AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

IT Raids: ರಾಜ್ಯಾದ್ಯಂತ 9 ಶಿಕ್ಷಣ ಸಂಸ್ಥೆಗಳ ಮೇಲೆ IT ದಾಳಿ ನಡೆದಿದ್ದು 56 ಬೇರೆ ಬೇರೆ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ, ಮೆಡಿಕಲ್ ಸೀಟ್, ಇಂಜಿನಿಯರಿಂಗ್ ಸೀಟ್ ಸ್ಕ್ಯಾಮ್ ಸಹ ಬಯಲಾಗಿದ್ದು ಬ್ರೋಕರ್ಸ್‌ ಜೊತೆ ಸೇರಿ ಶಿಕ್ಷಣ ಸಂಸ್ಥೆಗಳಿಂದ ಅಕ್ರಮ ನಡೆದಿರುವುದಾಗಿ ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಪತ್ತೆಯಾಗಿದೆ.

ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ
ಸಂಗ್ರಹ ಚಿತ್ರ
KUSHAL V
|

Updated on:Feb 18, 2021 | 11:08 PM

Share

ಬೆಂಗಳೂರು: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್ ಸಂಬಂಧಿಸಿದಂತೆ ನಡೆದ IT ದಾಳಿ ಬಗ್ಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ. ರಾಜ್ಯಾದ್ಯಂತ 9 ಶಿಕ್ಷಣ ಸಂಸ್ಥೆಗಳ ಮೇಲೆ IT ದಾಳಿ ನಡೆದಿದ್ದು 56 ಬೇರೆ ಬೇರೆ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ, ಮೆಡಿಕಲ್ ಸೀಟ್, ಇಂಜಿನಿಯರಿಂಗ್ ಸೀಟ್ ಸ್ಕ್ಯಾಮ್ ಸಹ ಬಯಲಾಗಿದ್ದು ಬ್ರೋಕರ್ಸ್‌ ಜೊತೆ ಸೇರಿ ಶಿಕ್ಷಣ ಸಂಸ್ಥೆಗಳಿಂದ ಅಕ್ರಮ ನಡೆದಿರುವುದಾಗಿ ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಪತ್ತೆಯಾಗಿದೆ.

ಇತ್ತ, IT ರೇಡಲ್ಲಿ 30 ಕೋಟಿ ಮೌಲ್ಯದ 81 ಕೆ.ಜಿ ಚಿನ್ನ ಸೀಜ್​ ಆಗಿದೆ. ಹಾಗಾಗಿ, ಬಹುಕೋಟಿ ತೆರಿಗೆ ವಂಚನೆ ಪತ್ತೆ ಹಚ್ಚಿದ IT ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ. ಸದ್ಯ, 15 ಕೋಟಿ 90 ಲಕ್ಷ ರೂಪಾಯಿ ನಗದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜೊತೆಗೆ, ಚಿನ್ನಾಭರಣ, ವಜ್ರ ಸೇರಿ 41 ಕೆ.ಜಿ ಬೆಳ್ಳಿ ಆಭರಣವನ್ನು ಜಪ್ತಿ ಮಾಡಲಾಗಿದೆ.

ಇದಲ್ಲದೆ, ಬೇನಾಮಿ ಹೆಸರಲ್ಲಿರುವ 35 ಐಷಾರಾಮಿ ಕಾರುಗಳು ಪತ್ತೆಯಾಗಿದ್ದು 2.39 ಕೋಟಿ ಮಾರ್ಕೆಟ್ ಮೌಲ್ಯದ ವಿದೇಶ ಆಸ್ತಿ ಸಹ ಪತ್ತೆಯಾಗಿದೆ. ಈ ನಡುವೆ, 402 ಕೋಟಿ 78 ಲಕ್ಷ ರೂಪಾಯಿ ತೆರಿಗೆ ವಂಚನೆ ಸಹ ನಡೆದಿರುವುದು ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಪತ್ತೆಯಾಗಿದೆ. MBBS, ದಂತ ವೈದ್ಯ, ಪಿ.ಜಿ ಸೀಟ್ ಬ್ಲಾಕಿಂಗ್ ಹಗರಣ ಸಹ ಪ್ರಾಥಮಿಕ ಹಂತದ ಪರಿಶೀಲನೆಯಲ್ಲಿ ಪತ್ತೆಯಾಗಿದ್ದು ಬ್ರೋಕರ್ ಮೂಲಕ ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಆಕಾಶ್ ಮೆಡಿಕಲ್ ಕಾಲೇಜು ಮೇಲೆ ಐಟಿ ದಾಳಿ: ಶಿಫ್ಟ್​ಗಳಲ್ಲಿ ಅಧಿಕಾರಗಳಿಂದ ತಪಾಸಣೆ

ಇದನ್ನೂ ಓದಿ: ಕೊರೊನಾ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳ ಅವ್ಯವಹಾರ: ಬೆಳಗ್ಗೆಯಿಂದ ರಾಜ್ಯದಲ್ಲಿ ಐಟಿ ದಾಳಿ, ತಾಜಾ ಏನು?

ಇದನ್ನೂ ಓದಿ: IT Raid: ಖಾಸಗಿ ಆಸ್ಪತ್ರೆ ಮಾಲೀಕರಿಗೆ ಐಟಿ ಶಾಕ್​ ಟ್ರೀಟ್​ಮೆಂಟ್, ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ​

Published On - 11:04 pm, Thu, 18 February 21

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!