸರಿ ಅಲ್ಲ. ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಅಮರೇಗೌಡ ರಾಜಕಾರಣ ಮಾಡುತ್ತಾರೆ ಅಂತಾರೆ. ಹಾಗಾದರೆ ನಾವು ರಾಜಕಾರಣ ಮಾಡೋಕೆ ಬಂದಿದ್ದೀವಾ? ಅಥವಾ ದನಕಾಯೋಕೆ ಬಂದಿದ್ದೀವಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ

ಜಮ್ಮು ಕಾಶ್ಮೀರಕ್ಕೆ ಸದ್ಯದಲ್ಲೇ ರಾಜ್ಯದ ಸ್ಥಾನಮಾನ; ಯಾವುದೇ ಕಾರಣಕ್ಕೂ ವಿಶೇಷ ಸ್ಥಾನ ನೀಡಲ್ಲ- ಮೋದಿ ಲೆಕ್ಕಾಚಾರವೇನು?

ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ವಿವೋ ಸಂಸ್ಥೆಯ ಹೊಚ್ಚಹೊಸ ಸ್ಮಾರ್ಟ್‌ಫೋನ್; V21e 5G ವಿಶೇಷತೆಗಳೇನು?

(It is wrong to say that Siddaramaiah is the next CM says congress MLA Amaregouda Bayyapur in koppal)