AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ಐಟಿ ದಾಳಿ

Zameer Ahmed Khan: ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಖಾನ್​ ಮನೆಯ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ.

ಶಾಸಕ ಜಮೀರ್ ಅಹ್ಮದ್ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ಐಟಿ ದಾಳಿ
ಶಾಸಕ ಜಮೀರ್ ಅಹಮದ್ ಖಾನ್
TV9 Web
| Updated By: ಸಾಧು ಶ್ರೀನಾಥ್​|

Updated on:Aug 05, 2021 | 9:40 AM

Share

ಬೆಂಗಳೂರು: ಕಾಂಗ್ರೆಸ್​ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಭವ್ಯವಾದ ಬಂಗಲೆಯ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಂದ ಐಟಿ ದಾಳಿ ನಡೆದಿದೆ. ಚಾಮರಾಜಪೇಟೆಯಲ್ಲಿರುವ ಶಾಸಕರ ಕಚೇರಿ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ನಡೆದಿದೆ 

ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ (Chamrajpet) ಶಾಸಕ ಜಮೀರ್ ಅಹ್ಮದ್ (Zameer Ahmed Khan ) ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಸುಮಾರು 15 ಮಂದಿ ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ದೆಹಲಿಯಿಂದ ಬಂದಿರುವ 45 ಐಟಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ವಸಂತನಗರದ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಐಟಿ ಶಾಕ್: ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಐಟಿ ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ಮಾಡಲಾಗಿದೆ (IT Raid).

ಇತ್ತೀಚೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಪುತ್ರಿಯ ಮದುವೆ ಮಾಡಿದ್ದ ಜಮೀರ್: ಶಾಸಕ ಜಮೀರ್ ಅಹ್ಮದ್ ಖಾನ್‌  ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ, ವಿಶಾಲವಾದ ಜಾಗದಲ್ಲಿ ಭವ್ಯ  ಬಂಗಲೆ ನಿರ್ಮಾಣ ಮಾಡಿದ್ದಾರೆ.  ಇತ್ತೀಚೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಮೀರ್ ತಮ್ಮ ಪುತ್ರಿಯ ವಿವಾಹ ಮಹೋತ್ಸವ ನೆರವೇರಿಸಿದ್ದರು.

(IT Raid on congress mla zameer ahmed khan in chamrajpet bangalore)

Published On - 8:04 am, Thu, 5 August 21

ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ