AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಅರೆಸ್ಟ್

ಬೆಂಗಳೂರಲ್ಲಿ ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್​ನನ್ನು ಜಮ್ಮು ಕಾಶ್ಮೀರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಅರೆಸ್ಟ್
ಉಗ್ರ ತಾಲಿಬ್ ಹುಸೇನ್
TV9 Web
| Updated By: Rakesh Nayak Manchi|

Updated on:Jun 07, 2022 | 4:12 PM

Share

ಬೆಂಗಳೂರು: ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್​ನನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)​ನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಶ್ರೀರಾಂಪುರದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇದನ್ನೂ ಓದಿ: Kupwara Encounter: ಕಾಶ್ಮೀರದ ಕುಪ್ವಾರಾದಲ್ಲಿ ಎನ್​ಕೌಂಟರ್; ಸೇನಾ ಪಡೆಯಿಂದ ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

ಬೆಂಗಳೂರಿನಲ್ಲಿ ತಾಲಿಕ್ ಎಂದು ಹೆಸರು ಬದಲಿಸಿ ಓಡಾಡ್ತಿದ್ದ ಶಂಕಿತ ಉಗ್ರ ತಾಲಿಬ್, ಬಿಎನ್​ಎಲ್​ ಏರ್​ ಸರ್ವಿಸ್​ನಲ್ಲಿ ಕೆಲಸ ಮಾಡುತ್ತಿದ್ದ. ಕಾಶ್ಮೀರದಿಂದ ಬೆಂಗಳೂರಿಗೆ ಬರುವ ವೇಳೆಯಲ್ಲಿ ಪೊಲೀಸ್​ ಪತ್ನಿಯನ್ನೇ ಕರೆತಂದಿದ್ದಾನೆ. ಅದರಂತೆ ಪತ್ನಿ ಸಲೀಮಾ (35) ಮತ್ತು ಆಸೀಫ್(6),ದಾನೀಫರ್ (10),ಆಶಿಯಾ(2) ಎಂಬ ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು.

ಶಂಕಿತನಿಗೆ ಆಶ್ರಯ ನೀಡಿದ ಮಸೀದಿ ಮುಖ್ಯಸ್ಥ

ಶಂಕಿತ ಉಗ್ರ ತಾಲಿಬ್ ಹುಸೇನ್​ಗೆ ಓಕಳಿಪುರಂ ಮಸೀದಿ ಮುಖ್ಯಸ್ಥ ಅನ್ವರ್ ಪಾಷಾ ಆಶ್ರಯ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಮಸೀದಿ ಪಕ್ಕದಲ್ಲೇ ರೂಮ್ ಮಾಡಿ ನೆಲೆಸಿದ್ದನು. ಅಷ್ಟೇ ಅಲ್ಲದೆ ಅಲ್ಲಿನ ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಶಂಕೆಯೂ ವ್ಯಕ್ತವಾಗಿದೆ. ಈತನಿಗೆ ಓಕಳಿಪುರಂ ನಿವಾಸಿಯಾದ ಮೌಸೀನ್ ಎಂಬಾತ ಸಿಮ್ ಕಾರ್ಡ್​ ಕೊಡಿಸಿದ್ದಾನೆ ಎನ್ನಲಾಗುತ್ತಿದೆ. ಸದ್ಯ ತಾಲಿಬ್​ನನ್ನು ಪೊಲೀಸರು ಬಂಧಿಸಿ ಕಾಶ್ಮೀರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಶಂಕಿತ ಉಗ್ರರ ಮೇಲೆ ಹದ್ದಿನ ಕಣ್ಣು

ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj  Bommai), ಇಂತಹ ಶಂಕಿತರ ಮೇಲೆ ಪೊಲೀಸ್ ಇಲಾಖೆ ನಿರಂತರ ಕಣ್ಣಿಟ್ಟಿದೆ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಹದ್ದಿನ ಕಣ್ಣಿಟ್ಟಿದ್ದಾರೆ.  ಹಿಂದೆಯೂ ಭಟ್ಕಳ, ಶಿರಸಿಯಲ್ಲಿ ಶಂಕಿತರನ್ನು ಬಂಧಿಸಲಾಗಿತ್ತು. ಕಾಶ್ಮೀರ ಪೊಲೀಸರಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದರು.

ಶಂಕಿತ ಉಗ್ರನ ಬಂಧನದ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Prathap Reddy), ಜಮ್ಮು-ಕಾಶ್ಮೀರ ಪೊಲೀಸರು ಶಂಕಿತ ಉಗ್ರನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ನಮ್ಮ ಜೊತೆ ಜಮ್ಮು ಪೊಲೀಸರು ಸಂಪರ್ಕದಲ್ಲಿದ್ದಾರೆ. ಆದರೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ವಿನಿಮಯವಾಗಿಲ್ಲ. ಮುಂದಿನ ಹಂತದಲ್ಲಿ ನಮ್ಮ ಪೊಲೀಸರು ತನಿಖೆ ಮಾಡಲಿದ್ದಾರೆ ಎಂದಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:22 am, Tue, 7 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ