AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ರಾಜ್ಯಮಟ್ಟದ ಬಂಜಾರ ಜಾಗೃತಿ ಸಮಾವೇಶ: ಗಮನ ಸೆಳೆದ ಲಂಬಾಣಿ ನೃತ್ಯ, ಕೋಲಾಟ

ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 282ನೇ ಜಯಂತೋತ್ಸವ ಹಾಗೂ ರಾಜ್ಯಮಟ್ಟದ ಬಂಜಾರ ಜಾಗೃತಿ ಸಮಾವೇಶ ನಡೆಯಿತು. ವಿಶೇಷವಾಗಿ ಲಂಬಾಣಿಗಳು ಎಂದರೆ ನೃತ್ಯ ಹಾಡು ಇಲ್ಲದೆ ಹೋದರೆ ಅದಕ್ಕೆ ಲಂಬಾಣಿ ಉತ್ಸವ ಎನ್ನುವುದೇ ತಪ್ಪು. ಇಂತಹ ಒಂದು ಉತ್ಸವಕ್ಕೆ ಸಾಕ್ಷಿ ಆಗಿದ್ದು ಚನ್ನಗಿರಿ ಸರ್ಕಾರಿ ಹೈಸ್ಕೂಲ್ ಮೈದಾನ.

ದಾವಣಗೆರೆಯಲ್ಲಿ ರಾಜ್ಯಮಟ್ಟದ ಬಂಜಾರ ಜಾಗೃತಿ ಸಮಾವೇಶ: ಗಮನ ಸೆಳೆದ ಲಂಬಾಣಿ ನೃತ್ಯ, ಕೋಲಾಟ
ಲಂಬಾಣಿ ನೃತ್ಯ
sandhya thejappa
|

Updated on: Mar 14, 2021 | 4:02 PM

Share

ದಾವಣಗೆರೆ: ಲಂಬಾಣಿಗಳು ಎನ್ನುವ ಹೆಸರು ಕೇಳುತ್ತಿದ್ದಂತೆ ಎನೋ ಒಂದು ರೀತಿಯ ಖುಷಿ. ಅವರ ಬದುಕುವ ರೀತಿ, ಮಾತನಾಡುವ ಭಾಷೆ, ಹಾಡು-ಕುಣಿತ ಹೀಗೆ ಒಂದು ರೀತಿಯ ಸಂಭ್ರಮವೇ ಅವರ ಜೀವನ. ತನ್ನದೇ ಬುಡಕಟ್ಟು ಸಂಸ್ಕೃತಿಯನ್ನು ಹೊಂದಿರುವ ಲಂಬಾಣಿ ಸಮುದಾಯದ ರಾಜ್ಯಮಟ್ಟದ ಸಮ್ಮೇಳನ ನಿನ್ನೆ (ಫೆಬ್ರವರಿ 13) ಚನ್ನಗಿರಿಯಲ್ಲಿ ನಡೆಯಿತು. ಸಮ್ಮೇಳನದಲ್ಲಿ ಲಂಬಾಣಿ ನೃತ್ಯ, ಕೋಲಾಟ, ಜಾನಪದ ಶೈಲಿ ಇತರೆ ಕಲಾಪ್ರಕಾರಗಳು ಗಮನಸೆಳೆದವು.

ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 282ನೇ ಜಯಂತೋತ್ಸವ ಹಾಗೂ ರಾಜ್ಯಮಟ್ಟದ ಬಂಜಾರ ಜಾಗೃತಿ ಸಮಾವೇಶ ನಡೆಯಿತು. ವಿಶೇಷವಾಗಿ ಲಂಬಾಣಿಗಳು ಎಂದರೆ ನೃತ್ಯ ಹಾಡು ಇಲ್ಲದೆ ಹೋದರೆ ಅದಕ್ಕೆ ಲಂಬಾಣಿ ಉತ್ಸವ ಎನ್ನುವುದೇ ತಪ್ಪು. ಇಂತಹ ಒಂದು ಉತ್ಸವಕ್ಕೆ ಸಾಕ್ಷಿ ಆಗಿದ್ದು ಚನ್ನಗಿರಿ ಸರ್ಕಾರಿ ಹೈಸ್ಕೂಲ್ ಮೈದಾನ. ವಿಶೇಷವಾಗಿ ಕುಡಚಿ ಕ್ಷೇತ್ರದ ಶಾಸಕ, ತಾಂಡಾ ನಿಗಮ ಅಭಿವೃದ್ಧಿ ಅಧ್ಯಕ್ಷ ಪಿ.ರಾಜೀವ್ ಉದ್ಘಾಟನೆ ಮಾಡಿದರು. ರಾಜ್ಯ ಬಂಜಾರ ಸಮುದಾಯದ ಎಲ್ಲಾ ನಾಯಕರು, ಬಂಜಾರ ಸಂಘಗಳ ಪದಾಧಿಕಾರಿಗಳು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಮಾವೇಶದಲ್ಲಿ ಮಾತನಾಡಿದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಬುಡಕಟ್ಟು ಸಂಪ್ರದಾಯದ ಬಂಜಾರ ಸಂಸ್ಕೃತಿ ಇನ್ನು ಜೀವಂತವಾಗಿದೆ. ಬಂಜಾರ ತಾಂಡಾಗಳಲ್ಲಿ ಕಾಂಕ್ರೀಟ್ ರಸ್ತೆ, ಬಂಜಾರ ಸಮುದಾಯ ಭವನ, ಕಂದಾಯ ಗ್ರಾಮ ಘೋಷಣೆ, ಬಗರ್ ಹುಕಂ ಜಮೀನಿನಲ್ಲಿ ಉಳುಮೆ ಮಾಡಿರುವವರಿಗೆ ಹಕ್ಕು ಪತ್ರ ನೀಡುವುದು ಹೀಗೆ ಹಲವು ಅಭಿವೃದ್ಧಿ ಕೆಲಸಗಳನ್ನು ನನ್ನ ಕ್ಷೇತ್ರದಲ್ಲಿ ಮಾಡುತ್ತಿದ್ದೇನೆ. ಇಂತಹದೊಂದು ಸಮಾವೇಶ ನಡೆದಿರುವುದು ಲಂಬಾಣಿ ಸಮುದಾಯ ಜಾಗೃತವಾಗಿರುವುದಕ್ಕೆ ಸಾಕ್ಷಿ ಎಂದು ಅಭಿಪ್ರಾಯಪಟ್ಟರು.

ಲಂಬಾಣಿ ಸಮುದಾಯದ ಉತ್ಸವ

ಚನ್ನಗಿರಿ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಲಂಬಾಣಿ ಉತ್ಸವ

ಗೌರಿ ಹುಣ್ಣಿಮೆಗೆ ಬಂಜಾರ ಸಮುದಾಯದ ಸಂಭ್ರಮ: 9 ದಿನ ಯುವತಿಯರಿಂದ ಕಠಿಣ ವ್ರತ

Perseverance Rover: ಸೆರೆಯಾಯ್ತು ಮಂಗಳನ ಅಂಗಳದ ಸದ್ದು, ನೀವೂ ಕೇಳಿನೋಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್