Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರ ವೇಳೆಗೆ ಕರ್ನಾಟಕದ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ನಲ್ಲಿ ನೀರು ಪೂರೈಕೆಗೆ ಜಲಜೀವನ್ ಮಿಷನ್​ನಡಿ ₹5,009 ಕೋಟಿ ಹಣ ವಿತರಣೆಗೆ ಅನುಮತಿ

Jal Jeevan mission: 2020-21 ರಲ್ಲಿ ಇದೇ ಯೋಜನೆಯಡಿ ಕರ್ನಾಟಕಕ್ಕೆ 1,189 ಕೋಟಿ ಹಣವನ್ನು ಮಾತ್ರ ವಿತರಿಸಲಾಗಿತ್ತು. ಆದರೆ ಈಗ ಅದರ ನಾಲ್ಕು ಪಟ್ಟು ಹೆಚ್ಚಿನ ಹಣ ವಿತರಿಸಲು ಕೇಂದ್ರದ ಜಲಶಕ್ತಿ ಇಲಾಖೆ ಒಪ್ಪಿಗೆ ಸೂಚಿಸಿದೆ.

2023ರ ವೇಳೆಗೆ ಕರ್ನಾಟಕದ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ನಲ್ಲಿ ನೀರು ಪೂರೈಕೆಗೆ ಜಲಜೀವನ್ ಮಿಷನ್​ನಡಿ ₹5,009 ಕೋಟಿ ಹಣ ವಿತರಣೆಗೆ ಅನುಮತಿ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Jul 08, 2021 | 8:20 PM

ದೆಹಲಿ: ಕರ್ನಾಟಕಕ್ಕೆ 2021-22 ನೇ ಸಾಲಿನಲ್ಲಿ ಜಲಜೀವನ್ ಮಿಷನ್​ನಡಿ ₹5,009 ಕೋಟಿ ಹಣವನ್ನು ವಿತರಿಸಲಾಗುವುದು ಎಂದ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದ್ದಾರೆ. 2023 ರೊಳಗೆ ಕರ್ನಾಟಕದ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ನಲ್ಲಿ ನೀರು ಪೂರೈಕೆ ಗುರಿ ಹೊಂದಲಾಗಿದ್ದು, ಕರ್ನಾಟಕದಲ್ಲಿ ಸದ್ಯ ಶೇ.32 ರಷ್ಟು ಮನೆಗಳಿಗೆ ಮಾತ್ರ ನಲ್ಲಿ ಮೂಲಕ ನೀರು ಪೂರೈಕೆಯಾಗುತ್ತಿದೆ. ಈ ಕಾರಣದಿಂದ ರಾಜ್ಯದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ನಲ್ಲಿಯ ಮೂಲಕ ನೀರು ಪೂರೈಸಲು ಹೆಚ್ಚಿನ ಪ್ರಮಾಣದ ಅನುದಾನ ಒದಗಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

2020-21 ರಲ್ಲಿ ಇದೇ ಯೋಜನೆಯಡಿ ಕರ್ನಾಟಕಕ್ಕೆ 1,189 ಕೋಟಿ ಹಣವನ್ನು ಮಾತ್ರ ವಿತರಿಸಲಾಗಿತ್ತು. ಆದರೆ ಈಗ ಅದರ ನಾಲ್ಕು ಪಟ್ಟು ಹೆಚ್ಚಿನ ಹಣ ವಿತರಿಸಲು ಕೇಂದ್ರದ ಜಲಶಕ್ತಿ ಇಲಾಖೆ ಒಪ್ಪಿಗೆ ಸೂಚಿಸಿದೆ. 2019 ರಲ್ಲಿ ಈ ಯೋಜನೆ ಪ್ರಾರಂಭವಾದಾಗ, ದೇಶದ ಒಟ್ಟು 19.20 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ, ಕೇವಲ 3.23 ಕೋಟಿ (17%) ಜನರು ಮಾತ್ರ ನಲ್ಲಿ ನೀರು ಸರಬರಾಜು ಹೊಂದಿದ್ದರು. ಕಳೆದ 22 ತಿಂಗಳುಗಳಲ್ಲಿ, ಕೊವಿಡ್ ಸೋಂಕು ಮತ್ತು ಲಾಕ್‌ಡೌನ್ ಅಡೆತಡೆಗಳ ಹೊರತಾಗಿಯೂ, ಜಲ ಜೀವನ್ ಮಿಷನ್​ನ್ನು ತೀವ್ರಗತಿಯಲ್ಲಿ ಜಾರಿಗೆ ತರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಅವಧಿಯಲ್ಲಿ 4.42 ಕೋಟಿ ಮನೆಗಳಿಗೆ ನೀರಿನ ಪೈಪ್​ ಸಂಪರ್ಕ ಒದಗಿಸಲಾಗಿದೆ. ವ್ಯಾಪ್ತಿ 23.36% ರಷ್ಟು ಹೆಚ್ಚಾಗುವುದರೊಂದಿಗೆ, ಪ್ರಸ್ತುತ ದೇಶಾದ್ಯಂತ 7.66 ಕೋಟಿ (40.5%) ಗ್ರಾಮೀಣ ಕುಟುಂಬಗಳು ನಲ್ಲಿ ನೀರನ್ನು ಸೌಕರ್ಯ ಪಡೆದಿವೆ. ಗೋವಾ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಪುದುಚೇರಿ ಗ್ರಾಮೀಣ ಪ್ರದೇಶಗಳಲ್ಲಿ 100% ಮನೆಗಳಿಗೆ ಈ ಸೌಕರ್ಯವನ್ನು ಕಲ್ಪಿಸಲಾಗಿದೆ. ಎಂದು ಸರ್ಕಾರ ತಿಳಿಸಿದೆ. ಪ್ರಸ್ತುತ ದೇಶದ 69 ಜಿಲ್ಲೆಗಳ 98 ಸಾವಿರಕ್ಕೂ ಹೆಚ್ಚು ಹಳ್ಳಿಗಳಲ್ಲಿ, ಪ್ರತಿ ಮನೆಯಲ್ಲೂ ನಲ್ಲಿ ನೀರು ಸರಬರಾಜು ಇದ್ದು, ಪ್ರತಿ ಹಳ್ಳಿಯ ಪ್ರತಿಯೊಂದು ಮನೆಗೂ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸುವ ಮಹತ್ವಾಕಾಂಕ್ಷೆಯನ್ನು ಸರ್ಕಾರ ಹೊಂದಿದೆ.

ಕರ್ನಾಟಕದಲ್ಲಿ, 91.19 ಲಕ್ಷ ಮನೆಗಳಲ್ಲಿ, 29.96 ಲಕ್ಷ ಕುಟುಂಬಗಳಿಗೆ (32.86%) ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ. 15 ಆಗಸ್ಟ್ 2019 ರಂದು, ಜಲ ಜೀವನ್ ಮಿಷನ್ ಪ್ರಾರಂಭಿಸುವ ಸಮಯದಲ್ಲಿ, 24.51 ಲಕ್ಷ (26.88%) ಕುಟುಂಬಗಳು ಕೊಳವೆ ನೀರು ಸರಬರಾಜು ಹೊಂದಿದ್ದವು. 22 ತಿಂಗಳಲ್ಲಿ ರಾಜ್ಯದಲ್ಲಿ ಕೇವಲ 5.44 ಲಕ್ಷ ಮನೆಗಳಿಗೆ ಮಾತ್ರ ನಲ್ಲಿ ನೀರಿನ ಸಂಪರ್ಕ ನೀಡಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ, 2022-23ರಲ್ಲಿ 17.93 ಲಕ್ಷ ನಲ್ಲಿ ನೀರಿನ ಸಂಪರ್ಕ ಮತ್ತು 2023-24ರಲ್ಲಿ ಉಳಿದ 19.93 ಲಕ್ಷ ನಲ್ಲಿ ನೀರಿನ ಸಂಪರ್ಕಗಳನ್ನು ಒದಗಿಸಲು ರಾಜ್ಯವು ಯೋಜಿಸಿದೆ.

ಇದನ್ನೂ ಓದಿ: 

Big News: ರೈತರಿಗೆ ಎಪಿಎಂಸಿ ಮೂಲಕ 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, 23,123 ಕೋಟಿ ತುರ್ತು ಕೊವಿಡ್​ ಫಂಡ್ ಬಿಡುಗಡೆ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ

(Jal Jeevan mission Central Govt allocates Rs 5009 Crore grant to Karnataka )

Published On - 8:06 pm, Thu, 8 July 21

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ