AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಘಟನೆ ನಡೆದು ಎರಡು ವರ್ಷವಾದರೂ ಯಾವುದೇ ಪರಿಹಾರ ನೀಡದ ಸರ್ಕಾರ.. ಜನ ಜಾಗೃತಿ ಸಂಘಟನೆಯಿಂದ ಪಾದಯಾತ್ರೆ

ಮಾರ್ಚ್ 19, 2019 ರ ಮಧ್ಯಾಹ್ನ 3:40 ರ ಸುಮಾರಿಗೆ ಧಾರವಾಡ ನಗರದ ಕುಮಾರೇಶ್ವರ ನಗರ ಬಡಾವಣೆಯಲ್ಲಿ ಯಾರೂ ಊಹಿಸಿರದ ಘಟನೆಯೊಂದು ನಡೆದು ಹೋಗಿತ್ತು. ಮಧ್ಯಾಹ್ನ ಬಡಾವಣೆಯ ಬೆಳಗಾವಿ ರಸ್ತೆಯಲ್ಲಿ ಬಹುಮಹಡಿ ಕಟ್ಟಡವೊಂದು ದಿಢೀರನೇ ಕುಸಿದು ಬಿದ್ದಿತ್ತು.

ಧಾರವಾಡ: ಘಟನೆ ನಡೆದು ಎರಡು ವರ್ಷವಾದರೂ ಯಾವುದೇ ಪರಿಹಾರ ನೀಡದ ಸರ್ಕಾರ.. ಜನ ಜಾಗೃತಿ ಸಂಘಟನೆಯಿಂದ ಪಾದಯಾತ್ರೆ
ಜನ ಜಾಗೃತಿ ಸಂಘಟನೆಯಿಂದ ಪಾದಯಾತ್ರೆ
sandhya thejappa
|

Updated on: Mar 20, 2021 | 4:23 PM

Share

ಧಾರವಾಡ: 2019 ರಲ್ಲಿ ನಡೆದ ಘಟನೆ ಬಗ್ಗೆ ಯಾರೂ ಕೂಡ ಊಹಿಸಿರಲಿಲ್ಲ. ಇಡೀ ರಾಜ್ಯವೇ ಬೆಚ್ಚಿಬಿದ್ದಿದ್ದ ಘಟನೆಯಲ್ಲಿ ಹಲವರು ಪ್ರಾಣ ಕಳೆದುಕೊಂಡರೆ, ಅನೇಕರು ಶಾಶ್ವತವಾಗಿ ಅಂಗವಿಕಲರಾಗಿ ಹೋಗಿದ್ದರು. ಇಷ್ಟೆಲ್ಲ ಆಗಿದ್ದರೂ ಸರ್ಕಾರ ಮಾತ್ರ ಘಟನೆಗೂ ತನಗೂ ಸಂಬಂಧವೇ ಇಲ್ಲ ಅಂತಾ ಸುಮ್ಮನಾಗಿಬಿಟ್ಟಿದೆ. ಘಟನೆ ನಡೆದು ನಿನ್ನೆಗೆ ಬರೋಬ್ಬರಿ ಎರಡು ವರ್ಷವಾಗಿರುವ ಹಿನ್ನೆಲೆಯಲ್ಲಿ ಪರಿಹಾರ ವಿತರಣೆಗೆ ಆಗ್ರಹಿಸಿ ಜನ ಜಾಗೃತಿ ಸಂಘಟನೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಪರಿಹಾರ ನೀಡದ ಸರ್ಕಾರ ಮಾರ್ಚ್ 19, 2019 ರ ಮಧ್ಯಾಹ್ನ 3:40 ರ ಸುಮಾರಿಗೆ ಧಾರವಾಡ ನಗರದ ಕುಮಾರೇಶ್ವರ ನಗರ ಬಡಾವಣೆಯಲ್ಲಿ ಯಾರೂ ಊಹಿಸಿರದ ಘಟನೆಯೊಂದು ನಡೆದು ಹೋಗಿತ್ತು. ಮಧ್ಯಾಹ್ನ ಬಡಾವಣೆಯ ಬೆಳಗಾವಿ ರಸ್ತೆಯಲ್ಲಿ ಬಹುಮಹಡಿ ಕಟ್ಟಡವೊಂದು ದಿಢೀರನೇ ಕುಸಿದು ಬಿದ್ದಿತ್ತು. ಕಟ್ಟಡದ ಅವಶೇಷಗಳಡಿ ಹಲವಾರು ಜನರು ಸಿಲುಕಿದ್ದರು. ಒಂದು ವಾರ ನಡೆದ ತೆರವು ಕಾರ್ಯಾಚರಣೆ ಬಳಿಕ 57 ಜನರನ್ನು ರಕ್ಷಿಸಲಾಗಿತ್ತು. ಆದರೆ ದುರದೃಷ್ಟದಿಂದ 19 ಜನರು ಪ್ರಾಣವನ್ನು ಕಳೆದುಕೊಂಡಿದ್ದರು. ಘಟನೆ ನಡೆದು ಎರಡು ವರ್ಷ ತುಂಬಿದರೂ ಇದುವರೆಗೂ ಸರ್ಕಾರ ಗಾಯಾಳುಗಳಿಗೆ, ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರವನ್ನು ನೀಡಿಲ್ಲ ಅಂತಾ ಜನ ಜಾಗೃತಿ ಸಂಘದ ಸದಸ್ಯರು ಘಟನಾ ಸ್ಥಳದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಅದಕ್ಕೂ ಮುಂಚೆ ಘಟನಾ ಸ್ಥಳದಲ್ಲಿ ಮೊದಲಿಗೆ ಮೃತರ ಆತ್ಮಕ್ಕೆ ಶಾಂತಿ ಕೋರಿ ಪೂಜೆ ಸಲ್ಲಿಸಿ, ಮೌನಾಚರಣೆ ನಡೆಸಲಾಯಿತು.

ಮೃತರ ಭಾವಚಿತ್ರಗಳು

ಕಟ್ಟಡ ಕುಸಿತದಲ್ಲಿ ಕಾಲು ಕಳೆದುಕೊಂಡರು 

ಪಾದಯಾತ್ರೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಸ್ಥರು ಹಾಗೂ ಆಸ್ತಿ ಕಳೆದುಕೊಂಡವರು ಪಾಲ್ಗೊಂಡಿದ್ದರು. ಘಟನೆ ನಡೆದ ಬಳಿಕ ಸರ್ಕಾರ ಈ ಕುರಿತು ವರದಿ ಸಲ್ಲಿಸುವಂತೆ ಆಗಿನ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಗೆ ಆದೇಶ ಮಾಡಿತ್ತು. ಮಾರ್ಚ್ 14, 2020 ರಂದೇ ಅವರು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದರು. ಆದರೆ ಇದುವರೆಗೂ ಆ ವರದಿಯಲ್ಲಿ ಏನಿದೆ ಎನ್ನುವುದು ಬಹಿರಂಗಗೊಂಡಿಲ್ಲ. ಇದು ದೇಶದ ಭದ್ರತೆಗೆ ಸಂಬಂಧಿಸಿದ ವರದಿಯಲ್ಲ. ಆದರೂ ಅದರ ಮಾಹಿತಿಯನ್ನು ಸರ್ಕಾರ ಯಾಕೆ ಗುಪ್ತವಾಗಿ ಇರಿಸಿದೆ ಎನ್ನುವ ಪ್ರಶ್ನೆ ಇದೀಗ ಎದ್ದಿದೆ. ಇದರಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ತಂತ್ರವೇನಾದರೂ ಅಡಗಿದೆಯಾ ಎನ್ನುವ ಪ್ರಶ್ನೆಯನ್ನು ಸಂತ್ರಸ್ತರು ಕೇಳುತ್ತಿದ್ದಾರೆ. ಇದುವರೆಗೂ ಗಾಯಾಳುಗಳಿಗೆ ಯಾವುದೇ ಪರಿಹಾರ ನೀಡದೇ ಇರದಿದಕ್ಕೆ ಸಂತ್ರಸ್ತರು ಸರ್ಕಾರದ ವಿರುದ್ಧ ಹರಿಹಾಯುವಂತಾಗಿದೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಾಚರಣೆ ಮಾಡಿದರು

ಇದನ್ನೂ ಓದಿ

ಬೆಂಗಳೂರಿನ ವಿವಿಧೆಡೆ ಪೊಲೀಸರ ಕಾರ್ಯಾರಣೆ; ಬಂಧಿತರಿಂದ ಚಿನ್ನ, ಮಾದಕ ವಸ್ತು ವಶ

ವಾಟ್ಸಾಪ್ ಖಾಸಗಿತನ ನಿಯಮಾವಳಿಗಳ ಅಪ್​ಡೇಟ್​ಗೆ ದೆಹಲಿ ಹೈಕೋರ್ಟ್​ನಲ್ಲಿ ತಡೆ ಕೋರಿದ ಸರ್ಕಾರ

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು