AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಅಧಿಕಾರಿಗಳ ಭರ್ಜರಿ ಬೇಟೆ; ಬೆಂಗಳೂರಲ್ಲಿ ಒಂದು ವಾರದಲ್ಲಿ 80 ಕೋಟಿಗೂ ಅಧಿಕ ಹಣ ಪತ್ತೆ

ತೆಲಂಗಾಣ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೈದರಾಬಾದ್​ ಹಾಗೂ ಚೆನ್ನೈಗೆ ಹಣ ರವಾನೆ ಮಾಡುತ್ತಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ. ಮಾಹಿತಿ ಆಧರಿಸಿ ನಗರಕ್ಕೆ ಬಂದ ದೆಹಲಿ, ಚೆನ್ನೈ, ಹೈದರಾಬಾದ್ ಅಧಿಕಾರಿಗಳು ಕಳೆದ ಒಂದು ವಾರದಿಂದ ಸ್ಥಳೀಯ ಪೊಲೀಸರ ಸಹಾಯದಿಂದ ರಿಯಲ್​ ಎಸ್ಟೇಟ್​, ಚಿನ್ನದ ವ್ಯಾಪಾರಿಗಳು, ಗುತ್ತಿಗೆದಾರರು ಸೇರಿಂದತೆ 20ಕ್ಕೂ ಹೆಚ್ಚು ಜನರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಐಟಿ ಅಧಿಕಾರಿಗಳ ಭರ್ಜರಿ ಬೇಟೆ; ಬೆಂಗಳೂರಲ್ಲಿ ಒಂದು ವಾರದಲ್ಲಿ 80 ಕೋಟಿಗೂ ಅಧಿಕ ಹಣ ಪತ್ತೆ
ಆದಾಯ ತೆರಿಗೆ ಇಲಾಖೆ
TV9 Web
| Updated By: ವಿವೇಕ ಬಿರಾದಾರ|

Updated on: Oct 13, 2023 | 1:29 PM

Share

ಬೆಂಗಳೂರು ಅ.11: ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಕಳೆದ ವಾರ ಬೆಂಗಳೂರಿನಲ್ಲಿ (Bengaluru) ಆಭರಣ ವ್ಯಾಪಾರಿಗಳ ಮೇಲೆ ಐಟಿ ಅಧಿಕಾರಿಗಳು (IT Officers) ದಾಳಿ ನಡೆಸಿದ್ದರು. ದೊರೆತ ದಾಖಲೆಗಳ ಆಧಾರದ ಮೇಲೆ ಕೆಲವು ಆಭರಣ ವ್ಯಾಪಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ವ್ಯಾಪಾರಿಗಳು ಮಾತ್ರವಲ್ಲದೆ ಅಧಿಕಾರಿಗಳು ಗುತ್ತಿಗೆದಾರರ​ ಮನೆ ಮೇಲೂ ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳ ಈ ದಾಳಿಗು ಮತ್ತು ಪಂಚ ರಾಜ್ಯಗಳ ಚುನಾವಣೆಗೂ ನಂಟು ಇದೆ. ಹೌದು ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ಚುನಾವಣೆ ದಿನಾಂಕ ಘೋಷಿಸಿದ ಹಿನ್ನೆಲೆಯಲ್ಲಿ ದೆಹಲಿ, ಚೆನ್ನೈ, ಹೈದರಾಬಾದ್ ಕರ್ನಾಟಕ ಐಟಿ ಅಧಿಕಾರಿಗಳು ಅಲರ್ಟ್​ ಆಗಿದ್ದಾರೆ.

ತೆಲಂಗಾಣ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೈದರಾಬಾದ್​ ಹಾಗೂ ಚೆನ್ನೈಗೆ ಹಣ ರವಾನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ. ಮಾಹಿತಿ ಆಧರಿಸಿ ನಗರಕ್ಕೆ ಬಂದ ದೆಹಲಿ, ಚೆನ್ನೈ, ಹೈದರಾಬಾದ್ ಅಧಿಕಾರಿಗಳು ಕಳೆದ ಒಂದು ವಾರದಿಂದ ಸ್ಥಳೀಯ ಪೊಲೀಸರ ಸಹಾಯದಿಂದ ರಿಯಲ್​ ಎಸ್ಟೇಟ್​, ಚಿನ್ನದ ವ್ಯಾಪಾರಿಗಳು, ಗುತ್ತಿಗೆದಾರರು ಸೇರಿಂದತೆ 20ಕ್ಕೂ ಹೆಚ್ಚು ಜನರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಐಟಿ ಅಧಿಕಾರಿಗಳ ಗುರುವಾರ ಆಂಧ್ರ ಮೂಲದ ಉದ್ಯಮಿಗಳಾದ ಚಂದ್ರಶೇಖರ್, ಯಶಸ್ವಿನಿ, ಸುನೀತಾ, ವೆಂಕಟಶ್ರೀನಿವಾಸ್ ಮತ್ತು ವಿಜಯ್ ಸೇರಿದಂತೆ 10ಕ್ಕೂ ಹೆಚ್ಚು ಜನರ ಮನೆ, ಕಚೇರಿ ಸೇರಿದಂತೆ 75 ಕಡೆ ದಾಳಿ ಮಾಡಿದ್ದಾರೆ. ನಿನ್ನೆ (ಅ.12) ಉದ್ಯಮಿಗಳ ಮನೆಯಲ್ಲಿ 20 ಕೋಟಿ ರೂ. ಜಪ್ತಿ ಮಾಡಿದ್ದರು. ಕಳೆದ ವಾರ ಬಿಲ್ಡರ್ ಕಚೇರಿಯಲ್ಲಿ 20 ಕೋಟಿ ರೂ. ಪತ್ತೆಯಾಗಿತ್ತು. ಇದೀಗ ಗುತ್ತಿಗೆದಾರ ಅಂಬಿಕಾಪತಿಗೆ ಸೇರಿದ ಮನೆಯಲ್ಲಿ 42 ಕೋಟಿ ರೂ. ಪತ್ತೆಯಾಗಿದೆ. ಒಟ್ಟಾರೆಯಾಗಿ ಕಳೆದ ಒಂದು ವಾರದಿಂದ 82 ಕೋಟಿಗೂ ಅಧಿಕ ನಗದು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಹಲವೆಡೆ ದಾಳಿ ಮುಂದುವರೆದಿದೆ.

ಇದನ್ನೂ ಓದಿ: Bengaluru IT Raid: ಬೆಂಗಳೂರಿನ ಫ್ಲಾಟ್​ ಒಂದರ ಮೇಲೆ ಐಟಿ ದಾಳಿ, ಮಂಚದಡಿ ಕಂತೆ ಕಂತೆ ನೋಟುಗಳು ಪತ್ತೆ

ಯಾರು ಈ ಅಶ್ಚತಮ್ಮ ಮತ್ತು ಅಂಬಿಕಾಪತಿ

ಆರ್​.ಟಿ ನಗರದ ಆನಂದ ಕೊಲೋನಿ ನಿವಾಸಿಯಾಗಿರುವ ಅಶ್ವತಮ್ಮ ಕಾಂಗ್ರೆಸ್​ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಕ್ಕ. 2001ರಲ್ಲಿ ಕಾವಲ್ ಬೈರಸಂದ್ರ (ವಾರ್ಡ್​​ ನಂ 95)ರ ಕಾರ್ಪೊರೇಟರ್​​ ಆಗಿದ್ದರು. ಇವರ ಪತಿ ಆರ್.ಅಂಬಿಕಾಪತಿ ಕಾಂಟ್ರಾಕ್ಟರ್ ಆಗಿದ್ದಾರೆ. ಕೆಂಪಣ್ಣ ಅವರ ಕಾಂಟ್ರಾಕ್ಟರ್ ಸಂಘದಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ರಾಜ್ಯದಲ್ಲಿ ನಡೆಯುವ ಕಾಮಗಾರಿಗೆ ಶೇ.40 ನೀಡಬೇಕು, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ನೀಡಬೇಕು ಎಂದು ಆರೋಪ ಮಾಡಿದ್ದರು. ಕೆಲವು ರಾಜಕೀಯ ವ್ಯಕ್ತಿಗಳ ವಿರುದ್ಧ ಆರೋಪ ಮಾಡಿದ್ದರು.

ತನ್ನ ವಿರುದ್ಧ ಕಮಿಷನ್ ಆರೋಪ ಮಾಡಿದ ಬಿಜೆಪಿ ಶಾಸಕ ಮುನಿರತ್ನ ಅವರು ಅಂಬಿಕಾಪತಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡಿದ್ದರು. ಈ ಪ್ರಕರಣದಲ್ಲಿ ಅಂಬಿಕಾಪತಿ ವೈಯ್ಯಾಲಿಕಾವಲ್ ಠಾಣೆ ಪೊಲೀಸರಿಂದ ಬಂಧನಕ್ಕೊಳಗಾಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು.

ಅಂಬಿಕಾಪತಿ ಮೆನ ಮೇಲೂ ಐಟಿ ದಾಳಿ

ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ