AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

IT Raids: ರಾಜ್ಯಾದ್ಯಂತ 9 ಶಿಕ್ಷಣ ಸಂಸ್ಥೆಗಳ ಮೇಲೆ IT ದಾಳಿ ನಡೆದಿದ್ದು 56 ಬೇರೆ ಬೇರೆ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ, ಮೆಡಿಕಲ್ ಸೀಟ್, ಇಂಜಿನಿಯರಿಂಗ್ ಸೀಟ್ ಸ್ಕ್ಯಾಮ್ ಸಹ ಬಯಲಾಗಿದ್ದು ಬ್ರೋಕರ್ಸ್‌ ಜೊತೆ ಸೇರಿ ಶಿಕ್ಷಣ ಸಂಸ್ಥೆಗಳಿಂದ ಅಕ್ರಮ ನಡೆದಿರುವುದಾಗಿ ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಪತ್ತೆಯಾಗಿದೆ.

ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ
ಸಂಗ್ರಹ ಚಿತ್ರ
KUSHAL V
|

Updated on:Feb 18, 2021 | 11:08 PM

Share

ಬೆಂಗಳೂರು: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್ ಸಂಬಂಧಿಸಿದಂತೆ ನಡೆದ IT ದಾಳಿ ಬಗ್ಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ. ರಾಜ್ಯಾದ್ಯಂತ 9 ಶಿಕ್ಷಣ ಸಂಸ್ಥೆಗಳ ಮೇಲೆ IT ದಾಳಿ ನಡೆದಿದ್ದು 56 ಬೇರೆ ಬೇರೆ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ, ಮೆಡಿಕಲ್ ಸೀಟ್, ಇಂಜಿನಿಯರಿಂಗ್ ಸೀಟ್ ಸ್ಕ್ಯಾಮ್ ಸಹ ಬಯಲಾಗಿದ್ದು ಬ್ರೋಕರ್ಸ್‌ ಜೊತೆ ಸೇರಿ ಶಿಕ್ಷಣ ಸಂಸ್ಥೆಗಳಿಂದ ಅಕ್ರಮ ನಡೆದಿರುವುದಾಗಿ ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಪತ್ತೆಯಾಗಿದೆ.

ಇತ್ತ, IT ರೇಡಲ್ಲಿ 30 ಕೋಟಿ ಮೌಲ್ಯದ 81 ಕೆ.ಜಿ ಚಿನ್ನ ಸೀಜ್​ ಆಗಿದೆ. ಹಾಗಾಗಿ, ಬಹುಕೋಟಿ ತೆರಿಗೆ ವಂಚನೆ ಪತ್ತೆ ಹಚ್ಚಿದ IT ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ. ಸದ್ಯ, 15 ಕೋಟಿ 90 ಲಕ್ಷ ರೂಪಾಯಿ ನಗದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜೊತೆಗೆ, ಚಿನ್ನಾಭರಣ, ವಜ್ರ ಸೇರಿ 41 ಕೆ.ಜಿ ಬೆಳ್ಳಿ ಆಭರಣವನ್ನು ಜಪ್ತಿ ಮಾಡಲಾಗಿದೆ.

ಇದಲ್ಲದೆ, ಬೇನಾಮಿ ಹೆಸರಲ್ಲಿರುವ 35 ಐಷಾರಾಮಿ ಕಾರುಗಳು ಪತ್ತೆಯಾಗಿದ್ದು 2.39 ಕೋಟಿ ಮಾರ್ಕೆಟ್ ಮೌಲ್ಯದ ವಿದೇಶ ಆಸ್ತಿ ಸಹ ಪತ್ತೆಯಾಗಿದೆ. ಈ ನಡುವೆ, 402 ಕೋಟಿ 78 ಲಕ್ಷ ರೂಪಾಯಿ ತೆರಿಗೆ ವಂಚನೆ ಸಹ ನಡೆದಿರುವುದು ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಪತ್ತೆಯಾಗಿದೆ. MBBS, ದಂತ ವೈದ್ಯ, ಪಿ.ಜಿ ಸೀಟ್ ಬ್ಲಾಕಿಂಗ್ ಹಗರಣ ಸಹ ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಪತ್ತೆಯಾಗಿದ್ದು ಬ್ರೋಕರ್ ಮೂಲಕ ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಆಕಾಶ್ ಮೆಡಿಕಲ್ ಕಾಲೇಜು ಮೇಲೆ ಐಟಿ ದಾಳಿ: ಶಿಫ್ಟ್​ಗಳಲ್ಲಿ ಅಧಿಕಾರಗಳಿಂದ ತಪಾಸಣೆ

ಇದನ್ನೂ ಓದಿ: ಕೊರೊನಾ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳ ಅವ್ಯವಹಾರ: ಬೆಳಗ್ಗೆಯಿಂದ ರಾಜ್ಯದಲ್ಲಿ ಐಟಿ ದಾಳಿ, ತಾಜಾ ಏನು?

ಇದನ್ನೂ ಓದಿ: IT Raid: ಖಾಸಗಿ ಆಸ್ಪತ್ರೆ ಮಾಲೀಕರಿಗೆ ಐಟಿ ಶಾಕ್​ ಟ್ರೀಟ್​ಮೆಂಟ್, ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ​

Published On - 11:04 pm, Thu, 18 February 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ