AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿಯನ್ನ ಫೇಕ್​ ಎನ್​ಕೌಂಟರ್ ಮಾಡುವ ವಿಚಾರ ಪೊಲೀಸರಿಗಿತ್ತು ಅನಿಸುತ್ತೆ: ಪ್ರಲ್ಹಾದ್ ಜೋಶಿ ಆರೋಪ

ಬಾಗಲಕೋಟೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಪೊಲೀಸರು ಸಿಟಿ ರವಿ ಅವರನ್ನು ನಕಲಿ ಎನ್‌ಕೌಂಟರ್‌ ಮಾಡುವ ವಿಚಾರದಲ್ಲಿದ್ದರು ಎಂದು ಆರೋಪಿಸಿದ್ದಾರೆ. ಬೆಳಗಾವಿ ಪೊಲೀಸ್ ಕಮಿಷನರ್ ವಿರುದ್ಧವೂ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಟಿ ರವಿ ಅವರ ಬಂಧನ ಮತ್ತು ಪೊಲೀಸರ ದುರ್ವರ್ತನೆಯನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಲಾಗಿದೆ.

ಸಿಟಿ ರವಿಯನ್ನ ಫೇಕ್​ ಎನ್​ಕೌಂಟರ್ ಮಾಡುವ ವಿಚಾರ ಪೊಲೀಸರಿಗಿತ್ತು ಅನಿಸುತ್ತೆ: ಪ್ರಲ್ಹಾದ್ ಜೋಶಿ ಆರೋಪ
ಸಿಟಿ ರವಿಯನ್ನ ಫೇಕ್​ ಎನ್​ಕೌಂಟರ್ ಮಾಡುವ ವಿಚಾರ ಪೊಲೀಸರಿಗಿತ್ತು ಅನಿಸುತ್ತೆ: ಪ್ರಹ್ಲಾದ್ ಜೋಶಿ ಆರೋಪ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Dec 21, 2024 | 9:52 PM

Share

ಬಾಗಲಕೋಟೆ, ಡಿಸೆಂಬರ್​ 21: ಸಿಟಿ ರವಿ ಅವರನ್ನ ಫೇಕ್​ಎನ್​ಕೌಂಟರ್​ ಮಾಡುವ ವಿಚಾರ ಪೊಲೀಸರಿಗೆ ಇತ್ತು ಅನಿಸುತ್ತೆ. ನಾವು ಏನು ಮಾಡಬೇಕು ಅದನ್ನ ನಾವು ಮಾಡುತ್ತೇವೆ. ಈ ಬಗ್ಗೆ ನಾವು ಸುಮ್ಮನೆ ಕೂರುವುದಿಲ್ಲ, ಹೋರಾಟ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಆರೋಪ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವಕಾಶ ಸಿಕ್ಕರೆ ಸಿ.ಟಿ.ರವಿ ಮುಗಿಸಬೇಕೆಂಬ ಉದ್ದೇಶವಿತ್ತು ಅನಿಸುತ್ತೆ. ಆದರೆ, ಸರಿಯಾದ ಅವಕಾಶ ಸಿಕ್ಕಿಲ್ಲ. ನಮ್ಮ ಎಂಎಲ್​ಸಿ ಕೇಶವಪ್ರಸಾದ್ ಕೂಡ ಅವರ ಹಿಂದೆ ಇದ್ದರು. ನಮಗೆ ಸಿ.ಟಿ.ರವಿ ಅವರ ಲೈವ್ ಲೊಕೇಶನ್ ಸಿಗುತ್ತಿತ್ತು. ಕೆಲವು ಮಾಧ್ಯಮದವರು ಕೂಡ ಬೆನ್ನುಹತ್ತಿದ್ರು, ಧನ್ಯವಾದಗಳು ಎಂದಿದ್ದಾರೆ.

ಇದನ್ನೂ ಓದಿ: ಆ ರಾತ್ರಿ ಕಾಂತಾರದ ದೈವದ ರೀತಿ ವರ್ತಿಸಿದ್ದರಿಂದ ಪೊಲೀಸರಿಂದ ಬಚಾವ್​ ಆದೆ: ಸಿಟಿ ರವಿ ಸ್ಫೋಟಕ ಹೇಳಿಕೆ

ಅಂತಹ ರಾತ್ರಿಯೊಳಗೆ ಬೆಳಗಾವಿ ಮಾಧ್ಯಮದವರು ಬೆನ್ನು ಹತ್ತಿದ್ದರು. ವಿಡಿಯೋ ಮಾಡುತ್ತಿದ್ದರು ಲೊಕೇಶನ್ ಹಾಕುತ್ತಿದ್ದರು. ಇಲ್ಲದೆ ಹೋಗಿದ್ದರೆ ಸಿಟಿ ಅವರನ್ನ ಫೇಕ್​ಎನ್​ಕೌಂಟರ್ ಮಾಡುವಂತ ವಿಚಾರ ಅಲ್ಲಿನ ಪೊಲೀಸ್ ತಂಡಕ್ಕೆ ಇತ್ತು ಅಂತ ನನಗೆ ಅನಿಸುತ್ತದೆ ಎಂದು ಹೇಳಿದ್ದಾರೆ.

ಬೆಳಗಾವಿ ಕಮಿಷನರ್ ದುಷ್ಟ ಕೆಲಸ ಮಾಡಿದ್ದಾರೆ: ಜೋಶಿ ಗರಂ

ಕಾನೂನು ಸಮಾಲೋಚನೆ ತೆಗೆದುಕೊಳ್ಳಲಿಕ್ಕೆ ನಾನು ಸಿಟಿ ರವಿಗೆ ಹೇಳಿದ್ದೇನೆ. ಆ ಪ್ರಕಾರ ಅವರು ಕಾನೂನು ಹೋರಾಟ ಮಾಡುತ್ತಾರೆ. ಸಿಟಿ ರವಿ ಅವರನ್ನ ಬಂಧನ ಮಾಡಿದ ನಂತರ ಅದೇ ದಿನ ರಾತ್ರಿ ಮ್ಯಾಜಿಸ್ಟ್ರೇಟ್ ಮುಂದೆ ಹೋಗಿ ನಿಲ್ಲಿಸುತ್ತಾರೆ. ಇಡೀ ರಾತ್ರಿ ಎಲ್ಲಾ ಕರೆದುಕೊಂಡು ತಮಗೆ ಸಂಬಂಧವಿಲ್ಲದ ಖಾನಾಪುರ ಬಾಗಲಕೋಟೆ, ಧಾರವಾಡ, ಗದಗ ವ್ಯಾಪ್ತಿಯಲ್ಲಿ ಓಡಾಡಿದ್ದಾರೆ. ಬೆಳಗಾವಿ ಕಮಿಷನರ್ ದುಷ್ಟ ಕೆಲಸ ಮಾಡಿದ್ದಾರೆ. ತಮ ವ್ಯಾಪ್ತಿಯಲ್ಲಿ ಬರ ಜಾಗದಲ್ಲಿ ಓಡಾಡಿಸಿದ್ದಾರೆ ಎಂದು ಗರಂ ಆಗಿದ್ದಾರೆ.

ಬನಹಟ್ಟಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ 

ಇನ್ನು ಸಿಟಿ ರವಿ ಬಂಧನ ಮತ್ತು ಪೊಲೀಸರ ದುರ್ವರ್ತನೆ ಖಂಡಿಸಿ ಇಂದು ಜಿಲ್ಲೆಯ ಬನಹಟ್ಟಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ಮಾಡಲಾಗಿದೆ. ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ಭದ್ರಣ್ಣವರ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:51 pm, Sat, 21 December 24

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More