AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲ್ಲವೂ ಅಪಾಯಕಾರಿ: ಸಲ್ಫರ್ ಡೈಆಕ್ಸೈಡ್, ಕೃತಕ ಬಣ್ಣ ಪತ್ತೆ

ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದ್ದಾಯ್ತು, ಟ್ಯಾಟೂ ಕೂಡ ಹಾನಿಕಾರಕ ಎಂಬುದು ಗೊತ್ತಾಯ್ತು. ಕಲ್ಲಂಗಡಿ ಹಣ್ಣಿನಲ್ಲಿ ರಾಸಾಯನಿಕ ಬೆರಸುತ್ತಾರೆ ಎಂಬುದು ಕೂಡ ಬಯಲಾಯಿತು. ಇದೀಗ ಜನರು ದಿನನಿತ್ಯ ಬಳಸುತ್ತಿರುವ ಪ್ರಮುಖ ದಿನಸಿ ವಸ್ತು ಆಗಿರುವ ಬೆಲ್ಲದ ಸರದಿ! ಬೆಲ್ಲದಲ್ಲಿ ಕೂಡ ಅಪಾಯಕಾರಿ ರಾಸಾಯನಿಕ ಬಳಸುತ್ತಿರುವುದು ದೃಢಪಟ್ಟಿದೆ.

ಬೆಲ್ಲವೂ ಅಪಾಯಕಾರಿ: ಸಲ್ಫರ್ ಡೈಆಕ್ಸೈಡ್, ಕೃತಕ ಬಣ್ಣ ಪತ್ತೆ
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Mar 04, 2025 | 10:38 AM

Share

ಬೆಂಗಳೂರು, ಮಾರ್ಚ್ 4: ಜನರ ದೈನಂದಿನ ಆಹಾರ ಬಳಕೆಯ ವಸ್ತುವಾಗಿರುವ ಬೆಲ್ಲ ಕೂಡ ಇದೀಗ ಅಪಾಯಕಾರಿ ರಾಸಾಯನಿಕ ಹೊಂದಿರುವುದು ಆಹಾರ ಇಲಾಖೆ ನಡೆಸಿದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬೆಲ್ಲದಲ್ಲಿ ಅಪಾಯಕಾರಿ ರಾಸಾಯನಿಕ ಸಲ್ಫರ್ ಡೈಆಕ್ಸೈಡ್ ಹಾಗೂ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಗೊತ್ತಾಗಿದೆ. ಬೆಲ್ಲ ಗೋಲ್ಡನ್ ಕಲರ್​ನಲ್ಲಿ ಕಾಣಿಸುವ ಮೂಲಕ ಜನರನ್ನು ಸೆಳೆಯುವಂತೆ ಮಾಡಲು ಕೃತಕ ಬಣ್ಣ ಬೆರೆಸಲಾಗುತ್ತಿದೆ ಎಂಬುದು ತಿಳಿದುಬಂದಿದೆ.

ಗೋಲ್ಡನ್​ ಕಲರ್​​ನಲ್ಲಿ ಕಾಣಿಸುವ ಬೆಲ್ಲದತ್ತ ಜನ ಆಕರ್ಷಿತರಾಗುತ್ತಾರೆ. ಆದರೆ ರಾಸಾಯನಿಕ ಬೆಲ್ಲ ಆರೋಗ್ಯದ ಮೇಲೆ ಅಡ್ಡ ಪರಿಣಾಮಕ್ಕೆ ಕಾರಣವಾಗಿದೆ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.

ಕರ್ನಾಟಕದ ವಿವಿಧೆಡೆಯಿಂದ ಸ್ಯಾಂಪಲ್ಸ್ ಸಂಗ್ರಹಿಸಿ ಪರೀಕ್ಷೆ

ಕರ್ನಾಟಕದ ವಿವಿಧ ಕಡೆಗಳಲ್ಲಿ ಆಹಾರ ಇಲಾಖೆ ಬೆಲ್ಲದ ಮಾದರಿಗಳನ್ನು ಸಂಗ್ರಹ ಮಾಡಿತ್ತು. ಆ ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಯಾಲಾಗಿದೆ. ಸ್ಯಾಂಪಲ್​ಗಳಲ್ಲಿ ಕಲರ್ ಏಜೆಂಟ್ ಹಾಗೂ ಸಲ್ಫರ್ ಡೈಆಕ್ಸೈಡ್ ದೃಢಪಟ್ಟಿವೆ.

ಇದನ್ನೂ ಓದಿ
Image
ಯುಗಾದಿ ಹಬ್ಬಕ್ಕೆ ರೆಡಿಮೆಡ್ ಹೋಳಿಗೆ ತಿನ್ನುವ ಮುನ್ನ ಎಚ್ಚರ...ಎಚ್ಚರ..!
Image
ಟ್ಯಾಟೂನಿಂದ ಬರುತ್ತೆ ಹೆಚ್​ಐವಿ, ಕ್ಯಾನ್ಸರ್​: ಆರೋಗ್ಯ ಇಲಾಖೆ ಅಲರ್ಟ್
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!

ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂದ ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಇತ್ತೀಚಿಗಿನ ಪ್ರಯೋಗಾಲಯ ಪರೀಕ್ಷೆಗಳಲ್ಲಿ ದಡಪಟ್ಟಿತ್ತು. ಇದರ ಬೆನ್ನಲ್ಲೇ ಮಹತ್ವದ ಕ್ರಮ ಕೈಗೊಂಡಿದ್ದ ಕರ್ನಾಟಕ ಆಹಾರ ಇಲಾಖೆ, ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದಕ್ಕೆ ನಿಷೇಧ ಹೇರಿತ್ತು. ಆನಂತರ, ರಾಜ್ಯದ ವಿವಿಧ ಕಡೆಗಳಲ್ಲಿ ಮಾರಾಟವಾಗುವ ಕಲ್ಲಂಗಡಿ ಹಣ್ಣುಗಳಿಗೆ ರುಚಿ ಮತ್ತು ಬಣ್ಣ ಬರುವುದಕ್ಕಾಗಿ ರಾಸಾಯನಿಕಯುಕ್ತ ಇಂಜೆಕ್ಷನ್ ಚುಚುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು. ಇದರ ವಿರುದ್ಧವೂ ಆಹಾರ ಇಲಾಖೆ ಅಧಿಕಾರಿಗಳು ದಾಳಿಗಳನ್ನು ನಡೆಸುವ ಮೂಲಕ ಕ್ರಮ ಕೈಗೊಂಡಿದ್ದರು.

ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಟ್ಯಾಟೂವಿನಲ್ಲಿ ಕೂಡ ಕ್ಯಾನ್ಸರ್‌ಕಾರಕ ಅಂಶ ಇರುವುದು ಪತ್ತೆಯಾಗಿತ್ತು. ಕುಡಿಯುವ ನೀರಿನ ಬಾಟಲ್ ಸುರಕ್ಷತೆ ಬಗ್ಗೆಯೂ ಆಹಾರ ಇಲಾಖೆಗೆ ಅನುಮಾನ ವ್ಯಕ್ತವಾಗಿದ್ದು, ರಾಜ್ಯದ ವಿವಿಧ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಕ್ಕೆ ಕಳುಹಿಸಲಾಗಿದೆ. ಈ ವಾರವೇ ಫಲಿತಾಂಶ ದೊರೆಯುವ ಸಾಧ್ಯತೆ ಇತ್ತು ವರದಿ ಪ್ರಕಟವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಇಡ್ಲಿ, ಹೋಳಿಗೆ ಬೆನ್ನಲ್ಲೇ ಟೊಮೇಟೊ ಸಾಸ್​ನಿಂದ ಕೂಡ ಆರೋಗ್ಯಕ್ಕೆ ಕುತ್ತು

ಒಟ್ಟಿನಲ್ಲಿ ರಾಜ್ಯದಲ್ಲಿ ಜನರು ಬಳಸುವ ದೈನಂದಿನ ಬಹುತೇಕ ದಿನಸಿ, ಆಹಾರ ವಸ್ತುಗಳು ಕಲುಷಿತ, ಕಲಬೆರಕೆಯುಕ್ತ ಮತ್ತು ರಾಸಾಯನಿಕಯುಕ್ತವಾಗಿದ್ದು ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತಿರುವುದು ಆಘಾತಕಾರಿಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Tue, 4 March 25

Follow Us
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?