AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janardhana Reddy Cases ಜನಾರ್ದನ ರೆಡ್ಡಿ ವಿರುದ್ಧದ 4 ಕೇಸ್​ ಕ್ಲೋಸ್: ಗಣಿ ಧಣಿ ಚುನಾವಣೆ ಹಾದಿ ಸುಗಮ…!

ಐಟಿ ಅಧಿಕಾರಿಗಳು ದಾಖಲಿಸಿದ್ದ ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಇದರಿಂದ ಅವರ ಚುನಾವಣೆ ಹಾದಿ ಸುಗಮವಾಗಿದೆ.

Janardhana Reddy Cases ಜನಾರ್ದನ ರೆಡ್ಡಿ ವಿರುದ್ಧದ 4 ಕೇಸ್​ ಕ್ಲೋಸ್: ಗಣಿ ಧಣಿ ಚುನಾವಣೆ ಹಾದಿ ಸುಗಮ...!
ಜನಾರ್ದನ ರೆಡ್ಡಿ
TV9 Web
| Edited By: |

Updated on:Dec 07, 2022 | 7:19 PM

Share

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಅಖಾಡಕ್ಕಿಳಿಯಲು ತಯಾರಿ ಮಾಡಿಕೊಳ್ಳುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ( Janardhana Reddy) ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಬಿಗ್​ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧದ ನಾಲ್ಕು ಪ್ರಕರಣಗಳನ್ನು ಕ್ಲೋಸ್ ಮಾಡಿದೆ.

2009ರಲ್ಲಿ ಬೇನಾಮಿ ಆಸ್ತಿ ಗಳಿಕೆ (Benami Property cases) ಮಾಡಿದ ಆರೋಪ ಮೇರೆಗೆ IT ಇಲಾಖೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು 2021ರಲ್ಲಿ ಆದಾಯ ತೆರಿಗೆ ಇಲಾಖೆ ಕೇಸ್​ ದಾಖಲಿಸಿತ್ತು, ಆದ್ರೆ, 2016ರ ಕಾಯ್ದೆಯನ್ನು 2009 ರ ಕೃತ್ಯಕ್ಕೆ ಪೂರ್ವಾನ್ವಯಿಸುವಂತಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇದನ್ನೂ ಓದಿ: ಗಂಗಾವತಿಯನ್ನೇ ಆಯ್ಕೆ ಮಾಡಿಕೊಂಡಿದ್ಯಾಕೆ? ಕೊನೆಗೂ ಕಾರಣ ಕೊಟ್ಟ ಜನಾರ್ದನ ರೆಡ್ಡಿ

ಈ ಹಿಂದೆ ಸುಪ್ರೀಂ ಕೋರ್ಟ್ (Supreme Court) ನೀಡಿದ್ದ ತೀರ್ಪು ಆಧರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಕೇಸ್ ಕ್ಲೋಸ್​ ಮಾಡಿದೆ. 2009 ರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿ ಐಟಿ ಅಧಿಕಾರಿಗಳು 2016ರ ಬೇನಾಮಿ ವ್ಯವಹಾರ ನಿರ್ಬಂಧ ಕಾಯ್ದೆಯಡಿ ಐಟಿ ಕೇಸ್ ದಾಖಲಿಸಿತ್ತು. ಆದ್ರೆ, ಸುಪ್ರೀಂ ಕೋರ್ಟ್, 2016ರ ಕಾಯ್ದೆಯನ್ನು 2009 ರ ಕೃತ್ಯಕ್ಕೆ ಪೂರ್ವಾನ್ವಯಿಸುವಂತಿಲ್ಲವೆಂದು ತೀರ್ಪು ನೀಡಿತ್ತು. ಈ ತೀರ್ಪು ಆಧರಿಸಿ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿದ್ದ ಒಟ್ಟು ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳನ್ನು ಇತ್ಯಾರ್ಥಗೊಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ನಾಲ್ಕು ಪ್ರಕರಣಗಳಿಂದ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಓಬಳಾಪುರಂ ಮೈನಿಂಗ್‌ ಸೇರಿದಂತೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನರೆಡ್ಡಿ ಸೇರಿದಂತೆ ಹಲವರು ಅವರನ್ನು ಸಿಬಿಐ 2011ರ ಸೆ.5 ರಂದು ಬಂಧಿಸಿತ್ತು. ಬಳಿಕ ರೆಡ್ಡಿಗೆ 2015ರ ಜ.21ರಂದು ಸುಪ್ರೀಂ ಕೋರ್ಟ್‌ ಜಾಮೀನು ನೀಡಿತ್ತು. ಆದ್ರೆ, ಕೋರ್ಟ್ ಅನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿತ್ತು. ಆ ಷರತ್ತು ಈಗಲೂ ಮುಂದುವರಿದಿದೆ. ಏನಾದರೂ ಎಮರ್ಜೆನ್ಸಿ ಇದ್ದರೆ ರೆಡ್ಡಿ, ಸುಪ್ರೀಂ ಕೋರ್ಟ್​ ಅನುಮತಿ ಪಡೆದುಕೊಂಡು ಬಳ್ಳಾರಿ ಪ್ರವೇಶ ಮಾಡುತ್ತಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ ಜನಾರ್ದನ ರೆಡ್ಡಿಗೆ ಇದೀಗ ನಾಲ್ಕು ಕೇಸ್ ಕ್ಲೋಸ್ ಆಗಿದ್ದರಿಂದ ಅವರ ಹಾದಿ ಮತ್ತಷ್ಟು ಸುಗಮವಾದಂತಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:18 pm, Wed, 7 December 22

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ